• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯೋಗಿ ಕೋಮುವಾದಿಯಾಗಿದ್ದರೆ ಬರೀ ಆಜಾನ್ ಮೈಕ್ ಗಳನ್ನಷ್ಟೇ ತೆರವುಗೊಳಿಸಬಹುದಿತ್ತಲ್ಲವೇ?

TNN Correspondent Posted On January 8, 2018


  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಅಧಿಕಾರ ಸ್ವೀಕರಿಸಿದಾಗಿನಿಂದ ನೇರ ಹಾಗೂ ದಿಟ್ಟ ಕ್ರಮಗಳಿಗೆ ಮುಂದಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮತ್ತೊಂದು ದಿಟ್ಟ ಹಾಗೂ ಧರ್ಮ, ಪಕ್ಷಾತೀತ ನಿರ್ಧಾರ ಕೈಗೊಂಡಿದ್ದಾರೆ.

ಹೌದು, ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಿರುವ ಲೌಡ್ ಸ್ಪೀಕರ್ ಗಳನ್ನು ತೆರವುಗೊಳಿಸಬೇಕು ಎಂದು ಆದಿತ್ಯನಾಥರು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಜನವರಿ 20ರೊಳಗೆ ಎಲ್ಲ ಲೌಡ್ ಸ್ಪೀಕರ್ ತೆರವುಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಅಕ್ರಮ ಕಸಾಯಿಖಾನೆ ತೆರವು ಸೇರಿ ಹಲವು ನಿರ್ಧಾರ ಕೈಗೊಂಡಾಗ ಯೋದಿ ಆದಿತ್ಯನಾಥರು ಕೋಮುವಾದಿ ಎಂದು ಟೀಕಿಸಲಾಗಿತ್ತು. ಆದರೆ ಆದಿತ್ಯನಾಥರು ಪಕ್ಷ ಹಾಗೂ ಧರ್ಮಾತೀತವಾಗಿ ಯಾವುದೇ ಧಾರ್ಮಿಕ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಲೌಡ್ ಸ್ಪೀಕರ್ ಅಳವಡಿಸುವುದನ್ನು ನಿಷೇಧಿಸಿದ್ದಾರೆ ಹಾಗೂ ತೆರವುಗೊಳಿಸಲು ಸೂಚಿಸಿದ್ದಾರೆ.

ಧಾರ್ಮಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಅಳವಡಿಸಿ ಕಿರಿಕಿರಿ ಮಾಡುವುದು ಹಾಗೂ ಲೌಡ್ ಸ್ಪೀಕರ್ ದುರುಪಯೋಗಪಡಿಸಿಕೊಳ್ಳುತ್ತಿರುವ ಕುರಿತು ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ 2017ರ ಡಿಸೆಂಬರ್ ನಲ್ಲಿ ಅಲಹಾಬಾದ್ ಹೈಕೋರ್ಟ್ ನ ಲಖನೌ ಪೀಠ ಈ ಕುರಿತು ವಿವರಣೆ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿತ್ತು. ವಕೀಲ ಎಂ.ಎಲ್.ಯಾದವ್ ಅವರು ಲೌಡ್ ಸ್ಪೀಕರ್ ತೆರವುಗೊಳಿಸಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈಗ ರಾಜ್ಯ ಸರ್ಕಾರದ ಆದೇಶದಂತೆ ದೇವಾಲಯ, ಮಸೀದಿ, ಗುರುದ್ವಾರ ಹಾಗೂ ಚರ್ಚ್ ಗಳಲ್ಲಿ ಅಳವಡಿಸಿದ ಲೌಡ್ ಸ್ಪೀಕರ್ ತೆರವಾಗಲಿದ್ದು, ಸಾರ್ವಜನಿಕರಿಗೆ ಆಗುವ ಕಿರಿಕಿರಿ ತಪ್ಪಲಿದೆ ಹಾಗೂ ಈ ನಿರ್ಧಾರ ಯೋಗಿ ಆದಿತ್ಯನಾಥರ ದಿಟ್ಟತನ ಪ್ರದರ್ಶಿಸುತ್ತದೆ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search