• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಕೋಮುವಾದಿಯಾಗಿದ್ದರೆ ಬರೀ ಆಜಾನ್ ಮೈಕ್ ಗಳನ್ನಷ್ಟೇ ತೆರವುಗೊಳಿಸಬಹುದಿತ್ತಲ್ಲವೇ?

TNN Correspondent Posted On January 8, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಅಧಿಕಾರ ಸ್ವೀಕರಿಸಿದಾಗಿನಿಂದ ನೇರ ಹಾಗೂ ದಿಟ್ಟ ಕ್ರಮಗಳಿಗೆ ಮುಂದಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮತ್ತೊಂದು ದಿಟ್ಟ ಹಾಗೂ ಧರ್ಮ, ಪಕ್ಷಾತೀತ ನಿರ್ಧಾರ ಕೈಗೊಂಡಿದ್ದಾರೆ.

ಹೌದು, ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಿರುವ ಲೌಡ್ ಸ್ಪೀಕರ್ ಗಳನ್ನು ತೆರವುಗೊಳಿಸಬೇಕು ಎಂದು ಆದಿತ್ಯನಾಥರು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಜನವರಿ 20ರೊಳಗೆ ಎಲ್ಲ ಲೌಡ್ ಸ್ಪೀಕರ್ ತೆರವುಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಅಕ್ರಮ ಕಸಾಯಿಖಾನೆ ತೆರವು ಸೇರಿ ಹಲವು ನಿರ್ಧಾರ ಕೈಗೊಂಡಾಗ ಯೋದಿ ಆದಿತ್ಯನಾಥರು ಕೋಮುವಾದಿ ಎಂದು ಟೀಕಿಸಲಾಗಿತ್ತು. ಆದರೆ ಆದಿತ್ಯನಾಥರು ಪಕ್ಷ ಹಾಗೂ ಧರ್ಮಾತೀತವಾಗಿ ಯಾವುದೇ ಧಾರ್ಮಿಕ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಲೌಡ್ ಸ್ಪೀಕರ್ ಅಳವಡಿಸುವುದನ್ನು ನಿಷೇಧಿಸಿದ್ದಾರೆ ಹಾಗೂ ತೆರವುಗೊಳಿಸಲು ಸೂಚಿಸಿದ್ದಾರೆ.

ಧಾರ್ಮಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಅಳವಡಿಸಿ ಕಿರಿಕಿರಿ ಮಾಡುವುದು ಹಾಗೂ ಲೌಡ್ ಸ್ಪೀಕರ್ ದುರುಪಯೋಗಪಡಿಸಿಕೊಳ್ಳುತ್ತಿರುವ ಕುರಿತು ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ 2017ರ ಡಿಸೆಂಬರ್ ನಲ್ಲಿ ಅಲಹಾಬಾದ್ ಹೈಕೋರ್ಟ್ ನ ಲಖನೌ ಪೀಠ ಈ ಕುರಿತು ವಿವರಣೆ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿತ್ತು. ವಕೀಲ ಎಂ.ಎಲ್.ಯಾದವ್ ಅವರು ಲೌಡ್ ಸ್ಪೀಕರ್ ತೆರವುಗೊಳಿಸಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈಗ ರಾಜ್ಯ ಸರ್ಕಾರದ ಆದೇಶದಂತೆ ದೇವಾಲಯ, ಮಸೀದಿ, ಗುರುದ್ವಾರ ಹಾಗೂ ಚರ್ಚ್ ಗಳಲ್ಲಿ ಅಳವಡಿಸಿದ ಲೌಡ್ ಸ್ಪೀಕರ್ ತೆರವಾಗಲಿದ್ದು, ಸಾರ್ವಜನಿಕರಿಗೆ ಆಗುವ ಕಿರಿಕಿರಿ ತಪ್ಪಲಿದೆ ಹಾಗೂ ಈ ನಿರ್ಧಾರ ಯೋಗಿ ಆದಿತ್ಯನಾಥರ ದಿಟ್ಟತನ ಪ್ರದರ್ಶಿಸುತ್ತದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search