• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಕೋಮುವಾದಿಯಾಗಿದ್ದರೆ ಬರೀ ಆಜಾನ್ ಮೈಕ್ ಗಳನ್ನಷ್ಟೇ ತೆರವುಗೊಳಿಸಬಹುದಿತ್ತಲ್ಲವೇ?

TNN Correspondent Posted On January 8, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಅಧಿಕಾರ ಸ್ವೀಕರಿಸಿದಾಗಿನಿಂದ ನೇರ ಹಾಗೂ ದಿಟ್ಟ ಕ್ರಮಗಳಿಗೆ ಮುಂದಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮತ್ತೊಂದು ದಿಟ್ಟ ಹಾಗೂ ಧರ್ಮ, ಪಕ್ಷಾತೀತ ನಿರ್ಧಾರ ಕೈಗೊಂಡಿದ್ದಾರೆ.

ಹೌದು, ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಿರುವ ಲೌಡ್ ಸ್ಪೀಕರ್ ಗಳನ್ನು ತೆರವುಗೊಳಿಸಬೇಕು ಎಂದು ಆದಿತ್ಯನಾಥರು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಜನವರಿ 20ರೊಳಗೆ ಎಲ್ಲ ಲೌಡ್ ಸ್ಪೀಕರ್ ತೆರವುಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಅಕ್ರಮ ಕಸಾಯಿಖಾನೆ ತೆರವು ಸೇರಿ ಹಲವು ನಿರ್ಧಾರ ಕೈಗೊಂಡಾಗ ಯೋದಿ ಆದಿತ್ಯನಾಥರು ಕೋಮುವಾದಿ ಎಂದು ಟೀಕಿಸಲಾಗಿತ್ತು. ಆದರೆ ಆದಿತ್ಯನಾಥರು ಪಕ್ಷ ಹಾಗೂ ಧರ್ಮಾತೀತವಾಗಿ ಯಾವುದೇ ಧಾರ್ಮಿಕ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಲೌಡ್ ಸ್ಪೀಕರ್ ಅಳವಡಿಸುವುದನ್ನು ನಿಷೇಧಿಸಿದ್ದಾರೆ ಹಾಗೂ ತೆರವುಗೊಳಿಸಲು ಸೂಚಿಸಿದ್ದಾರೆ.

ಧಾರ್ಮಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಅಳವಡಿಸಿ ಕಿರಿಕಿರಿ ಮಾಡುವುದು ಹಾಗೂ ಲೌಡ್ ಸ್ಪೀಕರ್ ದುರುಪಯೋಗಪಡಿಸಿಕೊಳ್ಳುತ್ತಿರುವ ಕುರಿತು ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ 2017ರ ಡಿಸೆಂಬರ್ ನಲ್ಲಿ ಅಲಹಾಬಾದ್ ಹೈಕೋರ್ಟ್ ನ ಲಖನೌ ಪೀಠ ಈ ಕುರಿತು ವಿವರಣೆ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿತ್ತು. ವಕೀಲ ಎಂ.ಎಲ್.ಯಾದವ್ ಅವರು ಲೌಡ್ ಸ್ಪೀಕರ್ ತೆರವುಗೊಳಿಸಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈಗ ರಾಜ್ಯ ಸರ್ಕಾರದ ಆದೇಶದಂತೆ ದೇವಾಲಯ, ಮಸೀದಿ, ಗುರುದ್ವಾರ ಹಾಗೂ ಚರ್ಚ್ ಗಳಲ್ಲಿ ಅಳವಡಿಸಿದ ಲೌಡ್ ಸ್ಪೀಕರ್ ತೆರವಾಗಲಿದ್ದು, ಸಾರ್ವಜನಿಕರಿಗೆ ಆಗುವ ಕಿರಿಕಿರಿ ತಪ್ಪಲಿದೆ ಹಾಗೂ ಈ ನಿರ್ಧಾರ ಯೋಗಿ ಆದಿತ್ಯನಾಥರ ದಿಟ್ಟತನ ಪ್ರದರ್ಶಿಸುತ್ತದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search