• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರ ಪ್ರದೇಶದ ಅಲಿಘರ್ ಮುಸ್ಲಿಂ ವಿವಿ ಸಂಶೋಧನಾ ವಿದ್ಯಾರ್ಥಿ ಇದೀಗ ಭಯೋತ್ಪಾದಕ

TNN Correspondent Posted On January 9, 2018
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರ ಸರ್ಕಾರದ ನಿರಂತರ ಶ್ರಮ, ಸೈನ್ಯದ ಕಠಿಣ ನಿಯಮಗಳಿಂದ ಮೂಲವಾಹಿನಿಯತ್ತ ಕಾಶ್ಮೀರದ ಯುವಕರು ಬರುತ್ತಿರುವ ವೇಳೆಯೇ ಆಘಾತಕಾರಿ ಸುದ್ದಿಯೊಂದು ಬಂದಿದೆ. ಸಂಶೋಧನಾ ವಿದ್ಯಾರ್ಥಿಯೊಬ್ಬ ಉಗ್ರ ಸಂಘಟನೆಗೆ ಸೇರಿರುವ ಮಾಹಿತಿ ಹೊರ ಬಿದ್ದಿದೆ.

ಅಲಿಘರ್ ಮುಸ್ಲಿಂ ವಿಶ್ವಾವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಇದೀಗ ಭಯೋತ್ಪಾದಕರ ದಾಳಕೆ ಸಿಲುಕಿ, ದೇಶದ್ರೋಹಿಯಾಗಿ ಮಾರ್ಪಟ್ಟಿದ್ದಾನೆ. ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ಮುಸ್ಲಿಂ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಮನ್ನಾನ್ ಬಷೀರ್ ವನಿ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದಿನ್ ನ ಜತೆ ಕೈ ಜೋಡಿಸಿದ್ದಾನೆ.

26 ವರ್ಷದ ವನಿ ಉತ್ತರ ಕಾಶ್ಮೀರದ ಲೋಲಾಬ್ ಕಣಿವೆಯಿಂದ ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ. ನಂತರ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿರುವ ಚಿತ್ರದಲ್ಲಿ ವನಿ ಕೈಯಲ್ಲಿ ಎಕೆ 47 ಗನ್ ಹಿಡಿದುಕೊಂಡಿರುವುದು, ಆತ ಭಯೋತ್ಪಾದಕ ಜತೆ ಕೈ ಜೋಡಿಸಿರುವುದು ದೃಢಪಟ್ಟಿದೆ ಎನ್ನಲಾಗಿದೆ.

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಭೂವಿಜ್ಞಾನದ ವಿಷಯದಲ್ಲಿ ಸಂಶೋಧನೆ ನಡೆಸುತ್ತಿದ್ದ. 2016ರಲ್ಲಿ ಭೋಪಾಲ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪಡೆದಿದ್ದು, ಸಿವಿಲ್ ಸರ್ವಿಸ್ ಪರೀಕ್ಷೆ ಬರೆದು ಸಾಮಾಜಿಕ ಸೇವೆ ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದ. ಆದರೆ ಇದೀಗ ಭಯೋತ್ಪಾದಕರ ಮಾತಿಗೆ ಮರಳಾಗಿ ಉಗ್ರರೊಂದಿಗೆ ಕೈ ಜೋಡಿಸಿದ್ದಾನೆ.

ಉತ್ತರ ಪ್ರದೇಶದ ಮುಸ್ಲಿಂ ವಿವಿಯಿಂದ ಹೊರಬಂದವನೆ ಕೆಲ ದಿನಗಳ ವರೆಗೆ ದೆಹಲಿಯಲ್ಲಿದ್ದ, ನಂತರ ಕಾಶ್ಮೀರದ ಕುಪ್ವಾರದಲ್ಲಿರುವ ಲೋಲಾಬ್ ಕಣಿವೆಯಲ್ಲಿರುವ ಕುಟುಂಬದವರೊಂದಿಗೆ ಇದ್ದವನು ಇದಕ್ಕಿದಂತೆ ಮಾಯವಾಗಿದ್ದಾನೆ. ಇದರಿಂದ ಭೀತರಾದ ಕುಟುಂಬಸ್ಥರು ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಕೆಲ ದಿನಗಳಲ್ಲೇ ವನಿ ಕೈಯಲ್ಲಿ ಗನ್ ಹಿಡಿದು, ಅಲ್ಲಾ ಒಬ್ಬನೇ ಎಂಬಂತೆ ಬೆರಳು ತೋರಿಸಿರುವ ಚಿತ್ರ ಬಿಡುಗಡೆಯಾಗಿರುವುದು ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ. ಅಲ್ಲದೇ ದೇಶದ ವಿರುದ್ಧ ಮತ್ತೊಬ್ಬ ಭಯೋತ್ಪಾದಕನ ಸೃಷ್ಟಿಯಾಗಿರುವ ಭೀತಿ ಎದುರಾಗಿದೆ.

 

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search