• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಏ ಏನ್ ಚಮಚಾಗಿರಿ ಮಾಡ್ತೀರಿ?, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ವೈಜನಾಥ್ ತರಾಟೆ

TNN Correspondent Posted On January 10, 2018
0


0
Shares
  • Share On Facebook
  • Tweet It

ಬೆಂಗಳೂರು: ಇತ್ತೀಚೆಗೆ ಕರ್ನಾಟಕಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿರಬಾಗಿ ನಮಸ್ಕರಿಸಿದ್ದಕ್ಕೇ ಕೆಲವು ಕಾಂಗ್ರೆಸ್ಸಿಗರು ಇದು ಚಮಚಾಗಿರಿ ಎಂಬಂಥ ಮಾತನಾಡಿದ್ದರು. ಆದರೆ ಅಂಥಾದ್ದೇ ಮಾತುಗಳು ಈಗ ಕೆಪಿಸಿಸಿ ಅಧ್ಯಕ್ಷರಿಗೇ ಎದುರಾಗಿವೆ.

ಹೌದು, ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ವೈಜನಾಥ್ ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ “ಚಮಚಾಗಿರಿ ಮಾಡ್ತೀರಿ” ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಕೈಗೊಂಡ ಪ್ರವಾಸದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪರಮೇಶ್ವರ್ ಮಾತನಾಡುವ ವೇಳೆ ವೈಜನಾಥ್ ಪಾಟೀಲ್ ಸಭಾಂಗಣಕ್ಕೆ ಆಗಮಿಸಿದ್ದಾರೆ. ಅಲ್ಲದೆ ತಮ್ಮ ಬೇಡಿಕೆಯನ್ನು ಪರಮೇಶ್ವರ್ ಅವರ ಬಳಿ ಇಡಲು ಪಾಟೀಲ್ ಯತ್ನಿಸಿದ್ದಾರೆ. ಆಗ ಪರಮೇಶ್ವರ್ ಅವರು ಸುದ್ದಿಗೋಷ್ಠಿ ಬಳಿಕ ಮಾತನಾಡೋಣ ಎಂದು ಪಕ್ಕದಲ್ಲಿ ಕೂರಿಸಿದ್ದರು.

ಆದರೆ ಮಾಧ್ಯಮದವರು ಪರಮೇಶ್ವರ್ ಅವರನ್ನು ನೀವು ಬಿಜೆಪಿಗೆ ಸೇರುತ್ತೀರಿ ಎಂಬ ಮಾತುಗಳಿವೆ ಎಂದಾಗ ಪರಮೇಶ್ವರ್ ಕುಪಿತರಾಗಿದ್ದಾರೆ. ಆಗ ಮೈಕ್ ಬಿಟ್ಟು ವೇದಿಕೆಯಿಂದ ಕೆಳಗಿಳಿಯುವಾಗ ವೈಜನಾಥ್ ಪಾಟೀಲ್ ಅವರು, ಏನ್ರೀ ಅಧ್ಯಕ್ಷರೇ, ನಾನು ಮಾತನಾಡಲು ಬಂದಿದ್ದೇನೆ, ನೀವು ಹೊರಟಿದ್ದೀರಲ್ಲ ಎಂದು ಪ್ರಶ್ನಿಸಿದ್ದಾರೆ.

ಇಷ್ಟಾದರೂ ಪರಮೇಶ್ವರ್ ಅವರು ನಿಲ್ಲದ ಕಾರಣ, ಏಯ್ ಅಧ್ಯಕ್ಷ, ಎಂದು ಕೂಗಿದ್ದು, ಪರಮೇಶ್ವರ್ ಹೊರಟ ಕಾರಣ “ಏ ಚಮಚಾ” ಎಂದು ಕರೆದಿದ್ದಾರೆ. ಅಲ್ಲದೆ ಸುದ್ದಿಗೋಷ್ಠಿಯಲ್ಲೂ ಪರಮೇಶ್ವರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ವೈಜನಾಥ್, “ಧರಂ ಸಿಂಗ್ ಮಕ್ಕಳಿಗೆ ಮಾತ್ರ ಎಂಎಲ್ಎ, ಎಂಎಲ್ಸಿ ಟಿಕೆಟ್ ನೀಡುತ್ತೀರಿ. ನಮ್ಮ ಮಕ್ಕಳಿಗೇಕೆ ನೀಡುತ್ತಿಲ್ಲ? ನೀವೇನು ಚಮಚಾಗಿರಿ ಮಾಡುತ್ತಿದ್ದೀರಾ?” ಎಂದು ಗುಡುಗಿದ್ದಾರೆ.

ಇಷ್ಟೆಲ್ಲ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೈಜನಾಥ್ ಪಾಟೀಲ್, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ದಕ್ಷಿಣ ಕರ್ನಾಟಕದವರಾಗಿರುವುದರಿಂದ ಉತ್ತರ ಕರ್ನಾಟಕ ಅಭಿವೃದ್ಧಿಯಾಗುತ್ತಿಲ್ಲ. ಹಾಗಾಗಿ ಇವರಲ್ಲಿ ಒಬ್ಬರು ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಟ್ಟಿನಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಟಿಕೆಟ್ ಪಡೆಯಲು ಭಾರಿ ಲಾಬಿ ಹಾಗೂ ಬೇಡಿಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿರುವ ಭಿನ್ನಮತ ಬಹಿರಂಗವಾಗಿದೆ.

0
Shares
  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search