• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಏ ಏನ್ ಚಮಚಾಗಿರಿ ಮಾಡ್ತೀರಿ?, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ವೈಜನಾಥ್ ತರಾಟೆ

TNN Correspondent Posted On January 10, 2018
0


0
Shares
  • Share On Facebook
  • Tweet It

ಬೆಂಗಳೂರು: ಇತ್ತೀಚೆಗೆ ಕರ್ನಾಟಕಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿರಬಾಗಿ ನಮಸ್ಕರಿಸಿದ್ದಕ್ಕೇ ಕೆಲವು ಕಾಂಗ್ರೆಸ್ಸಿಗರು ಇದು ಚಮಚಾಗಿರಿ ಎಂಬಂಥ ಮಾತನಾಡಿದ್ದರು. ಆದರೆ ಅಂಥಾದ್ದೇ ಮಾತುಗಳು ಈಗ ಕೆಪಿಸಿಸಿ ಅಧ್ಯಕ್ಷರಿಗೇ ಎದುರಾಗಿವೆ.

ಹೌದು, ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ವೈಜನಾಥ್ ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ “ಚಮಚಾಗಿರಿ ಮಾಡ್ತೀರಿ” ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಕೈಗೊಂಡ ಪ್ರವಾಸದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪರಮೇಶ್ವರ್ ಮಾತನಾಡುವ ವೇಳೆ ವೈಜನಾಥ್ ಪಾಟೀಲ್ ಸಭಾಂಗಣಕ್ಕೆ ಆಗಮಿಸಿದ್ದಾರೆ. ಅಲ್ಲದೆ ತಮ್ಮ ಬೇಡಿಕೆಯನ್ನು ಪರಮೇಶ್ವರ್ ಅವರ ಬಳಿ ಇಡಲು ಪಾಟೀಲ್ ಯತ್ನಿಸಿದ್ದಾರೆ. ಆಗ ಪರಮೇಶ್ವರ್ ಅವರು ಸುದ್ದಿಗೋಷ್ಠಿ ಬಳಿಕ ಮಾತನಾಡೋಣ ಎಂದು ಪಕ್ಕದಲ್ಲಿ ಕೂರಿಸಿದ್ದರು.

ಆದರೆ ಮಾಧ್ಯಮದವರು ಪರಮೇಶ್ವರ್ ಅವರನ್ನು ನೀವು ಬಿಜೆಪಿಗೆ ಸೇರುತ್ತೀರಿ ಎಂಬ ಮಾತುಗಳಿವೆ ಎಂದಾಗ ಪರಮೇಶ್ವರ್ ಕುಪಿತರಾಗಿದ್ದಾರೆ. ಆಗ ಮೈಕ್ ಬಿಟ್ಟು ವೇದಿಕೆಯಿಂದ ಕೆಳಗಿಳಿಯುವಾಗ ವೈಜನಾಥ್ ಪಾಟೀಲ್ ಅವರು, ಏನ್ರೀ ಅಧ್ಯಕ್ಷರೇ, ನಾನು ಮಾತನಾಡಲು ಬಂದಿದ್ದೇನೆ, ನೀವು ಹೊರಟಿದ್ದೀರಲ್ಲ ಎಂದು ಪ್ರಶ್ನಿಸಿದ್ದಾರೆ.

ಇಷ್ಟಾದರೂ ಪರಮೇಶ್ವರ್ ಅವರು ನಿಲ್ಲದ ಕಾರಣ, ಏಯ್ ಅಧ್ಯಕ್ಷ, ಎಂದು ಕೂಗಿದ್ದು, ಪರಮೇಶ್ವರ್ ಹೊರಟ ಕಾರಣ “ಏ ಚಮಚಾ” ಎಂದು ಕರೆದಿದ್ದಾರೆ. ಅಲ್ಲದೆ ಸುದ್ದಿಗೋಷ್ಠಿಯಲ್ಲೂ ಪರಮೇಶ್ವರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ವೈಜನಾಥ್, “ಧರಂ ಸಿಂಗ್ ಮಕ್ಕಳಿಗೆ ಮಾತ್ರ ಎಂಎಲ್ಎ, ಎಂಎಲ್ಸಿ ಟಿಕೆಟ್ ನೀಡುತ್ತೀರಿ. ನಮ್ಮ ಮಕ್ಕಳಿಗೇಕೆ ನೀಡುತ್ತಿಲ್ಲ? ನೀವೇನು ಚಮಚಾಗಿರಿ ಮಾಡುತ್ತಿದ್ದೀರಾ?” ಎಂದು ಗುಡುಗಿದ್ದಾರೆ.

ಇಷ್ಟೆಲ್ಲ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೈಜನಾಥ್ ಪಾಟೀಲ್, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ದಕ್ಷಿಣ ಕರ್ನಾಟಕದವರಾಗಿರುವುದರಿಂದ ಉತ್ತರ ಕರ್ನಾಟಕ ಅಭಿವೃದ್ಧಿಯಾಗುತ್ತಿಲ್ಲ. ಹಾಗಾಗಿ ಇವರಲ್ಲಿ ಒಬ್ಬರು ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಟ್ಟಿನಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಟಿಕೆಟ್ ಪಡೆಯಲು ಭಾರಿ ಲಾಬಿ ಹಾಗೂ ಬೇಡಿಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿರುವ ಭಿನ್ನಮತ ಬಹಿರಂಗವಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search