• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಕನಸಿಗೆ ಇಂಬು, ಲಕ್ಷ ಗ್ರಾಪಂಗಳಿಗೆ ಇಂಟರ್ನೆಟ್!

TNN Correspondent Posted On January 10, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬರುತ್ತಲೇ ಸ್ವಚ್ಛ ಭಾರತದ ಜತೆಗೆ ಡಿಜಿಟಲ್ ಇಂಡಿಯಾ ಯೋಜನೆ ಜಾರಿಗೊಳಿಸಿತ್ತು. ಆರಂಭದಲ್ಲಿ ಇದರಿಂದ ಜನರಿಗೆ ಏನು ಪ್ರಯೋಜನ ಎಂಬ ಟೀಕೆಗಳು ಸಹ ವ್ಯಕ್ತವಾಗಿದ್ದವು. ಆದರೆ ಆ ಟೀಕೆಗಳಿಗ ಮೌನ ತಾಳುವ ಸಮಯ ಬಂದೊದಗಿದೆ.

ಹೌದು, ಕೇಂದ್ರ ಸರ್ಕಾರ ಭಾರತ್ ನೆಟ್ ಪ್ರೋಗ್ರಾಂ ಯೋಜನೆ ಸಾಫಲ್ಯ ಸಾಧಿಸಿದ್ದು, ಇದುವರೆಗೆ ದೇಶದ ಒಂದು ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಇಂಟರ್ ನೆಟ್ ಸಂಪರ್ಕ ಕಲ್ಪಿಸಲಾಗಿದೆ.

ಈ ಕುರಿತು ಕೇಂದ್ರ ಟೆಲಿಕಾಂ ಸಚಿವ ಮನೋಜ್ ಸಿನ್ಹಾ ಮಾಹಿತಿ ನೀಡಿದ್ದು, 2017ರ ಡಿಸೆಂಬರ್ 28ವರೆಗೆ ದೇಶಾದ್ಯಂತ 1,01,370 ಗ್ರಾಮ ಪಂಚಾಯಿತಿಗಳಿಗೆ ಜಿಪಿಎಸ್ ಮೂಲಕ ಅಂತರ್ಜಾಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೊದಲ ಹಂತವಾಗಿ ಒಂದು ಲಕ್ಷ ಗ್ರಾಪಂಗಳಿಗೆ ಅಂತರ್ಜಾಲ ಸೌಲಭ್ಯ ಕಲ್ಪಿಸಲಾಗಿದ್ದು, ಇದು ಮೊದಲು 70 ಸಾವಿರ ಪಂಚಾಯಿತಿಗಳಿಗೆ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿತ್ತು. ಆದರೆ ಯೋಜನೆ ನಿರೀಕ್ಷೆಗೂ ಮೀರಿ ಯಶಸ್ಸು ಸಾಧಿಸಿದ ಹಿನ್ನೆಲೆಯಲ್ಲಿ ಎರಡನೇ ಹಂತದಲ್ಲಿ 2018ರ ಡಿಸೆಂಬರ್ ವೇಳೆಗೆ ಸುಮಾರು 1.5 ಲಕ್ಷ ಗ್ರಾಪಂಗಳಿಗೆ ಅಂತರ್ಜಾಲ ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಗ್ರಾಮ ಪಂಚಾಯಿತಿಗಳಿಗೆ ಅಂತರ್ಜಾಲ ಸೌಲಭ್ಯ ಕಲ್ಪಿಸುವುದರಿಂದ ಕಡತಗಳ ಗಣಕಯಂತ್ರೀಕರಣ, ಸೌಲಭ್ಯಗಳ ಸಮರ್ಪಕ ವಿತರಣೆ ಮಾಹಿತಿ ಸಂಗ್ರಹ, ಪಾರದರ್ಶಕತೆ, ಆಧಾರ್ ಜೋಡಣೆ, ಆನ್ ಲೈನ್ ವ್ಯವಹಾರ ಸೇರಿ ಹಲವು ಉಪಯೋಗಗಳಾಗಲಿದೆ. ಅಲ್ಲದೆ ಇದು ಡಿಜಿಟಲ್ ಇಂಡಿಯಾ ಯೋಜನೆಗೆ ಪೂರಕವಾಗಿ ಕೆಲಸ ಮಾಡುವುದರಿಂದ ಗ್ರಾಮೀಣ ಜನರೂ ಅಂತರ್ಜಾಲ ಸಾಕ್ಷರರಾಗಲು ಅನುಕೂಲ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search