• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಕನಸಿಗೆ ಇಂಬು, ಲಕ್ಷ ಗ್ರಾಪಂಗಳಿಗೆ ಇಂಟರ್ನೆಟ್!

TNN Correspondent Posted On January 10, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬರುತ್ತಲೇ ಸ್ವಚ್ಛ ಭಾರತದ ಜತೆಗೆ ಡಿಜಿಟಲ್ ಇಂಡಿಯಾ ಯೋಜನೆ ಜಾರಿಗೊಳಿಸಿತ್ತು. ಆರಂಭದಲ್ಲಿ ಇದರಿಂದ ಜನರಿಗೆ ಏನು ಪ್ರಯೋಜನ ಎಂಬ ಟೀಕೆಗಳು ಸಹ ವ್ಯಕ್ತವಾಗಿದ್ದವು. ಆದರೆ ಆ ಟೀಕೆಗಳಿಗ ಮೌನ ತಾಳುವ ಸಮಯ ಬಂದೊದಗಿದೆ.

ಹೌದು, ಕೇಂದ್ರ ಸರ್ಕಾರ ಭಾರತ್ ನೆಟ್ ಪ್ರೋಗ್ರಾಂ ಯೋಜನೆ ಸಾಫಲ್ಯ ಸಾಧಿಸಿದ್ದು, ಇದುವರೆಗೆ ದೇಶದ ಒಂದು ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಇಂಟರ್ ನೆಟ್ ಸಂಪರ್ಕ ಕಲ್ಪಿಸಲಾಗಿದೆ.

ಈ ಕುರಿತು ಕೇಂದ್ರ ಟೆಲಿಕಾಂ ಸಚಿವ ಮನೋಜ್ ಸಿನ್ಹಾ ಮಾಹಿತಿ ನೀಡಿದ್ದು, 2017ರ ಡಿಸೆಂಬರ್ 28ವರೆಗೆ ದೇಶಾದ್ಯಂತ 1,01,370 ಗ್ರಾಮ ಪಂಚಾಯಿತಿಗಳಿಗೆ ಜಿಪಿಎಸ್ ಮೂಲಕ ಅಂತರ್ಜಾಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೊದಲ ಹಂತವಾಗಿ ಒಂದು ಲಕ್ಷ ಗ್ರಾಪಂಗಳಿಗೆ ಅಂತರ್ಜಾಲ ಸೌಲಭ್ಯ ಕಲ್ಪಿಸಲಾಗಿದ್ದು, ಇದು ಮೊದಲು 70 ಸಾವಿರ ಪಂಚಾಯಿತಿಗಳಿಗೆ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿತ್ತು. ಆದರೆ ಯೋಜನೆ ನಿರೀಕ್ಷೆಗೂ ಮೀರಿ ಯಶಸ್ಸು ಸಾಧಿಸಿದ ಹಿನ್ನೆಲೆಯಲ್ಲಿ ಎರಡನೇ ಹಂತದಲ್ಲಿ 2018ರ ಡಿಸೆಂಬರ್ ವೇಳೆಗೆ ಸುಮಾರು 1.5 ಲಕ್ಷ ಗ್ರಾಪಂಗಳಿಗೆ ಅಂತರ್ಜಾಲ ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಗ್ರಾಮ ಪಂಚಾಯಿತಿಗಳಿಗೆ ಅಂತರ್ಜಾಲ ಸೌಲಭ್ಯ ಕಲ್ಪಿಸುವುದರಿಂದ ಕಡತಗಳ ಗಣಕಯಂತ್ರೀಕರಣ, ಸೌಲಭ್ಯಗಳ ಸಮರ್ಪಕ ವಿತರಣೆ ಮಾಹಿತಿ ಸಂಗ್ರಹ, ಪಾರದರ್ಶಕತೆ, ಆಧಾರ್ ಜೋಡಣೆ, ಆನ್ ಲೈನ್ ವ್ಯವಹಾರ ಸೇರಿ ಹಲವು ಉಪಯೋಗಗಳಾಗಲಿದೆ. ಅಲ್ಲದೆ ಇದು ಡಿಜಿಟಲ್ ಇಂಡಿಯಾ ಯೋಜನೆಗೆ ಪೂರಕವಾಗಿ ಕೆಲಸ ಮಾಡುವುದರಿಂದ ಗ್ರಾಮೀಣ ಜನರೂ ಅಂತರ್ಜಾಲ ಸಾಕ್ಷರರಾಗಲು ಅನುಕೂಲ.

0
Shares
  • Share On Facebook
  • Tweet It




Trending Now
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
  • Popular Posts

    • 1
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 2
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 3
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 4
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 5
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!

  • Privacy Policy
  • Contact
© Tulunadu Infomedia.

Press enter/return to begin your search