• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಗೆ ಭಾರಿ ಆಘಾತ, ಮೈತ್ರಿ ರಚನೆ ಮಾತುಕತೆ ವ್ಯರ್ಥ ಎಂದ ಅಖಿಲೇಶ್ ಯಾದವ್

TNN Correspondent Posted On January 10, 2018
0


0
Shares
  • Share On Facebook
  • Tweet It

ಲಖನೌ: ಕಾಂಗ್ರೆಸ್ ಮುಕ್ತ ಭಾರತದ ಸನಿಹದಲ್ಲಿರುವ ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿರುವಾಗಲೇ ಮತ್ತೊಂದು ಆಘಾತಕಾರಿ ಸುದ್ದಿ ಹೊರ ಬಿದ್ದಿದೆ. ಇದರಿಂದ ಕಾಂಗ್ರೆಸ್ ಮತ್ತು ರಾಹುಲ್ ಗ್ಯಾಂಗ್ ಒಂದು ಕ್ಷಣ ಅವಕ್ಕಾಗಿದ್ದು, ಭವಿಷ್ಯದ ಚಿಂತೆಯಲ್ಲಿ ದಿನದೂಡುತ್ತಿದೆ. ದೇಶದ ಬಹುದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸಾಥ್ ನೀಡಿದ್ದ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಇದೀಗ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾತುಕತೆ ನಡೆಸುವುದು ವ್ಯರ್ಥ ಎಂದು ಹೇಳಿದ್ದಾರೆ.

ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ‘2019ರಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಹೆಚ್ಚು ಸದಸ್ಯರನ್ನು ಗೆಲ್ಲಿಸಲು ಶ್ರಮಿಸಲಾಗುತ್ತಿದೆ. ಆದ್ದರಿಂದ ಕಾಂಗ್ರೆಸ್ ಸೇರಿ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದು ವ್ಯರ್ಥ ಎಂದು ಅಖಿಲೇಶ್ ಹೇಳಿದ್ದಾರೆ.

ಸ್ಥಾನ ಹಂಚಿಕೆ ಮತ್ತು ಮೈತ್ರಿ ಮಾತುಕತೆಯಿಂದ ಸಮಯ ವ್ಯರ್ಥವಾಗುತ್ತಿದೆ. 2017ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಕಾಂಗ್ರೆಸ್ ನೊಂದಿಗೆ ಕೈ ಜೋಡಿಸಿ, ಚುನಾವಣೆ ಎದುರಿಸಿದ್ದರು. 403 ಸ್ಥಾನಗಳಲ್ಲಿ ಬಿಜೆಪಿ 325, ಸಮಾಜವಾದಿ ಪಕ್ಷ 47 ಮತ್ತು ಕಾಂಗ್ರೆಸ್ ಕೇವಲ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

2019ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಿಂದ ದೇಶಕ್ಕೆ ಹೊಸ ಸಂದೇಶ ಹೊರಬರಲಿದೆ. ಆದ್ದರಿಂದ ಪ್ರಸ್ತುತ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಇಲ್ಲ. ಈ ಮಾತುಕತೆಗಳು ಸಮಯ ಹಾಳು ಮಾಡುತ್ತಿದ್ದು, ನಮ್ಮನ್ನು ಗೊಂದಲಕ್ಕೆ ಇಡು ಮಾಡುತ್ತವೆ. ಆದ್ದರಿಂದ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಎಂದು ಅಖಿಲೇಶ್ ಸ್ಪಷ್ಟಪಡಿಸಿದ್ದಾರೆ.

ಶತಾಯ ಗತಾಯ 2019ರಲ್ಲಿ ಬಿಜೆಪಿಯನ್ನು ಲೋಕಸಭೆ ಚುನಾವಣೆಯಲ್ಲಿ ಸೋಲಿಸಬೇಕು ಎಂದು ಹೆಣಗಾಡುತ್ತಿರುವ ರಾಹುಲ್ ಪಾಳಯಕ್ಕೆ ಈ ಸುದ್ದಿ ಭಾರಿ ಆಘಾತ ಉಂಟು ಮಾಡಿದೆ. ಉತ್ತರ ಪ್ರದೇಶದಲ್ಲಿ ವಿಜಯ ಸಾಧಿಸಿದವರು ಮಾತ್ರ ಲೋಕಸಭೆಯಲ್ಲಿ ಚುಕ್ಕಾಣಿ ಹಿಡಿಯುತ್ತಾರೆ ಎಂಬುದು ಮಾತ್ರ ಶತಃಸಿದ್ಧ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search