• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಗೆ ಭಾರಿ ಆಘಾತ, ಮೈತ್ರಿ ರಚನೆ ಮಾತುಕತೆ ವ್ಯರ್ಥ ಎಂದ ಅಖಿಲೇಶ್ ಯಾದವ್

TNN Correspondent Posted On January 10, 2018
0


0
Shares
  • Share On Facebook
  • Tweet It

ಲಖನೌ: ಕಾಂಗ್ರೆಸ್ ಮುಕ್ತ ಭಾರತದ ಸನಿಹದಲ್ಲಿರುವ ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿರುವಾಗಲೇ ಮತ್ತೊಂದು ಆಘಾತಕಾರಿ ಸುದ್ದಿ ಹೊರ ಬಿದ್ದಿದೆ. ಇದರಿಂದ ಕಾಂಗ್ರೆಸ್ ಮತ್ತು ರಾಹುಲ್ ಗ್ಯಾಂಗ್ ಒಂದು ಕ್ಷಣ ಅವಕ್ಕಾಗಿದ್ದು, ಭವಿಷ್ಯದ ಚಿಂತೆಯಲ್ಲಿ ದಿನದೂಡುತ್ತಿದೆ. ದೇಶದ ಬಹುದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸಾಥ್ ನೀಡಿದ್ದ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಇದೀಗ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾತುಕತೆ ನಡೆಸುವುದು ವ್ಯರ್ಥ ಎಂದು ಹೇಳಿದ್ದಾರೆ.

ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ‘2019ರಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಹೆಚ್ಚು ಸದಸ್ಯರನ್ನು ಗೆಲ್ಲಿಸಲು ಶ್ರಮಿಸಲಾಗುತ್ತಿದೆ. ಆದ್ದರಿಂದ ಕಾಂಗ್ರೆಸ್ ಸೇರಿ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದು ವ್ಯರ್ಥ ಎಂದು ಅಖಿಲೇಶ್ ಹೇಳಿದ್ದಾರೆ.

ಸ್ಥಾನ ಹಂಚಿಕೆ ಮತ್ತು ಮೈತ್ರಿ ಮಾತುಕತೆಯಿಂದ ಸಮಯ ವ್ಯರ್ಥವಾಗುತ್ತಿದೆ. 2017ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಕಾಂಗ್ರೆಸ್ ನೊಂದಿಗೆ ಕೈ ಜೋಡಿಸಿ, ಚುನಾವಣೆ ಎದುರಿಸಿದ್ದರು. 403 ಸ್ಥಾನಗಳಲ್ಲಿ ಬಿಜೆಪಿ 325, ಸಮಾಜವಾದಿ ಪಕ್ಷ 47 ಮತ್ತು ಕಾಂಗ್ರೆಸ್ ಕೇವಲ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

2019ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಿಂದ ದೇಶಕ್ಕೆ ಹೊಸ ಸಂದೇಶ ಹೊರಬರಲಿದೆ. ಆದ್ದರಿಂದ ಪ್ರಸ್ತುತ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಇಲ್ಲ. ಈ ಮಾತುಕತೆಗಳು ಸಮಯ ಹಾಳು ಮಾಡುತ್ತಿದ್ದು, ನಮ್ಮನ್ನು ಗೊಂದಲಕ್ಕೆ ಇಡು ಮಾಡುತ್ತವೆ. ಆದ್ದರಿಂದ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಎಂದು ಅಖಿಲೇಶ್ ಸ್ಪಷ್ಟಪಡಿಸಿದ್ದಾರೆ.

ಶತಾಯ ಗತಾಯ 2019ರಲ್ಲಿ ಬಿಜೆಪಿಯನ್ನು ಲೋಕಸಭೆ ಚುನಾವಣೆಯಲ್ಲಿ ಸೋಲಿಸಬೇಕು ಎಂದು ಹೆಣಗಾಡುತ್ತಿರುವ ರಾಹುಲ್ ಪಾಳಯಕ್ಕೆ ಈ ಸುದ್ದಿ ಭಾರಿ ಆಘಾತ ಉಂಟು ಮಾಡಿದೆ. ಉತ್ತರ ಪ್ರದೇಶದಲ್ಲಿ ವಿಜಯ ಸಾಧಿಸಿದವರು ಮಾತ್ರ ಲೋಕಸಭೆಯಲ್ಲಿ ಚುಕ್ಕಾಣಿ ಹಿಡಿಯುತ್ತಾರೆ ಎಂಬುದು ಮಾತ್ರ ಶತಃಸಿದ್ಧ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search