• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತ ಸಬ್ ಕಾ ಸಾತ್, ಸಬ್ ಕಾ ವಿಕಾಸ್ ತತ್ವದಡಿಯಲ್ಲಿ ಜಾಗತಿಕ ನಾಯಕನಾಗುತ್ತಿದೆ ಎಂದು ಹೇಳಿದವರಾರು ಗೊತ್ತೆ?

TNN Correspondent Posted On January 10, 2018


  • Share On Facebook
  • Tweet It

ದೆಹಲಿ: ದೇಶದ ಜನರ ಟೀಕೆ, ರಾಹುಲ್ ಗಾಂಧಿಯವರ ಬೇಕಾಬಿಟ್ಟಿ ಹೇಳಿಕೆ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ಆಡಳಿತ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಲೇ ಇದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ದೊರೆತಿದೆ.

ವರ್ಲ್ಡ್ ಎಕನಾಮಿಕ್ ಫೋರಂನ ಸಂಸ್ಥಾಪಕ ಹಾಗೂ ಕಾರ್ಯನಿರ್ವಾಹಕ ಅಧ್ಯಕ್ಷ ಕ್ಲೌಸ್ ಶ್ಚ್ವಾಬ್ ಅವರೇ ಈ ಮಾತನ್ನು ಹೇಳಿದ್ದು, ಪ್ರಧಾನಿ ಮೋದಿ ಅವರು ಜಾರಿಗೆ ತಂದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಯೋಜನೆಯಿಂದ ಭಾರತ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೋರಂನ ವೆಬ್ ಸೈಟ್ ನಲ್ಲಿ ಉಲ್ಲೇಖಿಸಿರುವ ಅವರು, ಭಾರತ ಇತ್ತೀಚೆಗೆ ಭಾರಿ ಪ್ರಮಾಣದ ಸುಧಾರಣೆ ಹೊಂದುತ್ತಿದೆ. ಹಲವು ಯೋಜನೆಗಳು ದೇಶದ ಗತಿ ಬದಲಿಸುತ್ತವೆ. ಅವುಗಳಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಯೋಜನೆ ಸಹ ಒಂದು ಎಂದು ತಿಳಿಸಿದ್ದಾರೆ.

ಈ ಯೋಜನೆಗಳಿಂದ ಭಾರತ ಸಮೃದ್ಧವಾಗಿ ಅಭಿವೃದ್ಧಿ ಹೊಂದುವ ಜತೆಗೆ ಯಾವುದೇ ಗಂಡಾಂತರ ಹಾಗೂ ಕಠಿಣ ಪರಿಸ್ಥಿತಿಯನ್ನು ಸಹ ಎದುರಿಸುವ ಛಾತಿ ಹೊಂದುತ್ತದೆ ಎಂದು ಶ್ಲಾಘಿಸಿದ್ದಾರೆ.

ಜನವರಿ 23-26ರವರೆಗೆ ಸ್ವಿಡ್ಜರ್ ಲೆಂಡ್ ನಲ್ಲಿ ನಡೆಯುವ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ ಬರೋಬ್ಬರಿ 2 ದಶಕಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಪಾಲ್ಗೊಳ್ಳುವ ದೃಷ್ಟಿಯಿಂದ ಫೋರಂ ಅಧ್ಯಕ್ಷರ ಮಾತು ಭಾರತಕ್ಕೆ ಬಲ ಬಂದಂತಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search