• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೇರೆ ಮದುವೆಯಾಗುವೆ, ತಲಾಖ್ ಗೆ ಒಪ್ಪಿಗೆ ಎಂದು ಪತ್ನಿಗೆ ಕಿರುಕುಳ, ಕೇಳೋರಿಲ್ಲವೇ ಅನ್ಯಾಯ?

TNN Correspondent Posted On January 11, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ದಲಿತರ ಮೇಲೆ ಹಲ್ಲೆಯಾದರೆ, ಕಿರುಕುಳವಾದರೆ ಪ್ರಗತಿಪರರೆನಿಸಿಕೊಂಡವರು, ಬುದ್ಧಿಜೀವಿಗಳು ಸೀದಾ ನರೇಂದ್ರ ಮೋದಿ ಅವರನ್ನೇ ಟಾರ್ಗೆಟ್ ಮಾಡುತ್ತಾರೆ. ಆದರೆ ಅದೇ ಮುಸ್ಲಿಂ ಮಹಿಳೆಯರಿಗೆ ಎಷ್ಟೇ ಅನ್ಯಾಯವಾಗಲಿ, ಆಗ ಯಾರೂ ಸೊಲ್ಲೆತ್ತುವುದಿಲ್ಲ. ಮುಸ್ಲಿಂ ಮಹಿಳೆಯರಿಗೆ ನ್ಯಾಯಬೇಕು ಎನ್ನುವುದಿಲ್ಲ. ಪ್ರಕಾಶ್ ರೈ ಅಂಥವರೂ ಯಾವ ಕತ್ತಲಿಗೆ ಸರಿಯುತ್ತಾರೋ ಗೊತ್ತಿಲ್ಲ? ಮತ್ತೆ ಇವರಿಗೆ ಪ್ರಗತಿಪರರು ಎಂಬ ಹೆಸರು ಬೇರೆ ಕೇಡು.

ಇಂಥಾದ್ದೇ ಒಂದು ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಆದರೂ ಯಾರೂ ಮಾತನಾಡುತ್ತಿಲ್ಲ. ಹೌದು, ಪಶ್ಚಿಮ ಬಂಗಾಳದ ಬುರಿಯಿಪುರ್ ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ತಲಾಖ್ ಗೆ ಒಪ್ಪಿಕೋ ಎಂದು ಕಿರುಕುಳ ನೀಡಿದ್ದಾನೆ.

ನೂರ್ ನೆಹರಾ ಬಿವಿ ಎಂಬ ಮುಸ್ಲಿಂ ಮಹಿಳೆಗೆ ಆಕೆಯ ಪತಿ ಸಬೀರ್ ತಲಾಖ್ ನೀಡಿದ್ದು, ಅದಕ್ಕೆ ಒಪ್ಪಿಕೊಳ್ಳುವಂತೆ ಸಿಗರೇಟಿನಿಂದ ಸುಟ್ಟಿದ್ದಾನೆ. ಈ ಕುರಿತು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ಸುಮಾರು 6 ವರ್ಷಗಳ ಹಿಂದೆ ಇಬ್ಬರೂ ಮದುವೆಯಾಗಿದ್ದು, ಆರಂಭದಿಂದಲೂ ಸಬೀರ್ ಕಿರುಕುಳ ನೀಡುತ್ತಿದ್ದಾನಂತೆ. ಅಲ್ಲದೆ ಮದುವೆ ವೇಳೆ 30 ಸಾವಿರ ರುಪಾಯಿ ವರದಕ್ಷಿಣೆ ನೀಡಿದ್ದು,ಮತ್ತೆ ತರುವಂತೆ ಪೀಡಿಸುತ್ತಿದ್ದಾನೆ. ಹಾಗಾಗಿ ನಾನೇ ಇಬ್ಬರು ಮಕ್ಕಳನ್ನು ಕರೆದುಕೊಂಡು ದೂರವಾದೆ. ಆದರೂ ಮನೆಗೆ ಬರುವ ಸಬೀರ್ ತಲಾಖ್ ಗೆ ಒಪ್ಪಿಗೆ ಸೂಚಿಸು ಎಂದು ಕಿರುಕುಳ ನೀಡುತ್ತಿದ್ದಾನೆ ಎಂದು ಮಹಿಳೆ ಬುರುಯಿಪುರ್ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಒಟ್ಟಿನಲ್ಲಿ ಮುಸ್ಲಿಂ ಮಹಿಳೆಯರಿಗೆ ನ್ಯಾಯ ಸಿಗಲಿ ಎಂದು ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ನಿಷೇಧಕ್ಕೆ ಮುಂದಾಗಿದ್ದರೂ, ತಲಾಖ್ ಎಂಬ ಪೀಡೆ ಇನ್ನೂ ಮುಸ್ಲಿಂ ಮಹಿಳೆಯರಿಗೆ ಕಂಟಕವಾಗುತ್ತಲೇ ಇದೆ ಎಂಬುದು ಬೇಸರದ ಸಂಗತಿ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search