• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೇರೆ ಮದುವೆಯಾಗುವೆ, ತಲಾಖ್ ಗೆ ಒಪ್ಪಿಗೆ ಎಂದು ಪತ್ನಿಗೆ ಕಿರುಕುಳ, ಕೇಳೋರಿಲ್ಲವೇ ಅನ್ಯಾಯ?

TNN Correspondent Posted On January 11, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ದಲಿತರ ಮೇಲೆ ಹಲ್ಲೆಯಾದರೆ, ಕಿರುಕುಳವಾದರೆ ಪ್ರಗತಿಪರರೆನಿಸಿಕೊಂಡವರು, ಬುದ್ಧಿಜೀವಿಗಳು ಸೀದಾ ನರೇಂದ್ರ ಮೋದಿ ಅವರನ್ನೇ ಟಾರ್ಗೆಟ್ ಮಾಡುತ್ತಾರೆ. ಆದರೆ ಅದೇ ಮುಸ್ಲಿಂ ಮಹಿಳೆಯರಿಗೆ ಎಷ್ಟೇ ಅನ್ಯಾಯವಾಗಲಿ, ಆಗ ಯಾರೂ ಸೊಲ್ಲೆತ್ತುವುದಿಲ್ಲ. ಮುಸ್ಲಿಂ ಮಹಿಳೆಯರಿಗೆ ನ್ಯಾಯಬೇಕು ಎನ್ನುವುದಿಲ್ಲ. ಪ್ರಕಾಶ್ ರೈ ಅಂಥವರೂ ಯಾವ ಕತ್ತಲಿಗೆ ಸರಿಯುತ್ತಾರೋ ಗೊತ್ತಿಲ್ಲ? ಮತ್ತೆ ಇವರಿಗೆ ಪ್ರಗತಿಪರರು ಎಂಬ ಹೆಸರು ಬೇರೆ ಕೇಡು.

ಇಂಥಾದ್ದೇ ಒಂದು ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಆದರೂ ಯಾರೂ ಮಾತನಾಡುತ್ತಿಲ್ಲ. ಹೌದು, ಪಶ್ಚಿಮ ಬಂಗಾಳದ ಬುರಿಯಿಪುರ್ ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ತಲಾಖ್ ಗೆ ಒಪ್ಪಿಕೋ ಎಂದು ಕಿರುಕುಳ ನೀಡಿದ್ದಾನೆ.

ನೂರ್ ನೆಹರಾ ಬಿವಿ ಎಂಬ ಮುಸ್ಲಿಂ ಮಹಿಳೆಗೆ ಆಕೆಯ ಪತಿ ಸಬೀರ್ ತಲಾಖ್ ನೀಡಿದ್ದು, ಅದಕ್ಕೆ ಒಪ್ಪಿಕೊಳ್ಳುವಂತೆ ಸಿಗರೇಟಿನಿಂದ ಸುಟ್ಟಿದ್ದಾನೆ. ಈ ಕುರಿತು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ಸುಮಾರು 6 ವರ್ಷಗಳ ಹಿಂದೆ ಇಬ್ಬರೂ ಮದುವೆಯಾಗಿದ್ದು, ಆರಂಭದಿಂದಲೂ ಸಬೀರ್ ಕಿರುಕುಳ ನೀಡುತ್ತಿದ್ದಾನಂತೆ. ಅಲ್ಲದೆ ಮದುವೆ ವೇಳೆ 30 ಸಾವಿರ ರುಪಾಯಿ ವರದಕ್ಷಿಣೆ ನೀಡಿದ್ದು,ಮತ್ತೆ ತರುವಂತೆ ಪೀಡಿಸುತ್ತಿದ್ದಾನೆ. ಹಾಗಾಗಿ ನಾನೇ ಇಬ್ಬರು ಮಕ್ಕಳನ್ನು ಕರೆದುಕೊಂಡು ದೂರವಾದೆ. ಆದರೂ ಮನೆಗೆ ಬರುವ ಸಬೀರ್ ತಲಾಖ್ ಗೆ ಒಪ್ಪಿಗೆ ಸೂಚಿಸು ಎಂದು ಕಿರುಕುಳ ನೀಡುತ್ತಿದ್ದಾನೆ ಎಂದು ಮಹಿಳೆ ಬುರುಯಿಪುರ್ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಒಟ್ಟಿನಲ್ಲಿ ಮುಸ್ಲಿಂ ಮಹಿಳೆಯರಿಗೆ ನ್ಯಾಯ ಸಿಗಲಿ ಎಂದು ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ನಿಷೇಧಕ್ಕೆ ಮುಂದಾಗಿದ್ದರೂ, ತಲಾಖ್ ಎಂಬ ಪೀಡೆ ಇನ್ನೂ ಮುಸ್ಲಿಂ ಮಹಿಳೆಯರಿಗೆ ಕಂಟಕವಾಗುತ್ತಲೇ ಇದೆ ಎಂಬುದು ಬೇಸರದ ಸಂಗತಿ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search