• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬೇರೆ ಮದುವೆಯಾಗುವೆ, ತಲಾಖ್ ಗೆ ಒಪ್ಪಿಗೆ ಎಂದು ಪತ್ನಿಗೆ ಕಿರುಕುಳ, ಕೇಳೋರಿಲ್ಲವೇ ಅನ್ಯಾಯ?

TNN Correspondent Posted On January 11, 2018


  • Share On Facebook
  • Tweet It

ಲಖನೌ: ದೇಶದಲ್ಲಿ ದಲಿತರ ಮೇಲೆ ಹಲ್ಲೆಯಾದರೆ, ಕಿರುಕುಳವಾದರೆ ಪ್ರಗತಿಪರರೆನಿಸಿಕೊಂಡವರು, ಬುದ್ಧಿಜೀವಿಗಳು ಸೀದಾ ನರೇಂದ್ರ ಮೋದಿ ಅವರನ್ನೇ ಟಾರ್ಗೆಟ್ ಮಾಡುತ್ತಾರೆ. ಆದರೆ ಅದೇ ಮುಸ್ಲಿಂ ಮಹಿಳೆಯರಿಗೆ ಎಷ್ಟೇ ಅನ್ಯಾಯವಾಗಲಿ, ಆಗ ಯಾರೂ ಸೊಲ್ಲೆತ್ತುವುದಿಲ್ಲ. ಮುಸ್ಲಿಂ ಮಹಿಳೆಯರಿಗೆ ನ್ಯಾಯಬೇಕು ಎನ್ನುವುದಿಲ್ಲ. ಪ್ರಕಾಶ್ ರೈ ಅಂಥವರೂ ಯಾವ ಕತ್ತಲಿಗೆ ಸರಿಯುತ್ತಾರೋ ಗೊತ್ತಿಲ್ಲ? ಮತ್ತೆ ಇವರಿಗೆ ಪ್ರಗತಿಪರರು ಎಂಬ ಹೆಸರು ಬೇರೆ ಕೇಡು.

ಇಂಥಾದ್ದೇ ಒಂದು ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಆದರೂ ಯಾರೂ ಮಾತನಾಡುತ್ತಿಲ್ಲ. ಹೌದು, ಪಶ್ಚಿಮ ಬಂಗಾಳದ ಬುರಿಯಿಪುರ್ ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ತಲಾಖ್ ಗೆ ಒಪ್ಪಿಕೋ ಎಂದು ಕಿರುಕುಳ ನೀಡಿದ್ದಾನೆ.

ನೂರ್ ನೆಹರಾ ಬಿವಿ ಎಂಬ ಮುಸ್ಲಿಂ ಮಹಿಳೆಗೆ ಆಕೆಯ ಪತಿ ಸಬೀರ್ ತಲಾಖ್ ನೀಡಿದ್ದು, ಅದಕ್ಕೆ ಒಪ್ಪಿಕೊಳ್ಳುವಂತೆ ಸಿಗರೇಟಿನಿಂದ ಸುಟ್ಟಿದ್ದಾನೆ. ಈ ಕುರಿತು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ಸುಮಾರು 6 ವರ್ಷಗಳ ಹಿಂದೆ ಇಬ್ಬರೂ ಮದುವೆಯಾಗಿದ್ದು, ಆರಂಭದಿಂದಲೂ ಸಬೀರ್ ಕಿರುಕುಳ ನೀಡುತ್ತಿದ್ದಾನಂತೆ. ಅಲ್ಲದೆ ಮದುವೆ ವೇಳೆ 30 ಸಾವಿರ ರುಪಾಯಿ ವರದಕ್ಷಿಣೆ ನೀಡಿದ್ದು,ಮತ್ತೆ ತರುವಂತೆ ಪೀಡಿಸುತ್ತಿದ್ದಾನೆ. ಹಾಗಾಗಿ ನಾನೇ ಇಬ್ಬರು ಮಕ್ಕಳನ್ನು ಕರೆದುಕೊಂಡು ದೂರವಾದೆ. ಆದರೂ ಮನೆಗೆ ಬರುವ ಸಬೀರ್ ತಲಾಖ್ ಗೆ ಒಪ್ಪಿಗೆ ಸೂಚಿಸು ಎಂದು ಕಿರುಕುಳ ನೀಡುತ್ತಿದ್ದಾನೆ ಎಂದು ಮಹಿಳೆ ಬುರುಯಿಪುರ್ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಒಟ್ಟಿನಲ್ಲಿ ಮುಸ್ಲಿಂ ಮಹಿಳೆಯರಿಗೆ ನ್ಯಾಯ ಸಿಗಲಿ ಎಂದು ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ನಿಷೇಧಕ್ಕೆ ಮುಂದಾಗಿದ್ದರೂ, ತಲಾಖ್ ಎಂಬ ಪೀಡೆ ಇನ್ನೂ ಮುಸ್ಲಿಂ ಮಹಿಳೆಯರಿಗೆ ಕಂಟಕವಾಗುತ್ತಲೇ ಇದೆ ಎಂಬುದು ಬೇಸರದ ಸಂಗತಿ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search