• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2017ರಲ್ಲಿ ಭಾರತ ಸೈನಿಕರ ಗುಂಡಿಗೆ ಬಲಿಯಾದ ಪಾಕಿ ಸೈನಿಕರೆಷ್ಟು ಗೊತ್ತೆ..?

TNN Correspondent Posted On January 11, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಯೋತ್ಪಾದಕ ವಿರುದ್ಧ ಕಟು ನಿಯಮಗಳನ್ನು ಕೈಗೊಳ್ಳುತ್ತಿದೆ, ಅಲ್ಲದೇ ಕಾಶ್ಮೀರದ ಕಣಿವೆಯಲ್ಲಿ ಪಾಪಿ ಪಾಕಿಸ್ತಾನದ ಉಪಟಳವನ್ನು ಹದ್ದು ಬದ್ದಿಸ್ಥಿನಲ್ಲಿಡಲೂ ಸೈನಿಕರ ಸೂಕ್ತ ಬಲ, ಸ್ಥೈರ್ಯ ನೀಡಿದೆ. ಆದ್ದರಿಂದಲೇ ಉಗ್ರರು ಸೇರಿ ಭಾರತಕ್ಕೆ ಕಿಟಲೆ ಮಾಡುವ ಪಾಕಿಸ್ತಾನದ ಸೈನಿಕರಿಗೆ ತಕ್ಕ ಉತ್ತರ ನೀಡುತ್ತಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ನಿಂತಿವೆ ಈ ಸಂಖ್ಯೆಗಳು.

2017ರಲ್ಲೇ ಭಾರತ ಗಡಿಯಲ್ಲಿ ಅಕ್ರಮ ಪ್ರವೇಶ, ಕದನ ವಿರಾಮ ಉಲ್ಲಂಘನೆ, ವಿನಾಕಾರಣ ಗುಂಡಿನ ದಾಳಿ ಮಾಡಿದ 138 ಸೈನಿಕರನ್ನು ಭಾರತದ ಸೈನಿಕರು ಸ್ವರ್ಗವಾಸಿಗಳನ್ನಾಗಿ ಮಾಡಿದ್ದಾರೆ. ಲೈನ್ ಆಫ್ ಕಂಟ್ರೋಲ್ ಬಳಿಯಲ್ಲೇ 138 ಪಾಕ್ ಸೈನಿಕರನ್ನು ಹತ್ಯೆ ಮಾಡಲಾಗಿದೆ. ಇನ್ನು ಇದೇ ಅವಧಿಯಲ್ಲಿ ಭಾರತದ 28 ಯೋಧರು ಹುತಾತ್ಮರಾಗಿದ್ದಾರೆ ಎಂಬ ಮಾಹಿತಿ ಕಾಶ್ಮೀರ ಗುಪ್ತಚರ ಇಲಾಖೆ ಮೂಲಗಳು ತಿಳಿಸಿವೆ.

ಬಹುತೇಕ ಪಾಕಿಸ್ತಾನ  ಸರ್ಕಾರ ತನ್ನ ಸೈನಿಕರ ಸಾವನ್ನು ಒಪ್ಪಿಕೊಳ್ಳುವುದು, ಇಲ್ಲವೇ ಸೈನಿಕರ ಸಾವನ್ನು ನಾಗರೀಕರ ಸಾವು ಎಂದು ದಾಖಲೆ ತೋರಿಸುತ್ತದೆ. ಭಾರತದ ಸೈನ್ಯ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಮತ್ತು ಭಯೋತ್ಪಾದನೆ ಚಟುವಟಿಕೆಗಳನ್ನು ನಡೆಸುವವರ ವಿರುದ್ಧ ಕಠಿಣ ಉತ್ತರ ನೀಡುತ್ತಿದೆ.

ಪಾಕಿಸ್ತಾನದ 138 ಸೈನಿಕರು ಮಾರಕ ದಾಳಿಗೆ ತುತ್ತಾಗಿದ್ದರೇ, 155 ಸೈನಿಕರಿಗೆ ಕದನ ವಿರಾಮ ಉಲ್ಲಂಘನೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಗಾಯಗಳಾಗಿವೆ. ಭಾರತದ 70 ಸೈನಿಕರಿಗೆ ಗುಂಡಿನ ದಾಳಿಯಲ್ಲಿ ಗಾಯಗಳಾಗಿವೆ.

ಭಾರತದ ಪಾಕಿಸ್ತಾನದ ಎಲ್ಲ ಕದನ ವಿರಾಮ ಉಲ್ಲಂಘನೆಗಳಿಗೆ ತಕ್ಕ  ಉತ್ತರ ನೀಡುತ್ತಲೇ ಬಂದಿದೆ. ಪಾಕಿಸ್ತಾನ ತನ್ನ ಚಾಳಿ ಮುಂದುವರಿಸಿದರೇ ಮುಂದೆಯೂ ತಕ್ಕ ಉತ್ತರ ನೀಡಲಾಗುವುದು ಎನ್ನುತ್ತಾರೆ ಕರ್ನಲ್ ಅಮನ್ ಆನಂದ.

860 ಬಾರಿ ಕದನ ವಿರಾಮ ಉಲ್ಲಂಘನೆ

ಪಾಕಿಸ್ತಾನದಿಂದ 2017ರಲ್ಲಿ 860 ಬಾರಿ ಕದನ ವಿರಾಮ ಉಲ್ಲಂಘಿಸಲಾಗಿದೆ. 2016ರಲ್ಲಿ 221 ಬಾರಿ ಕದನ ವಿರಾಮ ಉಲ್ಲಂಘಿಸಲಾಗಿತ್ತು. ಪಾಕಿಸ್ತಾನ ತನ್ನ ಸೈನಿಕರ ಸಾವನ್ನು ಒಪ್ಪಿಕೊಳ್ಳದಿರುವ ನೀತಿಯನ್ನು ಹೊಂದಿದೆ. ಭಾರತ ಸಾಕ್ಷ್ಯ ನೀಡಿದ್ದರೂ ತಗಾದೆ ತೆಗೆದಿರುವ ಉದಾಹರಣೆಗಳಿವೆ ಎನ್ನುತ್ತಾರೆ ಕರ್ನಲ್ ಅಮನ್ ಆನಂದ.

ಡಿಸೆಂಬರ್ ನಲ್ಲಿ ನಡೆದ ಭಾರತೀಯ ಸೈನಿಕರು ಪಾಕಿಸ್ತಾನದ ಗಡಿಯ ಒಳ ಹೊಕ್ಕು ಐದು ಪಾಕ್ ಸೈನಿಕರನ್ನು ಹತ್ಯೆ ಮಾಡಿ ಬಂದಿತ್ತು, ಆದರೆ ಪಾಕ್ ಸರ್ಕಾರ ಆ ಬಗ್ಗೆ ಟ್ವೀಟ್ ಮಾಡಿ ನಂತರ ಅದನ್ನು ಅಳಿಸಿ ಹಾಕಿತ್ತು.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search