• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2019ರ ಲೋಕಸಭೆ ಚುನಾವಣೆಗೆ ಮೋದಿ, ಶಾ ಸಿದ್ಧತೆ ಆರಂಭ, ಇಂದು ನಡೆಯಲಿದೆ ಸಭೆ

TNN Correspondent Posted On January 11, 2018
0


0
Shares
  • Share On Facebook
  • Tweet It

ದೆಹಲಿ: ದೇಶವನ್ನು ಕಾಂಗ್ರೆಸ್ ಮುಕ್ತ ಮಾಡಲು ಅಡಿಯಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭರ್ಜರಿ ಸಿದ್ಧತೆ ಆರಂಭಿಸಿದ್ದಾರೆ. ಮುನ್ನುಡಿ ಎಂಬಂತೆ ಇಂದು ದೆಹಲಿಯಲ್ಲಿ ದೇಶದ ಎಲ್ಲ ರಾಜ್ಯಗಳ ಬಿಜೆಪಿ ಪ್ರಮುಖರ ಸಭೆ ನಡೆಯಲಿದೆ ಎಂಬ ಮಾಹಿತಿ ಹೊರ ಬಿದ್ದಿದೆ.

ಸಭೆಗೆ ಎಲ್ಲ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳನ್ನು ಮತ್ತು ರಾಜ್ಯಾಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. ಗುರುವಾರ ಭೋಜನ ಕೂಟ ಏರ್ಪಡಿಸಲಾಗಿದೆ.  ಪ್ರಧಾನಿ ನರೇಂದ್ರ ಮೋದಿ ಅವರ ಮನೆಯಲ್ಲಿ ಈ ಸಭೆ ನಡೆಯಲಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರದ ಎಲ್ಲ ಸಚಿವರು, ಹಿರಿಯ ಮುಖಂಡ ರಾಮ್ ಲಾಲ್ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ‘ಯಾವ ಯಾವ ರಾಜ್ಯಗಳಲ್ಲಿ ಬಿಜೆಪಿ ಸ್ಥಿತಿ ಗತಿ ಹೇಗಿದೆ, ಕೇಂದ್ರ ಸರ್ಕಾರದ ಯೋಜನೆಗಳ ಪ್ರಭಾವ ಹೇಗಿದೆ. ಬೇರೆ ಬೇರೆ ರಾಜ್ಯಗಳ ಯೋಜನೆಗಳ ಪ್ರಭಾವ ಮತ್ತು ಪ್ರಮುಖಾಂಶಗಳು ವೈಫಲ್ಯಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶ, ಚತ್ತಿಸಗಡ್ ರಾಜಸ್ಥಾನ, ತ್ರಿಪುರಾ, ಮೇಘಾಲಯ ಮತ್ತು ಮಿಜೋರಾಮ್ ಸೇರಿ 2018ರಲ್ಲಿ ಬರುವ ವಿಧಾನಸಭೆ ಚುನಾವಣೆ ಮೇಲೆ ವಿಶೇಷ ಗಮನ ಹರಿಸುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಇನ್ನು 2000 ವರ್ಷದಲ್ಲಿ ಜನಿಸಿದ ಯುವ ಮತದಾರರನ್ನು ಗುರಿಯಾಗಿಟ್ಟುಕೊಂಡು, ಅವರನ್ನು ಸೆಳೆಯಲು ತಂತ್ರ ರೂಪಿಸುವುದು ಮತ್ತು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಲೋಕಸಭೆ ಚುನಾವಣೆಗೆ ಸಿದ್ಧತೆ ಹೇಗೆ ನಡೆಸಬೇಕು ಎಂಬ ಚರ್ಚೆ ನಡೆಯಲಿದೆ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search