• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2019ರ ಲೋಕಸಭೆ ಚುನಾವಣೆಗೆ ಮೋದಿ, ಶಾ ಸಿದ್ಧತೆ ಆರಂಭ, ಇಂದು ನಡೆಯಲಿದೆ ಸಭೆ

TNN Correspondent Posted On January 11, 2018
0


0
Shares
  • Share On Facebook
  • Tweet It

ದೆಹಲಿ: ದೇಶವನ್ನು ಕಾಂಗ್ರೆಸ್ ಮುಕ್ತ ಮಾಡಲು ಅಡಿಯಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭರ್ಜರಿ ಸಿದ್ಧತೆ ಆರಂಭಿಸಿದ್ದಾರೆ. ಮುನ್ನುಡಿ ಎಂಬಂತೆ ಇಂದು ದೆಹಲಿಯಲ್ಲಿ ದೇಶದ ಎಲ್ಲ ರಾಜ್ಯಗಳ ಬಿಜೆಪಿ ಪ್ರಮುಖರ ಸಭೆ ನಡೆಯಲಿದೆ ಎಂಬ ಮಾಹಿತಿ ಹೊರ ಬಿದ್ದಿದೆ.

ಸಭೆಗೆ ಎಲ್ಲ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳನ್ನು ಮತ್ತು ರಾಜ್ಯಾಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. ಗುರುವಾರ ಭೋಜನ ಕೂಟ ಏರ್ಪಡಿಸಲಾಗಿದೆ.  ಪ್ರಧಾನಿ ನರೇಂದ್ರ ಮೋದಿ ಅವರ ಮನೆಯಲ್ಲಿ ಈ ಸಭೆ ನಡೆಯಲಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರದ ಎಲ್ಲ ಸಚಿವರು, ಹಿರಿಯ ಮುಖಂಡ ರಾಮ್ ಲಾಲ್ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ‘ಯಾವ ಯಾವ ರಾಜ್ಯಗಳಲ್ಲಿ ಬಿಜೆಪಿ ಸ್ಥಿತಿ ಗತಿ ಹೇಗಿದೆ, ಕೇಂದ್ರ ಸರ್ಕಾರದ ಯೋಜನೆಗಳ ಪ್ರಭಾವ ಹೇಗಿದೆ. ಬೇರೆ ಬೇರೆ ರಾಜ್ಯಗಳ ಯೋಜನೆಗಳ ಪ್ರಭಾವ ಮತ್ತು ಪ್ರಮುಖಾಂಶಗಳು ವೈಫಲ್ಯಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶ, ಚತ್ತಿಸಗಡ್ ರಾಜಸ್ಥಾನ, ತ್ರಿಪುರಾ, ಮೇಘಾಲಯ ಮತ್ತು ಮಿಜೋರಾಮ್ ಸೇರಿ 2018ರಲ್ಲಿ ಬರುವ ವಿಧಾನಸಭೆ ಚುನಾವಣೆ ಮೇಲೆ ವಿಶೇಷ ಗಮನ ಹರಿಸುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಇನ್ನು 2000 ವರ್ಷದಲ್ಲಿ ಜನಿಸಿದ ಯುವ ಮತದಾರರನ್ನು ಗುರಿಯಾಗಿಟ್ಟುಕೊಂಡು, ಅವರನ್ನು ಸೆಳೆಯಲು ತಂತ್ರ ರೂಪಿಸುವುದು ಮತ್ತು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಲೋಕಸಭೆ ಚುನಾವಣೆಗೆ ಸಿದ್ಧತೆ ಹೇಗೆ ನಡೆಸಬೇಕು ಎಂಬ ಚರ್ಚೆ ನಡೆಯಲಿದೆ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search