• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2019ರ ಲೋಕಸಭೆ ಚುನಾವಣೆಗೆ ಮೋದಿ, ಶಾ ಸಿದ್ಧತೆ ಆರಂಭ, ಇಂದು ನಡೆಯಲಿದೆ ಸಭೆ

TNN Correspondent Posted On January 11, 2018
0


0
Shares
  • Share On Facebook
  • Tweet It

ದೆಹಲಿ: ದೇಶವನ್ನು ಕಾಂಗ್ರೆಸ್ ಮುಕ್ತ ಮಾಡಲು ಅಡಿಯಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭರ್ಜರಿ ಸಿದ್ಧತೆ ಆರಂಭಿಸಿದ್ದಾರೆ. ಮುನ್ನುಡಿ ಎಂಬಂತೆ ಇಂದು ದೆಹಲಿಯಲ್ಲಿ ದೇಶದ ಎಲ್ಲ ರಾಜ್ಯಗಳ ಬಿಜೆಪಿ ಪ್ರಮುಖರ ಸಭೆ ನಡೆಯಲಿದೆ ಎಂಬ ಮಾಹಿತಿ ಹೊರ ಬಿದ್ದಿದೆ.

ಸಭೆಗೆ ಎಲ್ಲ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳನ್ನು ಮತ್ತು ರಾಜ್ಯಾಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. ಗುರುವಾರ ಭೋಜನ ಕೂಟ ಏರ್ಪಡಿಸಲಾಗಿದೆ.  ಪ್ರಧಾನಿ ನರೇಂದ್ರ ಮೋದಿ ಅವರ ಮನೆಯಲ್ಲಿ ಈ ಸಭೆ ನಡೆಯಲಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರದ ಎಲ್ಲ ಸಚಿವರು, ಹಿರಿಯ ಮುಖಂಡ ರಾಮ್ ಲಾಲ್ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ‘ಯಾವ ಯಾವ ರಾಜ್ಯಗಳಲ್ಲಿ ಬಿಜೆಪಿ ಸ್ಥಿತಿ ಗತಿ ಹೇಗಿದೆ, ಕೇಂದ್ರ ಸರ್ಕಾರದ ಯೋಜನೆಗಳ ಪ್ರಭಾವ ಹೇಗಿದೆ. ಬೇರೆ ಬೇರೆ ರಾಜ್ಯಗಳ ಯೋಜನೆಗಳ ಪ್ರಭಾವ ಮತ್ತು ಪ್ರಮುಖಾಂಶಗಳು ವೈಫಲ್ಯಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶ, ಚತ್ತಿಸಗಡ್ ರಾಜಸ್ಥಾನ, ತ್ರಿಪುರಾ, ಮೇಘಾಲಯ ಮತ್ತು ಮಿಜೋರಾಮ್ ಸೇರಿ 2018ರಲ್ಲಿ ಬರುವ ವಿಧಾನಸಭೆ ಚುನಾವಣೆ ಮೇಲೆ ವಿಶೇಷ ಗಮನ ಹರಿಸುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಇನ್ನು 2000 ವರ್ಷದಲ್ಲಿ ಜನಿಸಿದ ಯುವ ಮತದಾರರನ್ನು ಗುರಿಯಾಗಿಟ್ಟುಕೊಂಡು, ಅವರನ್ನು ಸೆಳೆಯಲು ತಂತ್ರ ರೂಪಿಸುವುದು ಮತ್ತು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಲೋಕಸಭೆ ಚುನಾವಣೆಗೆ ಸಿದ್ಧತೆ ಹೇಗೆ ನಡೆಸಬೇಕು ಎಂಬ ಚರ್ಚೆ ನಡೆಯಲಿದೆ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search