• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇರಳ ಮದರಸಾಗಳಲ್ಲಿ ವಹಾಬಿಸಂ ಪಾಠ: ಕುಟುಕು ಕಾರ್ಯಾಚರಣೆಯಿಂದ ಬಹಿರಂಗ

TNN Correspondent Posted On January 11, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಲವ್ ಜಿಹಾದ್ ಪ್ರಕರಣ ಹಾಗೂ ಕ್ರಿಶ್ಚಿಯನ್ನರ ಮತಾಂತರಗಳು ದೇಶವನ್ನೇ ಬೆಚ್ಚಿಬೀಳುತ್ತಿರುವ ಬೆನ್ನಲ್ಲೇ ಮತ್ತೊಂದು ಭಯಂಕರ ಅಂಶ ಬಹಿರಂಗವಾಗಿದ್ದು, ಕೇರಳದಲ್ಲಿರುವ ಮದರಸಾಗಳಲ್ಲಿ ವಹಬಿಸಂ ಹಾಗೂ ಫ್ಯಾಸಿಸ್ಟ್ ಮನೋಭಾವನೆ ಕುರಿತು ಬೋಧನೆ ಮಾಡಲಾಗುತ್ತಿದೆ ಎಂದು ಖಾಸಗಿ ಮಾಧ್ಯಮಗಳು ನಡೆಸಿದ ಕಾರ್ಯಾಚರಣೆಯಿಂದ ತಿಳಿದು ಬಂದಿದೆ.

ಹೌದು, ಸೌದಿ ಅರೇಬಿಯಾ ಸೇರಿ ಹಲವು ಗಲ್ಫ್ ರಾಷ್ಟ್ರಗಳು ಕೇರಳದ ಮದರಸಾಗಳಿಗೆ ಹಣ ಪೂರೈಸುತ್ತಿದ್ದು, ಮುಸ್ಲಿಮರ ಮನಸ್ಥಿತಿ ಬದಲಾಯಿಸಲು ಹಾಗೂ ಹಾಗೆ ಬದಲಾಯಿಸಿ ಹಿಂದೂಗಳ ಮತಾಂತರಕ್ಕೆ ಅಣಿ ಮಾಡುವುದು ಈ ಬೋಧನೆಯ ಉದ್ದೇಶವಾಗಿದೆ ಎಂದು ಕುಟುಕು ಕಾರ್ಯಚರಣೆ ವೇಳೆ ಬಹಿರಂಗವಾಗಿದೆ.

ಇದಕ್ಕಾಗಿ ಕೇರಳದ ಹಲವು ಮದರಸಾಗಳಲ್ಲಿ ಕಾರ್ಯಾಚರಣೆ ನಡೆಸಿದ್ದು, ಬಹುತೇಕ ಮದರಸಾಗಳು ಧರ್ಮ ಬೋಧನೆ ಹಾಗೂ ಕುರಾನ್ ನ ಸದ್ವಿಚಾರ ಬೋಧಿಸದೆ ವಿಕ್ಷಿಪ್ತ ಮನಸ್ಥಿತಿಯನ್ನು ಬೋಧಿಸುತ್ತಿವೆ ಎಂದು ತಿಳಿದುಬಂದಿದೆ.

ನಾವು ಸಾರ್ವಜನಿಕವಾಗಿ ಖಲೀಫನ ಬಗ್ಗೆ ಮಾತನಾಡಿದರೆ ನಮ್ಮ ಸುತ್ತ ಇರುವ ಹಿಂದೂಗಳು ನಮ್ಮನ್ನು ಐಸಿಸ್ ಸಂಘಟನೆ ಕಾರ್ಯಕರ್ತರು ಎಂದೇ ಭಾವಿಸುತ್ತಾರೆ. ಹಾಗಾಗಿ ನಾವು ಪರೋಕ್ಷವಾಗಿ, ಮಕ್ಕಳ ಹೃದಯದಲ್ಲಿ ಸಣ್ಣ ಪ್ರಮಾಣದ ಮೂಲಕ ಖಲೀಫನ ತತ್ವ, ವಹಾಬಿಸಂ ಬಿತ್ತುತ್ತೇವೆ ಎಂದು ಕಾರ್ಯಾಚರಣೆ ವೇಳೆ ಕೊಝಿಕೋಡ್ ನ ಕರುಣಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಮೊಹಮ್ಮದ್ ಬಷೀರ್ ಒಪ್ಪಿಕೊಂಡಿದ್ದು, ದೇಶವನ್ನೇ ಬೆಚ್ಚಿಬೀಳಿಸುವಂತಿದೆ.

ಅಲ್ಲದೆ ಸೌದಿ ಅರೇಬಿಯಾ ಸೇರಿ ಗಲ್ಫ್ ರಾಷ್ಟ್ರಗಳು ಹೇಗೆ ಹಣ ಸಂದಾಯ ಮಾಡುತ್ತವೆ, ಆ ಮೂಲಕ ಮನಸ್ಥಿತಿ ಬದಲಾವಣೆ ಹಾಗೂ ಮತಾಂತರವನ್ನು ಹೇಗೆ ಪ್ರಚೋದಿಸುತ್ತವೆ ಎಂಬ ಕುರಿತು ಸಹ ಕಾರ್ಯಾಚರಣೆಯಲ್ಲಿ ಬಹಿರಂಗವಾಗಿದೆ.

ಒಟ್ಟಿನಲ್ಲಿ ಲವ್ ಜಿಹಾದ್ ಹಾಗೂ ಮತಾಂತರದಿಂದ ತತ್ತರಿಸಿ ಹೋಗಿದ್ದ ಕೇರಳದಲ್ಲಿ ಈಗ ಮದರಸಾಗಳು ವಹಾಬಿಸಂ ಹಾಗೂ ಫ್ಯಾಸಿಸ್ಟ್ ಮನೋಭಾವನೆ ಬಿತ್ತಿ ರಾಜ್ಯವನ್ನು ಹಾಳು ಮಾಡುತ್ತಿರುವುದು ದಿಟವಾಗಿದೆ. ಇಷ್ಟಾದರೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾತ್ರ ಕಣ್ಣು ಮುಚ್ಚಿಕೊಂಡು ಕುಳಿತಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search