• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇರಳ ಮದರಸಾಗಳಲ್ಲಿ ವಹಾಬಿಸಂ ಪಾಠ: ಕುಟುಕು ಕಾರ್ಯಾಚರಣೆಯಿಂದ ಬಹಿರಂಗ

TNN Correspondent Posted On January 11, 2018


  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಲವ್ ಜಿಹಾದ್ ಪ್ರಕರಣ ಹಾಗೂ ಕ್ರಿಶ್ಚಿಯನ್ನರ ಮತಾಂತರಗಳು ದೇಶವನ್ನೇ ಬೆಚ್ಚಿಬೀಳುತ್ತಿರುವ ಬೆನ್ನಲ್ಲೇ ಮತ್ತೊಂದು ಭಯಂಕರ ಅಂಶ ಬಹಿರಂಗವಾಗಿದ್ದು, ಕೇರಳದಲ್ಲಿರುವ ಮದರಸಾಗಳಲ್ಲಿ ವಹಬಿಸಂ ಹಾಗೂ ಫ್ಯಾಸಿಸ್ಟ್ ಮನೋಭಾವನೆ ಕುರಿತು ಬೋಧನೆ ಮಾಡಲಾಗುತ್ತಿದೆ ಎಂದು ಖಾಸಗಿ ಮಾಧ್ಯಮಗಳು ನಡೆಸಿದ ಕಾರ್ಯಾಚರಣೆಯಿಂದ ತಿಳಿದು ಬಂದಿದೆ.

ಹೌದು, ಸೌದಿ ಅರೇಬಿಯಾ ಸೇರಿ ಹಲವು ಗಲ್ಫ್ ರಾಷ್ಟ್ರಗಳು ಕೇರಳದ ಮದರಸಾಗಳಿಗೆ ಹಣ ಪೂರೈಸುತ್ತಿದ್ದು, ಮುಸ್ಲಿಮರ ಮನಸ್ಥಿತಿ ಬದಲಾಯಿಸಲು ಹಾಗೂ ಹಾಗೆ ಬದಲಾಯಿಸಿ ಹಿಂದೂಗಳ ಮತಾಂತರಕ್ಕೆ ಅಣಿ ಮಾಡುವುದು ಈ ಬೋಧನೆಯ ಉದ್ದೇಶವಾಗಿದೆ ಎಂದು ಕುಟುಕು ಕಾರ್ಯಚರಣೆ ವೇಳೆ ಬಹಿರಂಗವಾಗಿದೆ.

ಇದಕ್ಕಾಗಿ ಕೇರಳದ ಹಲವು ಮದರಸಾಗಳಲ್ಲಿ ಕಾರ್ಯಾಚರಣೆ ನಡೆಸಿದ್ದು, ಬಹುತೇಕ ಮದರಸಾಗಳು ಧರ್ಮ ಬೋಧನೆ ಹಾಗೂ ಕುರಾನ್ ನ ಸದ್ವಿಚಾರ ಬೋಧಿಸದೆ ವಿಕ್ಷಿಪ್ತ ಮನಸ್ಥಿತಿಯನ್ನು ಬೋಧಿಸುತ್ತಿವೆ ಎಂದು ತಿಳಿದುಬಂದಿದೆ.

ನಾವು ಸಾರ್ವಜನಿಕವಾಗಿ ಖಲೀಫನ ಬಗ್ಗೆ ಮಾತನಾಡಿದರೆ ನಮ್ಮ ಸುತ್ತ ಇರುವ ಹಿಂದೂಗಳು ನಮ್ಮನ್ನು ಐಸಿಸ್ ಸಂಘಟನೆ ಕಾರ್ಯಕರ್ತರು ಎಂದೇ ಭಾವಿಸುತ್ತಾರೆ. ಹಾಗಾಗಿ ನಾವು ಪರೋಕ್ಷವಾಗಿ, ಮಕ್ಕಳ ಹೃದಯದಲ್ಲಿ ಸಣ್ಣ ಪ್ರಮಾಣದ ಮೂಲಕ ಖಲೀಫನ ತತ್ವ, ವಹಾಬಿಸಂ ಬಿತ್ತುತ್ತೇವೆ ಎಂದು ಕಾರ್ಯಾಚರಣೆ ವೇಳೆ ಕೊಝಿಕೋಡ್ ನ ಕರುಣಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಮೊಹಮ್ಮದ್ ಬಷೀರ್ ಒಪ್ಪಿಕೊಂಡಿದ್ದು, ದೇಶವನ್ನೇ ಬೆಚ್ಚಿಬೀಳಿಸುವಂತಿದೆ.

ಅಲ್ಲದೆ ಸೌದಿ ಅರೇಬಿಯಾ ಸೇರಿ ಗಲ್ಫ್ ರಾಷ್ಟ್ರಗಳು ಹೇಗೆ ಹಣ ಸಂದಾಯ ಮಾಡುತ್ತವೆ, ಆ ಮೂಲಕ ಮನಸ್ಥಿತಿ ಬದಲಾವಣೆ ಹಾಗೂ ಮತಾಂತರವನ್ನು ಹೇಗೆ ಪ್ರಚೋದಿಸುತ್ತವೆ ಎಂಬ ಕುರಿತು ಸಹ ಕಾರ್ಯಾಚರಣೆಯಲ್ಲಿ ಬಹಿರಂಗವಾಗಿದೆ.

ಒಟ್ಟಿನಲ್ಲಿ ಲವ್ ಜಿಹಾದ್ ಹಾಗೂ ಮತಾಂತರದಿಂದ ತತ್ತರಿಸಿ ಹೋಗಿದ್ದ ಕೇರಳದಲ್ಲಿ ಈಗ ಮದರಸಾಗಳು ವಹಾಬಿಸಂ ಹಾಗೂ ಫ್ಯಾಸಿಸ್ಟ್ ಮನೋಭಾವನೆ ಬಿತ್ತಿ ರಾಜ್ಯವನ್ನು ಹಾಳು ಮಾಡುತ್ತಿರುವುದು ದಿಟವಾಗಿದೆ. ಇಷ್ಟಾದರೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾತ್ರ ಕಣ್ಣು ಮುಚ್ಚಿಕೊಂಡು ಕುಳಿತಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search