• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರಾಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಪಾಠ

TNN Correspondent Posted On January 11, 2018
0


0
Shares
  • Share On Facebook
  • Tweet It

ಡೆಹರಾಡೂನ್: ಉತ್ತರ ಪ್ರದೇಶದ ಮದರಸಾಗಳಲ್ಲಿ ಸರ್ಕಾರದ ಪಠ್ಯ ಅಳವಡಿಸುವ ಕುರಿತು ಚಿಂತನೆ ನಡೆದಿರುವ ಬೆನ್ನಲ್ಲೇ ಉತ್ತರಾಖಂಡದ ಎಲ್ಲ ರಾಜ್ಯಗಳ ಮದರಸಾಗಳ ಪಠ್ಯದಲ್ಲಿ ಸಂಸ್ಕೃತ ಮತ್ತು ಕಂಪ್ಯೂಟರ್ ವಿಜ್ಞಾನ ಪಠ್ಯ ಸೇರಿಸಲು ಸರ್ಕಾರ ನಿರ್ಧರಿಸಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗುವಂತೆ ಉತ್ತರಾಖಂಡ ಶಿಕ್ಷಣ ನಿರ್ದೇಶಕ ಮತ್ತು ತರಬೇತಿ ಸಮಿತಿ ನಿರ್ದೇಶಕಿ ಪುಷ್ಪಾ ಜೋಷಿ ನೇತೃತ್ವದ ಉತ್ತರಾಖಂಡ್ ಮದರಸಾ ಎಜುಕೇಶನ್ ಬೋರ್ಡ್ 6 ಸಮಿತಿ ಸದಸ್ಯರ ಸಮತಿ ತೀರ್ಮಾನಿಸಿದೆ.

ರಾಜ್ಯದಲ್ಲಿರುವ ಎಲ್ಲ ಮದರಸಾಗಳಲ್ಲಿ ಸಂಸ್ಕೃತವನ್ನು ಕಡ್ಡಾಯವಾಗಿ ಕಲಿಸಬೇಕು ಎಂದು ಉತ್ತರಾಖಂಡ ಮದರಸಾ ವೆಲ್ ಫೇರ್ ಸೊಸೈಟಿ ಸರ್ಕಾರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ರಾಜ್ಯದಲ್ಲಿರುವ 297 ನೋಂದಾಯಿತ ಮದರಸಾಗಳಲ್ಲಿ ವಿಜ್ಞಾನ, ಆಯುಷ್, ಗಣಿತ ಹಾಗೂ ಸಾಮಾಜಿಕ ವಿಜ್ಞಾನ ವಿಷಯಗಳನ್ನು ಬೋಧಿಸಲಾಗುತ್ತಿದೆ. ಇವುಗಳ ಜತೆಗೆ ಈಗ ಸಂಸ್ಕೃತ ಮತ್ತು ಕಂಪ್ಯೂಟರ್ ವಿಜ್ಞಾನ ಅಳವಡಿಸಲು ಮುಂದಾಗಿದೆ.

ವಿಷಯಗಳ ಅಳವಡಿಕೆಗೆ ಮಂಡಳಿಯ ಸಮಿತಿ ಸದಸ್ಯರು ಒಪ್ಪಿಗೆ ಸೂಚಿಸಿದ್ದು, ಅನುಮೋದನೆಗಾಗಿ ಉನ್ನತ ಸಮಿತಿಗೆ ಕಳುಹಿಸಲಾಗಿದೆ. ರಾಜ್ಯದ ಮದರಸಾಗಳಲ್ಲಿ 25 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

 

 

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search