• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ವಿವಿಯ ಅಕ್ರಮದ ವಿರುದ್ಧ ಹೋರಾಟಕ್ಕೆ ಬೆಂಗಳೂರಿನ ಶಿಕ್ಷಣಪ್ರೇಮಿ ಸಿದ್ಧ!!

Vikram Posted On January 12, 2018
0


0
Shares
  • Share On Facebook
  • Tweet It

ಕರ್ನಾಟಕ ವಿಶ್ವವಿದ್ಯಾನಿಲಯದ ಆಕ್ಟ್ 2000ರ ಚಾಪ್ಟರ್-4 ರ ಕಲಾಂ-39 ರ ಎರಡನೇ ವಾಕ್ಯವೇ ವಿಶ್ವವಿದ್ಯಾನಿಲಯದಲ್ಲಿ ಎರಡನೇ ಅವಧಿಗೆ ಸಿಂಡಿಕೇಟ್ ಸದಸ್ಯನಾಗಿ ನೇಮಕವಾಗುವ ಅವಕಾಶ ಇಲ್ಲ. ಇಷ್ಟು ಸ್ಪಷ್ಟವಾಗಿ ಒಂದು ನಿಯಮ ಇದೆ ಎಂದಾದರೆ ಮಂಗಳೂರು ವಿಶ್ವವಿದ್ಯಾನಿಲಯದ ಒಳಗೆ ಏನು ಆಗುತ್ತಿದೆ ಎನ್ನುವುದನ್ನು ನಾವು ನೋಡಬೇಕಿದೆ.
ಒಂದು ಕಾಯಿದೆಯನ್ನೇ ಗಾಳಿಗೆ ತೂರಿ ಮಂಗಳೂರು ವಿಶ್ವವಿದ್ಯಾನಿಲಯ ತನ್ನ ಮನಸ್ಸಿಗೆ ಬಂದಂತೆ ವರ್ತಿಸುತ್ತಿದೆ ಎಂದರೆ ಅದನ್ನು ಹೇಳುವರು ಕೇಳುವವರು ಯಾರೂ ಇಲ್ವಾ ಎನ್ನುವ ಪ್ರಶ್ನೆ ಮೂಡುತ್ತದೆ.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಈಗ ಸಿಂಡಿಕೇಟ್ ಸದಸ್ಯರಾಗಿರುವ ಹರೀಶ್ ಆಚಾರ್ ಅವರದ್ದು ಈ ಬಾರಿ ಮೂರನೇ ಸಿಂಡಿಕೇಟ್ ಸದಸ್ಯತ್ವದ ಅವಧಿ. ಎರಡನೇ ಬಾರಿ ಸಿಂಡಿಕೇಟ್ ಸದಸ್ಯರಾಗುವುದೇ ಕಾನೂನುಬದ್ಧವಾಗಿ ತಪ್ಪಾಗಿರುವುದರಿಂದ ಇವರು ಹೇಗೆ ಮೂರನೇ ಬಾರಿ ಸದಸ್ಯರಾದರು ಎನ್ನುವುದು ಸೋಜಿಗ. ಇವರನ್ನು ಮೂರನೇ ಅವಧಿಗೆ ಸಿಂಡಿಕೇಟ್ ಸದಸ್ಯರನ್ನಾಗಿ ಮಾಡಿದವರು ರಾಜ್ಯಪಾಲ ವಜುಬಾಯಿ ಪಟೇಲ್. ಇನ್ನು ಅವರಿಗೆ ಸುಳ್ಳು ಮಾಹಿತಿ ಕೊಟ್ಟು ಹರೀಶ್ ಆಚಾರ್ ರನ್ನು ಸಿಂಡಿಕೇಟ್ ಮೆಂಬರ್ ಮಾಡಿದ್ದು ವಿಶ್ವವಿದ್ಯಾನಿಲಯದ ಕುಲಪತಿ ಭೈರಪ್ಪ.

ಈ ಸುದ್ದಿಯನ್ನು ತುಳುನಾಡು ನ್ಯೂಸ್ ಮೊದಲಿಗೆ ಬಹಿರಂಗಪಡಿಸಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರಿನ ಶಿಕ್ಷಣಪ್ರೇಮಿಯೊಬ್ಬರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಈ ಗೋಲ್ ಮಾಲ್ ಅನ್ನು ರಾಜ್ಯಪಾಲರ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ. ಹಾಗೆ ತಮಗೆ ಪೂರಕ ದಾಖಲೆ ನೀಡುವಂತೆ ಕೋರಿದ್ದಾರೆ. ಅವರ ವಿನಂತಿಯಂತೆ ತುಳುನಾಡು ನ್ಯೂಸ್ ತನ್ನಲ್ಲಿರುವ ದಾಖಲೆಯನ್ನು ನೀಡಿ ವಿಶ್ವವಿದ್ಯಾನಿಲಯದ ಒಳಗಿನ ಅವ್ಯವಹಾರದ ವಿರುದ್ಧ ಹೋರಾಟವನ್ನು ಮುಂದುವರೆಸಲಿದೆ.
ರಾಜ್ಯಪಾಲರು ಈ ಕುರಿತು ಕ್ರಮ ಕೈಗೊಂಡು ವಿಶ್ವವಿದ್ಯಾನಿಲಯದಲ್ಲಿ ಆಗಿರುವ ಸಮಗ್ರ ಅವ್ಯವಹಾರದ ತನಿಖೆಗೆ ಸೂಚಿಸಿದರೆ ಆಗ ವಿಶ್ವವಿದ್ಯಾನಿಲಯದ ಒಳಗೆ ಸಂಚಲನ ಮೂಡುವುದು ನಿಶ್ಚಯ!

0
Shares
  • Share On Facebook
  • Tweet It


Mangaluru VV Bairappa


Trending Now
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Vikram December 22, 2025
ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
Vikram December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
  • Popular Posts

    • 1
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 2
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 3
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 4
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 5
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!

  • Privacy Policy
  • Contact
© Tulunadu Infomedia.

Press enter/return to begin your search