• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ವಿವಿಯ ಅಕ್ರಮದ ವಿರುದ್ಧ ಹೋರಾಟಕ್ಕೆ ಬೆಂಗಳೂರಿನ ಶಿಕ್ಷಣಪ್ರೇಮಿ ಸಿದ್ಧ!!

Vikram Posted On January 12, 2018
0


0
Shares
  • Share On Facebook
  • Tweet It

ಕರ್ನಾಟಕ ವಿಶ್ವವಿದ್ಯಾನಿಲಯದ ಆಕ್ಟ್ 2000ರ ಚಾಪ್ಟರ್-4 ರ ಕಲಾಂ-39 ರ ಎರಡನೇ ವಾಕ್ಯವೇ ವಿಶ್ವವಿದ್ಯಾನಿಲಯದಲ್ಲಿ ಎರಡನೇ ಅವಧಿಗೆ ಸಿಂಡಿಕೇಟ್ ಸದಸ್ಯನಾಗಿ ನೇಮಕವಾಗುವ ಅವಕಾಶ ಇಲ್ಲ. ಇಷ್ಟು ಸ್ಪಷ್ಟವಾಗಿ ಒಂದು ನಿಯಮ ಇದೆ ಎಂದಾದರೆ ಮಂಗಳೂರು ವಿಶ್ವವಿದ್ಯಾನಿಲಯದ ಒಳಗೆ ಏನು ಆಗುತ್ತಿದೆ ಎನ್ನುವುದನ್ನು ನಾವು ನೋಡಬೇಕಿದೆ.
ಒಂದು ಕಾಯಿದೆಯನ್ನೇ ಗಾಳಿಗೆ ತೂರಿ ಮಂಗಳೂರು ವಿಶ್ವವಿದ್ಯಾನಿಲಯ ತನ್ನ ಮನಸ್ಸಿಗೆ ಬಂದಂತೆ ವರ್ತಿಸುತ್ತಿದೆ ಎಂದರೆ ಅದನ್ನು ಹೇಳುವರು ಕೇಳುವವರು ಯಾರೂ ಇಲ್ವಾ ಎನ್ನುವ ಪ್ರಶ್ನೆ ಮೂಡುತ್ತದೆ.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಈಗ ಸಿಂಡಿಕೇಟ್ ಸದಸ್ಯರಾಗಿರುವ ಹರೀಶ್ ಆಚಾರ್ ಅವರದ್ದು ಈ ಬಾರಿ ಮೂರನೇ ಸಿಂಡಿಕೇಟ್ ಸದಸ್ಯತ್ವದ ಅವಧಿ. ಎರಡನೇ ಬಾರಿ ಸಿಂಡಿಕೇಟ್ ಸದಸ್ಯರಾಗುವುದೇ ಕಾನೂನುಬದ್ಧವಾಗಿ ತಪ್ಪಾಗಿರುವುದರಿಂದ ಇವರು ಹೇಗೆ ಮೂರನೇ ಬಾರಿ ಸದಸ್ಯರಾದರು ಎನ್ನುವುದು ಸೋಜಿಗ. ಇವರನ್ನು ಮೂರನೇ ಅವಧಿಗೆ ಸಿಂಡಿಕೇಟ್ ಸದಸ್ಯರನ್ನಾಗಿ ಮಾಡಿದವರು ರಾಜ್ಯಪಾಲ ವಜುಬಾಯಿ ಪಟೇಲ್. ಇನ್ನು ಅವರಿಗೆ ಸುಳ್ಳು ಮಾಹಿತಿ ಕೊಟ್ಟು ಹರೀಶ್ ಆಚಾರ್ ರನ್ನು ಸಿಂಡಿಕೇಟ್ ಮೆಂಬರ್ ಮಾಡಿದ್ದು ವಿಶ್ವವಿದ್ಯಾನಿಲಯದ ಕುಲಪತಿ ಭೈರಪ್ಪ.

ಈ ಸುದ್ದಿಯನ್ನು ತುಳುನಾಡು ನ್ಯೂಸ್ ಮೊದಲಿಗೆ ಬಹಿರಂಗಪಡಿಸಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರಿನ ಶಿಕ್ಷಣಪ್ರೇಮಿಯೊಬ್ಬರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಈ ಗೋಲ್ ಮಾಲ್ ಅನ್ನು ರಾಜ್ಯಪಾಲರ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ. ಹಾಗೆ ತಮಗೆ ಪೂರಕ ದಾಖಲೆ ನೀಡುವಂತೆ ಕೋರಿದ್ದಾರೆ. ಅವರ ವಿನಂತಿಯಂತೆ ತುಳುನಾಡು ನ್ಯೂಸ್ ತನ್ನಲ್ಲಿರುವ ದಾಖಲೆಯನ್ನು ನೀಡಿ ವಿಶ್ವವಿದ್ಯಾನಿಲಯದ ಒಳಗಿನ ಅವ್ಯವಹಾರದ ವಿರುದ್ಧ ಹೋರಾಟವನ್ನು ಮುಂದುವರೆಸಲಿದೆ.
ರಾಜ್ಯಪಾಲರು ಈ ಕುರಿತು ಕ್ರಮ ಕೈಗೊಂಡು ವಿಶ್ವವಿದ್ಯಾನಿಲಯದಲ್ಲಿ ಆಗಿರುವ ಸಮಗ್ರ ಅವ್ಯವಹಾರದ ತನಿಖೆಗೆ ಸೂಚಿಸಿದರೆ ಆಗ ವಿಶ್ವವಿದ್ಯಾನಿಲಯದ ಒಳಗೆ ಸಂಚಲನ ಮೂಡುವುದು ನಿಶ್ಚಯ!

0
Shares
  • Share On Facebook
  • Tweet It


Mangaluru VV Bairappa


Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Vikram November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Vikram October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search