• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ವಿವಿಯ ಅಕ್ರಮದ ವಿರುದ್ಧ ಹೋರಾಟಕ್ಕೆ ಬೆಂಗಳೂರಿನ ಶಿಕ್ಷಣಪ್ರೇಮಿ ಸಿದ್ಧ!!

Vikram Posted On January 12, 2018
0


0
Shares
  • Share On Facebook
  • Tweet It

ಕರ್ನಾಟಕ ವಿಶ್ವವಿದ್ಯಾನಿಲಯದ ಆಕ್ಟ್ 2000ರ ಚಾಪ್ಟರ್-4 ರ ಕಲಾಂ-39 ರ ಎರಡನೇ ವಾಕ್ಯವೇ ವಿಶ್ವವಿದ್ಯಾನಿಲಯದಲ್ಲಿ ಎರಡನೇ ಅವಧಿಗೆ ಸಿಂಡಿಕೇಟ್ ಸದಸ್ಯನಾಗಿ ನೇಮಕವಾಗುವ ಅವಕಾಶ ಇಲ್ಲ. ಇಷ್ಟು ಸ್ಪಷ್ಟವಾಗಿ ಒಂದು ನಿಯಮ ಇದೆ ಎಂದಾದರೆ ಮಂಗಳೂರು ವಿಶ್ವವಿದ್ಯಾನಿಲಯದ ಒಳಗೆ ಏನು ಆಗುತ್ತಿದೆ ಎನ್ನುವುದನ್ನು ನಾವು ನೋಡಬೇಕಿದೆ.
ಒಂದು ಕಾಯಿದೆಯನ್ನೇ ಗಾಳಿಗೆ ತೂರಿ ಮಂಗಳೂರು ವಿಶ್ವವಿದ್ಯಾನಿಲಯ ತನ್ನ ಮನಸ್ಸಿಗೆ ಬಂದಂತೆ ವರ್ತಿಸುತ್ತಿದೆ ಎಂದರೆ ಅದನ್ನು ಹೇಳುವರು ಕೇಳುವವರು ಯಾರೂ ಇಲ್ವಾ ಎನ್ನುವ ಪ್ರಶ್ನೆ ಮೂಡುತ್ತದೆ.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಈಗ ಸಿಂಡಿಕೇಟ್ ಸದಸ್ಯರಾಗಿರುವ ಹರೀಶ್ ಆಚಾರ್ ಅವರದ್ದು ಈ ಬಾರಿ ಮೂರನೇ ಸಿಂಡಿಕೇಟ್ ಸದಸ್ಯತ್ವದ ಅವಧಿ. ಎರಡನೇ ಬಾರಿ ಸಿಂಡಿಕೇಟ್ ಸದಸ್ಯರಾಗುವುದೇ ಕಾನೂನುಬದ್ಧವಾಗಿ ತಪ್ಪಾಗಿರುವುದರಿಂದ ಇವರು ಹೇಗೆ ಮೂರನೇ ಬಾರಿ ಸದಸ್ಯರಾದರು ಎನ್ನುವುದು ಸೋಜಿಗ. ಇವರನ್ನು ಮೂರನೇ ಅವಧಿಗೆ ಸಿಂಡಿಕೇಟ್ ಸದಸ್ಯರನ್ನಾಗಿ ಮಾಡಿದವರು ರಾಜ್ಯಪಾಲ ವಜುಬಾಯಿ ಪಟೇಲ್. ಇನ್ನು ಅವರಿಗೆ ಸುಳ್ಳು ಮಾಹಿತಿ ಕೊಟ್ಟು ಹರೀಶ್ ಆಚಾರ್ ರನ್ನು ಸಿಂಡಿಕೇಟ್ ಮೆಂಬರ್ ಮಾಡಿದ್ದು ವಿಶ್ವವಿದ್ಯಾನಿಲಯದ ಕುಲಪತಿ ಭೈರಪ್ಪ.

ಈ ಸುದ್ದಿಯನ್ನು ತುಳುನಾಡು ನ್ಯೂಸ್ ಮೊದಲಿಗೆ ಬಹಿರಂಗಪಡಿಸಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರಿನ ಶಿಕ್ಷಣಪ್ರೇಮಿಯೊಬ್ಬರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಈ ಗೋಲ್ ಮಾಲ್ ಅನ್ನು ರಾಜ್ಯಪಾಲರ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ. ಹಾಗೆ ತಮಗೆ ಪೂರಕ ದಾಖಲೆ ನೀಡುವಂತೆ ಕೋರಿದ್ದಾರೆ. ಅವರ ವಿನಂತಿಯಂತೆ ತುಳುನಾಡು ನ್ಯೂಸ್ ತನ್ನಲ್ಲಿರುವ ದಾಖಲೆಯನ್ನು ನೀಡಿ ವಿಶ್ವವಿದ್ಯಾನಿಲಯದ ಒಳಗಿನ ಅವ್ಯವಹಾರದ ವಿರುದ್ಧ ಹೋರಾಟವನ್ನು ಮುಂದುವರೆಸಲಿದೆ.
ರಾಜ್ಯಪಾಲರು ಈ ಕುರಿತು ಕ್ರಮ ಕೈಗೊಂಡು ವಿಶ್ವವಿದ್ಯಾನಿಲಯದಲ್ಲಿ ಆಗಿರುವ ಸಮಗ್ರ ಅವ್ಯವಹಾರದ ತನಿಖೆಗೆ ಸೂಚಿಸಿದರೆ ಆಗ ವಿಶ್ವವಿದ್ಯಾನಿಲಯದ ಒಳಗೆ ಸಂಚಲನ ಮೂಡುವುದು ನಿಶ್ಚಯ!

0
Shares
  • Share On Facebook
  • Tweet It


Mangaluru VV Bairappa


Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Vikram September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Vikram September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search