• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ನೂರನೇ ಉಪಗ್ರಹ ಉಡಾವಣೆ ಮಾಡಿದ್ದಕ್ಕೆ ಪಾಕಿಸ್ತಾನ ಹೊಟ್ಟೆ ಉರಿಸಿಕೊಳ್ಳಲು ಕಾರಣವೇನು ಗೊತ್ತಾ?

TNN Correspondent Posted On January 13, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ಭಾರತದ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸುತ್ತಿದ್ದು, ಜಾಗತಿಕವಾಗಿ ಗುರುತಿಸಲ್ಪಡುತ್ತಿದೆ. ಇದರ ಭಾಗವಾಗಿ ಶುಕ್ರವಾರ ಭಾರತ ಭೂಪರಿವೀಕ್ಷಣಾ ಉಪಗ್ರಹ ಕಾರ್ಟೋಸ್ಯಾಟ್ ಸೇರಿ 31 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿ ಐತಿಹಾಸಿಕ ಸಾಧನೆ ಮಾಡಿದೆ.

ಆದರೆ ಇದೇ ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ…

ಹೌದು, ಭಾರತದ ಈ ಸಾಧನೆಗೆ ಪಾಕಿಸ್ತಾನ ಬೆಚ್ಚಿಬಿದ್ದಿದೆ. ಇದೇ ಕಾರಣಕ್ಕೆ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಆಕ್ರೋಶದ ಮಾತುಗಳನ್ನಾಡಿದ್ದು, “ಭಾರತ ಮಿಲಿಟರಿ ಉದ್ದೇಶಗಳಿಗಾಗಿ ಉಪಗ್ರಹ ಉಡಾವಣೆ ಮಾಡುವುದರಿಂದ ದೂರವಿರಬೇಕು” ಎಂದು ಪ್ರಕಟಣೆ ಹೊರಡಿಸಿದೆ.

ಭಾರತದ ಎಲ್ಲ ಬಾಹ್ಯಾಕಾಶ ತಂತ್ರಜ್ಞಾನ ಹಾಗೂ ಶುಕ್ರವಾರ ಉಡಾವಣೆಗೊಳಿಸಿದ ಉಪಗ್ರಹಗಳು ನಾಗರಿಕ ಹಾಗೂ ಮಿಲಿಟರಿ ಉದ್ದೇಶಕ್ಕೆ ಉಡಾವಣೆಗೊಳಿಸಲಾಗಿದೆ. ಇದು ಪ್ರಾದೇಶಿಕ ಭದ್ರತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದರಿಂದ ಭಾರತ ಇಂಥ ಉಪಗ್ರಹ ಉಡಾವಣೆಗೊಳಿಸಬಾರದು ಎಂದು ಪಾಕಿಸ್ತಾನ ಹೊಟ್ಟೆಕಿಚ್ಚು ವ್ಯಕ್ತಪಡಿಸಿದೆ.

ಹಾಗೆ ನೋಡಿದರೆ ಪಾಕಿಸ್ತಾನ 1961ರಲ್ಲೇ ಸ್ಪೇಸ್ ಆ್ಯಂಡ್ ಅಪ್ಪರ್ ಆಟ್ಮೋಸ್ಫೀಯರ್ ರಿಸರ್ಚ್ ಕಮಿಷನ್ (ಸುಪಾರ್ಕೋ) ಸ್ಥಾಪಿಸಿದ್ದು, ಭಾರತ ಅದಾದ ಎಂಟು ವರ್ಷಗಳ ಬಳಿಕ ಇಸ್ರೋ ಸ್ಥಾಪಿಸಿದೆ. ಆದರೂ ಬಾಹ್ಯಾಕಾಶ ಕ್ಷೇತ್ರದಲ್ಲಿ ನಿರೀಕ್ಷಿತ ಸಾಧನೆ ಮಾಡದ ಪಾಕಿಸ್ತಾನ ಈಗ ಮಿಲಿಟರಿ ಹೆಸರಿನಲ್ಲಿ ಭಾರತದ ವಿರುದ್ಧ ಮಾತನಾಡುತ್ತಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search