• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ನೂರನೇ ಉಪಗ್ರಹ ಉಡಾವಣೆ ಮಾಡಿದ್ದಕ್ಕೆ ಪಾಕಿಸ್ತಾನ ಹೊಟ್ಟೆ ಉರಿಸಿಕೊಳ್ಳಲು ಕಾರಣವೇನು ಗೊತ್ತಾ?

TNN Correspondent Posted On January 13, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ಭಾರತದ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸುತ್ತಿದ್ದು, ಜಾಗತಿಕವಾಗಿ ಗುರುತಿಸಲ್ಪಡುತ್ತಿದೆ. ಇದರ ಭಾಗವಾಗಿ ಶುಕ್ರವಾರ ಭಾರತ ಭೂಪರಿವೀಕ್ಷಣಾ ಉಪಗ್ರಹ ಕಾರ್ಟೋಸ್ಯಾಟ್ ಸೇರಿ 31 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿ ಐತಿಹಾಸಿಕ ಸಾಧನೆ ಮಾಡಿದೆ.

ಆದರೆ ಇದೇ ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ…

ಹೌದು, ಭಾರತದ ಈ ಸಾಧನೆಗೆ ಪಾಕಿಸ್ತಾನ ಬೆಚ್ಚಿಬಿದ್ದಿದೆ. ಇದೇ ಕಾರಣಕ್ಕೆ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಆಕ್ರೋಶದ ಮಾತುಗಳನ್ನಾಡಿದ್ದು, “ಭಾರತ ಮಿಲಿಟರಿ ಉದ್ದೇಶಗಳಿಗಾಗಿ ಉಪಗ್ರಹ ಉಡಾವಣೆ ಮಾಡುವುದರಿಂದ ದೂರವಿರಬೇಕು” ಎಂದು ಪ್ರಕಟಣೆ ಹೊರಡಿಸಿದೆ.

ಭಾರತದ ಎಲ್ಲ ಬಾಹ್ಯಾಕಾಶ ತಂತ್ರಜ್ಞಾನ ಹಾಗೂ ಶುಕ್ರವಾರ ಉಡಾವಣೆಗೊಳಿಸಿದ ಉಪಗ್ರಹಗಳು ನಾಗರಿಕ ಹಾಗೂ ಮಿಲಿಟರಿ ಉದ್ದೇಶಕ್ಕೆ ಉಡಾವಣೆಗೊಳಿಸಲಾಗಿದೆ. ಇದು ಪ್ರಾದೇಶಿಕ ಭದ್ರತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದರಿಂದ ಭಾರತ ಇಂಥ ಉಪಗ್ರಹ ಉಡಾವಣೆಗೊಳಿಸಬಾರದು ಎಂದು ಪಾಕಿಸ್ತಾನ ಹೊಟ್ಟೆಕಿಚ್ಚು ವ್ಯಕ್ತಪಡಿಸಿದೆ.

ಹಾಗೆ ನೋಡಿದರೆ ಪಾಕಿಸ್ತಾನ 1961ರಲ್ಲೇ ಸ್ಪೇಸ್ ಆ್ಯಂಡ್ ಅಪ್ಪರ್ ಆಟ್ಮೋಸ್ಫೀಯರ್ ರಿಸರ್ಚ್ ಕಮಿಷನ್ (ಸುಪಾರ್ಕೋ) ಸ್ಥಾಪಿಸಿದ್ದು, ಭಾರತ ಅದಾದ ಎಂಟು ವರ್ಷಗಳ ಬಳಿಕ ಇಸ್ರೋ ಸ್ಥಾಪಿಸಿದೆ. ಆದರೂ ಬಾಹ್ಯಾಕಾಶ ಕ್ಷೇತ್ರದಲ್ಲಿ ನಿರೀಕ್ಷಿತ ಸಾಧನೆ ಮಾಡದ ಪಾಕಿಸ್ತಾನ ಈಗ ಮಿಲಿಟರಿ ಹೆಸರಿನಲ್ಲಿ ಭಾರತದ ವಿರುದ್ಧ ಮಾತನಾಡುತ್ತಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search