• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೌದಿ ಐತಿಹಾಸಿಕ ನಿರ್ಧಾರ, ಪ್ರಥಮ ಬಾರಿಗೆ ಮಹಿಳೆಯರಿಗೆ ಸ್ಟೇಡಿಯಂನಲ್ಲಿ ಕ್ರೀಡೆ ನೋಡಲು ಅವಕಾಶ

TNN Correspondent Posted On January 13, 2018
0


0
Shares
  • Share On Facebook
  • Tweet It

ಸೌದಿ ಅರೇಬಿಯಾ: ಜಗತ್ತು ಬೆಳಕಿನ ವೇಗದಲ್ಲಿ ಸಾಗುತ್ತಿದ್ದರೇ, ಇನ್ನು ಕಠೋರ ನಿಯಮಗಳ ಮೂಲಕ ಮಹಿಳೆಯರನ್ನು ಶೋಷಿಸುತ್ತಿದ್ದ ಸೌದಿ ಅರೇಬಿಯಾ ಇದೀಗ ಬದಲಾವಣೆಯುತ್ತ ಸಾಗುತ್ತಿದೆ. ನಾಲ್ಕು ಗೋಡೆಯ ಕೋಣೆಗೆ ಸೀಮಿತವಾಗಿದ್ದ ಮಹಿಳೆಯರಿಗೆ ಸ್ವಾತಂತ್ರ್ಯ ನೀಡಲು ಸೌದಿ ಸರ್ಕಾರ ನಿರ್ಧಸಿದೆ. ಈ ನಿಟ್ಟಿನಲ್ಲಿ ಸೌದಿ ಅರೇಬಿಯಾದ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳೆಯರಿಗೆ ಫುಟಬಾಲ್ ಕ್ರೀಡೆಯನ್ನು ನೇರವಾಗಿ ನೋಡಲು ಸೌದಿ ಸರ್ಕಾರ ಅವಕಾಶ ನೀಡಿದ್ದು, ಮಹಿಳೆಯರು ಸ್ಟೇಡಿಯಂನಲ್ಲಿ ಫುಟಬಾಲ್ ಪಂದ್ಯಾವಳಿ ವೀಕ್ಷಿಸಿ ನೋಡಿ ಖುಷಿ ಪಟ್ಟರು.

 

ವಿಶ್ವವಿದ್ಯಾಲಯವೊಂದರ 300 ಯುವತಿಯರಿಗೆ ಜೆಡ್ಡಾ ರೆಡ್ ಸಿಟಿಯಲ್ಲಿರುವ ಪರ್ಲ್ ಕ್ರೀಡಾಂಗಣದಲ್ಲಿ ಫುಟಬಾಲ್ ಸೋಸರ್ ನೋಡಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಶತಮಾನಗಳಿಂದ ನಡೆದುಕೊಂಡು ಬಂದಿದ್ದ ಅನಿಷ್ಠ ಪದ್ಧತಿಯನ್ನು ಸೌದಿ ಸರ್ಕಾರ ಹೊಡೆದೊಡಿದೆ. ಈ ಮುಂಚೆ ಮಹಿಳೆಯರು  ಸ್ಟೇಡಿಯಂನಲ್ಲಿ  ಕ್ರೀಡೆಯನ್ನು ವೀಕ್ಷಿಸುವಂತಿರಲಿಲ್ಲ.

ಜೆಡ್ಡಾದ ಪರ್ಲ್ ಕ್ರೀಡಾಂಗಣದಲ್ಲಿ ಅಲ್‌ ಅಹ್ಲಿ ಮತ್ತು ಅಲ್‌ ಬತಿನ್‌ ತಂಡಗಳ ಮಧ್ಯೆ ಮೊದಲ ಬಾರಿಗೆ ನೇರವಾಗಿ ಕ್ರೀಡೆ ವೀಕ್ಷಿಸಿ ಮಹಿಳೆಯರು ಪತಿ, ಮಕ್ಕಳು ಜತೆಯಾಗಿ ಸಂಭ್ರಮಿಸಿದರು.  ಜೆಡ್ಡಾ ದಮಾಮ್, ರಿಯಾದ್ ಗಳಲ್ಲಿ ಪಂದ್ಯಗಳನ್ನು ಕುಟುಂಬ ಸಮೇತ ವೀಕ್ಷಿಸಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಸೌದಿ ಕ್ರೀಡಾ ಕ್ರೀಡಾ ಪ್ರಾಧಿಕಾರ ತಿಳಿಸಿದೆ.

ಇಂತಹ ಮಹತ್ವದ ಬೆಳವಣಿಗೆ ಎಂದೋ ನಡೆಯಬೇಕಿತ್ತು. ಜಗತ್ತು ಬದಲಾಗುತ್ತಿದೆ. ನಾವು ಬದಲಾಗಬೇಕು. ಅದಕ್ಕೆ ಇದು ಮುನ್ನುಡಿ, ಈ ನಿಯಮ ಜಾರಿಗೆ ತಂದಿರುವ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ ಎನ್ನುತ್ತಾರೆ . ಪಂದ್ಯ ವೀಕ್ಷಿಸಿದ ಮುನೀರಾ ಅಲ್‌ ಗಮ್ದಿ.

ಕ್ರಾಂತಿಕಾರಿ ಬದಲಾವಣೆಗಳು

ಸೌದಿಯಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ಕ್ರಾಂತಿಕಾರಿ ಬದಲಾವಣೆಗಳು ಆಗುತ್ತಿವೆ. ಇತ್ತೀಚೆಗೆ ಸೌದಿ ಅರೇಬಿಯಾದಲ್ಲಿ ಕ್ರೀಡೆಯಲ್ಲಿ ಯೋಗಕ್ಕೆ ಅವಕಾಶ ನೀಡಲಾಗಿತ್ತು, ಕಠೋರ ಇಸ್ಲಾಂ ನಿಯಮ ಪಾಲಕರಾದರೂ ಮಹಿಳೆಯರಿಗೆ ಕಾರು ಚಾಲನೆ ಪರವಾನಗಿ ನೀಡಲಾಗಿತ್ತು ಮತ್ತು ಮೊದಲ ಬಾರಿಗೆ ಮಹಿಳೆಯರಿಗಾಗಿ ಕಾರು ಪ್ರದರ್ಶನ ಆಯೋಜಿಸಲಾಗಿತ್ತು. ಇದೀಗ ಮಹಿಳೆಯರಿಗೆ ಸ್ಟೇಡಿಯಂ ನಲ್ಲಿ ಫುಟ್ಬಾಲ್ ಪಂದ್ಯ ವೀಕ್ಷಣೆಗೆ ಅವಕಾಶ ನೀಡುವ ಮೂಲಕ ಮಹಿಳೆಯರ ಸ್ವಾತಂತ್ರ್ಯಕ್ಕೆ ಬೆಲೆ ನೀಡುತ್ತಿದೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search