• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪದ್ಮಾವತ್ ಬಿಡುಗಡೆಯಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ ಕ್ಷತ್ರೀಯ ಮಹಿಳೆಯರು!

TNN Correspondent Posted On January 14, 2018
0


0
Shares
  • Share On Facebook
  • Tweet It

ಜೈಪುರ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ, ರಣವೀರ್ ಕಪೂರ್, ದೀಪಿಕಾ ಪಡುಕೋಣೆ ನಟಿಸಿರುವ ಪದ್ಮಾವತ್ ಚಿತ್ರ ವಿವಾದ, ಸಮಸ್ಯೆಗಳಿಂದ ಮುಕ್ತಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಆರಂಭದಿಂದಲೂ ಹಲವು ಗೊಂದಲ, ಅಡ್ಡಗಾಲು ಆವರಿಸಿದ್ದು, ಚಿತ್ರದ ಹೆಸರು ಘೋಷಣೆಯಾಗುತ್ತಲೇ ವಿವಾದ ಆರಂಭವಾಯಿತು.

ಬಳಿಕ ಚಿತ್ರ ವಿಳಂಬವಾಯಿತು, ಕಳೆದ ವರ್ಷದ ಡಿಸೆಂಬರ್ 1ರಂದು ಬಿಡುಗಡೆಗೆ ಸಿದ್ಧವಾಯಿತಾದರೂ ರಜಪೂತರ ವಿರೋಧದಿಂದ ಮುಂದೂಡಲಾಯಿತು. ಕೊನೆಗೆ ಹೆಸರು ಬದಲಾಯಿಸಿಕೊಂಡು ಜನವರಿ ಅಂತ್ಯಕ್ಕೆ ಬಿಡುಗಡೆಗೆ ಸಿದ್ಧವಾಗಿರುವ ಬೆನ್ನಲ್ಲೇ ಈಗ ಮತ್ತೊಂದು ಕಂಟಕ ಎದುರಾಗಿದೆ.

ಹೌದು, ಪದ್ಮಾವತ್ ಚಿತ್ರ ಬಿಡುಗಡೆಯಾದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಜೈಪುರದ ಚಿತ್ತೋರ್ ಗಡದ ಕ್ಷತ್ರೀಯ ಮಹಿಳೆಯರು ಎಚ್ಚರಿಕೆಯೊಡ್ಡಿದ್ದು, ಚಿತ್ರತಂಡದಲ್ಲಿ ಆತಂಕ ಮೂಡಿಸಿದೆ.

ಚಿತ್ತೋರ್ ಗಡದಲ್ಲಿ ಆಯೋಜಿಸಿದ್ದ ಸರ್ವಸಮಾಜದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಪದ್ಮಾವತ್ ಚಿತ್ರದ ವಿರುದ್ಧ ಹಂತ ಹಂತಗಳಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು. ಅಲ್ಲದೆ ಹಾಗೊಂದು ವೇಳೆ ಚಿತ್ರ ಬಿಡುಗಡೆಗೊಳಿಸಿದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಕ್ಷತ್ರೀಯ ಮಹಿಳೆಯರು ಎಚ್ಚರಿಸಿದ್ದರು. ಸುಮಾರು ಜನರನ್ನೊಳಗೊಂಡ ಸಭೆಯಲ್ಲಿ ನಗರದ ಶ್ರೀಮಂತ ಮನೆತನದ 100ಕ್ಕೂ ಅಧಿಕ ಮಹಿಳೆಯರು ಪಾಲ್ಗೊಂಡಿದ್ದರು.

ಅಷ್ಟೇ ಅಲ್ಲ, ಚಲನಚಿತ್ರದ ವಿರುದ್ಧ ಜನವರಿ 17ರಂದು ಚಿತ್ತೋರ್ ಗಡ ವ್ಯಾಪ್ತಿಯ ಎಲ್ಲ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು ಎಂದು ರಜಪೂತ್ ಕರ್ಣಿ ಸೇನಾ ಸಂಘಟನೆಯ ವಕ್ತಾರ ವೀರೇಂದ್ರ ಸಿಂಗ್ ತಿಳಿಸಿದರು.

ರಜಪೂತರ ರಾಣಿ ಪದ್ಮಾವತಿಯನ್ನು ಅಲ್ಲಾವುದ್ದೀನ್ ಖಿಲ್ಜಿ ಜತೆ ಆತ್ಮೀಯವಾಗಿ ಇರುವ ದೃಶ್ಯಗಳಿದ್ದು, ಇದರಿಂದ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ. ಹಾಗಾಗಿ ಚಿತ್ರ ಬಿಡುಗಡೆಗೊಳಿಸಬಾರದು ಎಂಬುದು ರಜಪೂತ ಸಂಘಟನೆಗಳ ಒತ್ತಾಯವಾಗಿದೆ.

ಮೊದಲು ಪದ್ಮಾವತಿ ಎಂದು ಚಿತ್ರದ ಹೆಸರು ನಿಗದಿಗೊಳಿಸಲಾಗಿತ್ತು. ಆದರೆ ವಿರೋಧದ ಹಿನ್ನೆಲೆಯಲ್ಲಿ ಚಿತ್ರದ ಹೆಸರನ್ನು ಪದ್ಮಾವತ್ ಎಂದು ಹೆಸರು ಬದಲಾಯಿಸಿದ್ದಲ್ಲದೆ, ಹಲವು ಮಾರ್ಪಾಡು ಮಾಡಿದ್ದ ಸೆನ್ಸಾರ್ ಮಂಡಳಿ ಜನವರಿ 25ರಂದು ಬಿಡುಗಡೆಗೆ ತಿಳಿಸಿತ್ತು. ಆದರೆ ಈಗ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿರುವುದರಿಂದ ಚಿತ್ರ ಬಿಡುಗಡೆಯಾಗುವುದೇ ಎಂಬ ಅನುಮಾನ ಕಾಡುವಂತಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search