• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪದ್ಮಾವತ್ ಬಿಡುಗಡೆಯಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ ಕ್ಷತ್ರೀಯ ಮಹಿಳೆಯರು!

TNN Correspondent Posted On January 14, 2018


  • Share On Facebook
  • Tweet It

ಜೈಪುರ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ, ರಣವೀರ್ ಕಪೂರ್, ದೀಪಿಕಾ ಪಡುಕೋಣೆ ನಟಿಸಿರುವ ಪದ್ಮಾವತ್ ಚಿತ್ರ ವಿವಾದ, ಸಮಸ್ಯೆಗಳಿಂದ ಮುಕ್ತಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಆರಂಭದಿಂದಲೂ ಹಲವು ಗೊಂದಲ, ಅಡ್ಡಗಾಲು ಆವರಿಸಿದ್ದು, ಚಿತ್ರದ ಹೆಸರು ಘೋಷಣೆಯಾಗುತ್ತಲೇ ವಿವಾದ ಆರಂಭವಾಯಿತು.

ಬಳಿಕ ಚಿತ್ರ ವಿಳಂಬವಾಯಿತು, ಕಳೆದ ವರ್ಷದ ಡಿಸೆಂಬರ್ 1ರಂದು ಬಿಡುಗಡೆಗೆ ಸಿದ್ಧವಾಯಿತಾದರೂ ರಜಪೂತರ ವಿರೋಧದಿಂದ ಮುಂದೂಡಲಾಯಿತು. ಕೊನೆಗೆ ಹೆಸರು ಬದಲಾಯಿಸಿಕೊಂಡು ಜನವರಿ ಅಂತ್ಯಕ್ಕೆ ಬಿಡುಗಡೆಗೆ ಸಿದ್ಧವಾಗಿರುವ ಬೆನ್ನಲ್ಲೇ ಈಗ ಮತ್ತೊಂದು ಕಂಟಕ ಎದುರಾಗಿದೆ.

ಹೌದು, ಪದ್ಮಾವತ್ ಚಿತ್ರ ಬಿಡುಗಡೆಯಾದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಜೈಪುರದ ಚಿತ್ತೋರ್ ಗಡದ ಕ್ಷತ್ರೀಯ ಮಹಿಳೆಯರು ಎಚ್ಚರಿಕೆಯೊಡ್ಡಿದ್ದು, ಚಿತ್ರತಂಡದಲ್ಲಿ ಆತಂಕ ಮೂಡಿಸಿದೆ.

ಚಿತ್ತೋರ್ ಗಡದಲ್ಲಿ ಆಯೋಜಿಸಿದ್ದ ಸರ್ವಸಮಾಜದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಪದ್ಮಾವತ್ ಚಿತ್ರದ ವಿರುದ್ಧ ಹಂತ ಹಂತಗಳಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು. ಅಲ್ಲದೆ ಹಾಗೊಂದು ವೇಳೆ ಚಿತ್ರ ಬಿಡುಗಡೆಗೊಳಿಸಿದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಕ್ಷತ್ರೀಯ ಮಹಿಳೆಯರು ಎಚ್ಚರಿಸಿದ್ದರು. ಸುಮಾರು ಜನರನ್ನೊಳಗೊಂಡ ಸಭೆಯಲ್ಲಿ ನಗರದ ಶ್ರೀಮಂತ ಮನೆತನದ 100ಕ್ಕೂ ಅಧಿಕ ಮಹಿಳೆಯರು ಪಾಲ್ಗೊಂಡಿದ್ದರು.

ಅಷ್ಟೇ ಅಲ್ಲ, ಚಲನಚಿತ್ರದ ವಿರುದ್ಧ ಜನವರಿ 17ರಂದು ಚಿತ್ತೋರ್ ಗಡ ವ್ಯಾಪ್ತಿಯ ಎಲ್ಲ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು ಎಂದು ರಜಪೂತ್ ಕರ್ಣಿ ಸೇನಾ ಸಂಘಟನೆಯ ವಕ್ತಾರ ವೀರೇಂದ್ರ ಸಿಂಗ್ ತಿಳಿಸಿದರು.

ರಜಪೂತರ ರಾಣಿ ಪದ್ಮಾವತಿಯನ್ನು ಅಲ್ಲಾವುದ್ದೀನ್ ಖಿಲ್ಜಿ ಜತೆ ಆತ್ಮೀಯವಾಗಿ ಇರುವ ದೃಶ್ಯಗಳಿದ್ದು, ಇದರಿಂದ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ. ಹಾಗಾಗಿ ಚಿತ್ರ ಬಿಡುಗಡೆಗೊಳಿಸಬಾರದು ಎಂಬುದು ರಜಪೂತ ಸಂಘಟನೆಗಳ ಒತ್ತಾಯವಾಗಿದೆ.

ಮೊದಲು ಪದ್ಮಾವತಿ ಎಂದು ಚಿತ್ರದ ಹೆಸರು ನಿಗದಿಗೊಳಿಸಲಾಗಿತ್ತು. ಆದರೆ ವಿರೋಧದ ಹಿನ್ನೆಲೆಯಲ್ಲಿ ಚಿತ್ರದ ಹೆಸರನ್ನು ಪದ್ಮಾವತ್ ಎಂದು ಹೆಸರು ಬದಲಾಯಿಸಿದ್ದಲ್ಲದೆ, ಹಲವು ಮಾರ್ಪಾಡು ಮಾಡಿದ್ದ ಸೆನ್ಸಾರ್ ಮಂಡಳಿ ಜನವರಿ 25ರಂದು ಬಿಡುಗಡೆಗೆ ತಿಳಿಸಿತ್ತು. ಆದರೆ ಈಗ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿರುವುದರಿಂದ ಚಿತ್ರ ಬಿಡುಗಡೆಯಾಗುವುದೇ ಎಂಬ ಅನುಮಾನ ಕಾಡುವಂತಾಗಿದೆ.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search