• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶ ಕಾಯುವ ಆ ಯೋಧ ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನೂ ರಕ್ಷಿಸಿ ಮಾನವೀಯತೆ ಮೆರೆದ!

TNN Correspondent Posted On January 14, 2018
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ಸೈನಿಕರು ಎಂದರೇನೇ ಹಾಗೆ. ಅವರು ಎಲ್ಲೇ ಇರಲಿ, ಹೇಗೆಯೇ ಇರಲಿ, ತಮಗೆ ಯಾವುದೇ ತೊಂದರೆಯಾದರೂ ಬರಲಿ, ದೇಶ ಹಾಗೂ ದೇಶದ ಜನರಿಗೆ ಅವರು ಸದಾ ಸಿದ್ಧ. ಇದು 1962ರ ಚೀನಾ ವಿರುದ್ಧ ನಡೆದ ಯುದ್ಧದಿಂದ ಈ ಕ್ಷಣದವರೆಗೂ ಸಾಬೀತಾಗುತ್ತಲೇ ಇದೆ.

ಈಗ ಇಂಥಾದ್ದೇ ಕರ್ತವ್ಯ ನಿಷ್ಠೆಯನ್ನು ಸಿಆರ್ ಪಿಎಫ್ ಯೋಧರೊಬ್ಬರು ಮೆರೆದಿದ್ದು, ಕೆನಾಲ್ ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯೊಬ್ಬರನ್ನು ಸಿಆರ್ ಪಿಎಫ್ ಯೋಧ ಕಾಪಾಡಿದ್ದಾರೆ. ಮಹಿಳೆಯನ್ನು ಲಕ್ಷ್ಮೀ ಪಿ. ಎಂದು ಗುರುತಿಸಲಾಗಿದೆ.

ಹೌದು, ಬವಾನಾ ಪ್ರದೇಶದ ಕೆನಾಲ್ ಒಂದರಲ್ಲಿ ಮಹಿಳೆಯೊಬ್ಬರು ಕಾಲು ಜಾರಿಬಿದ್ದಿದ್ದು, ಮುಳುಗುತ್ತಿದ್ದರು. ಆಗ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿದ್ದ ಸಿಆರ್ ಪಿಎಫ್ ಯೋಧ ಪ್ರಮೋದ್ ಕುಮಾರ್ ಚೌಹಾಣ್, ಮಹಿಳೆಯನ್ನು ರಕ್ಷಿಸಿದ್ದಾರೆ.

ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ನೋಡಿದ ಯೋಧ ಮೊದಲಿಗೆ ತಮ್ಮ ಸಿಬ್ಬಂದಿಗೆ ಮಾಹಿತಿ ನೀಡಿ, ನೀರಿಗೆ ಜಿಗಿದು ರಕ್ಷಿಸಿದ್ದಾರೆ. ಬಳಿಕ ಸಿಆರ್ ಪಿಎಫ್ ಶಿಬಿರದಲ್ಲಿ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸ್ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಮಹಿಳೆ ನರೇಲಾ ಪ್ರದೇಶದ ನಿವಾಸಿಯಾಗಿದ್ದು, ಕಾಲು ಜಾರಿ ನೀರಿಗೆ ಬಿದ್ದಿದ್ದಾಗಿ ತಿಳಿಸಿದ್ದಾರೆ. ಸಿಆರ್ ಪಿಎಫ್ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಿಆರ್ ಪಿಎಫ್ ಯೋಧನ ಸಮಯಪ್ರಜ್ಞೆ ಹಾಗೂ ಮಾನವೀಯತೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search