• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶ ಕಾಯುವ ಆ ಯೋಧ ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನೂ ರಕ್ಷಿಸಿ ಮಾನವೀಯತೆ ಮೆರೆದ!

TNN Correspondent Posted On January 14, 2018
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ಸೈನಿಕರು ಎಂದರೇನೇ ಹಾಗೆ. ಅವರು ಎಲ್ಲೇ ಇರಲಿ, ಹೇಗೆಯೇ ಇರಲಿ, ತಮಗೆ ಯಾವುದೇ ತೊಂದರೆಯಾದರೂ ಬರಲಿ, ದೇಶ ಹಾಗೂ ದೇಶದ ಜನರಿಗೆ ಅವರು ಸದಾ ಸಿದ್ಧ. ಇದು 1962ರ ಚೀನಾ ವಿರುದ್ಧ ನಡೆದ ಯುದ್ಧದಿಂದ ಈ ಕ್ಷಣದವರೆಗೂ ಸಾಬೀತಾಗುತ್ತಲೇ ಇದೆ.

ಈಗ ಇಂಥಾದ್ದೇ ಕರ್ತವ್ಯ ನಿಷ್ಠೆಯನ್ನು ಸಿಆರ್ ಪಿಎಫ್ ಯೋಧರೊಬ್ಬರು ಮೆರೆದಿದ್ದು, ಕೆನಾಲ್ ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯೊಬ್ಬರನ್ನು ಸಿಆರ್ ಪಿಎಫ್ ಯೋಧ ಕಾಪಾಡಿದ್ದಾರೆ. ಮಹಿಳೆಯನ್ನು ಲಕ್ಷ್ಮೀ ಪಿ. ಎಂದು ಗುರುತಿಸಲಾಗಿದೆ.

ಹೌದು, ಬವಾನಾ ಪ್ರದೇಶದ ಕೆನಾಲ್ ಒಂದರಲ್ಲಿ ಮಹಿಳೆಯೊಬ್ಬರು ಕಾಲು ಜಾರಿಬಿದ್ದಿದ್ದು, ಮುಳುಗುತ್ತಿದ್ದರು. ಆಗ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿದ್ದ ಸಿಆರ್ ಪಿಎಫ್ ಯೋಧ ಪ್ರಮೋದ್ ಕುಮಾರ್ ಚೌಹಾಣ್, ಮಹಿಳೆಯನ್ನು ರಕ್ಷಿಸಿದ್ದಾರೆ.

ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ನೋಡಿದ ಯೋಧ ಮೊದಲಿಗೆ ತಮ್ಮ ಸಿಬ್ಬಂದಿಗೆ ಮಾಹಿತಿ ನೀಡಿ, ನೀರಿಗೆ ಜಿಗಿದು ರಕ್ಷಿಸಿದ್ದಾರೆ. ಬಳಿಕ ಸಿಆರ್ ಪಿಎಫ್ ಶಿಬಿರದಲ್ಲಿ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸ್ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಮಹಿಳೆ ನರೇಲಾ ಪ್ರದೇಶದ ನಿವಾಸಿಯಾಗಿದ್ದು, ಕಾಲು ಜಾರಿ ನೀರಿಗೆ ಬಿದ್ದಿದ್ದಾಗಿ ತಿಳಿಸಿದ್ದಾರೆ. ಸಿಆರ್ ಪಿಎಫ್ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಿಆರ್ ಪಿಎಫ್ ಯೋಧನ ಸಮಯಪ್ರಜ್ಞೆ ಹಾಗೂ ಮಾನವೀಯತೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search