• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮಾನ್ಯ ಮುಖ್ಯಮಂತ್ರಿಯವರೇ ನಿಮ್ಮದು ಯಾವ ರೀತಿಯಲ್ಲಿ ಭ್ರಷ್ಟಾಚಾರರಹಿತ ಸರ್ಕಾರ ಎಂದು ಹೇಳುವಿರಾ?

ಜಯಂತ್ ಭಟ್ ಬೆಂಗಳೂರು Posted On January 14, 2018
0


0
Shares
  • Share On Facebook
  • Tweet It

ಯಾವುದೇ ವೇದಿಕೆ ಸಿಗಲಿ, ಮೈಕ್ ಸಿಗಲಿ, ಎಲ್ಲೇ ನಾಲ್ಕು ಜನರು ಸೇರಿರುವ ಸಭೆ ಸಿಗಲಿ, ಸಾಮಾಜಿಕ ಜಾಲತಾಣದಲ್ಲಾಗಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಮಾತ್ರ ಒಂದೇ ವರಾತ…

ನಮ್ಮದು ಭ್ರಷ್ಟಾಚಾರ ಮುಕ್ತ, ಅಭಿವೃದ್ಧಿಪರ, ಕಳಂಕರಹಿತ ಸರ್ಕಾರ. ನಮ್ಮ ಅವಧಿಯಲ್ಲಿ ಯಾವುದೇ ಅಕ್ರಮ, ಅವ್ಯವಹಾರ ನಡೆದೇ ಇಲ್ಲ ಎಂಬಂಥ ಮಾತನಾಡುತ್ತಾರೆ. ತಾವು ಮುಖ್ಯಮಂತ್ರಿಯಾಗಿ ಅವಧಿ ಪೂರೈಸಿದ್ದನ್ನೇ ಮಹಾನ್ ಸಾಧನೆ ಎಂಬಂತೆ ಹೇಳುತ್ತಾರೆ.

ಹಾಗಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವ ಕಾಂಗ್ರೆಸ್ ಸರ್ಕಾರ ನಿಜವಾಗಿಯೂ ಕಳಂಕ ರಹಿತ ಸರ್ಕಾರವಾ? ಇವರ ಅವಧಿಯಲ್ಲಿ ಯಾವುದೇ ಅಕ್ರಮ, ಭ್ರಷ್ಟಾಚಾರ ನಡೆದೇ ಇಲ್ಲವಾ? ಅಷ್ಟರಮಟ್ಟಿಗೆ ಈ ಸರ್ಕಾರ ನಿಜವಾಗಿಯೂ ಅಭಿವೃದ್ಧಿ ಪರವಾ?

ಮುಖ್ಯಮಂತ್ರಿಯವರು ಚುನಾವಣೆ ಹೊಸ್ತಿಲಿನಲ್ಲಿ ಯಾರನ್ನು ಮರುಳು ಮಾಡಲು ಹೊರಟಿದ್ದಾರೆ? ಯಾರ ಕಿವಿ ಮೇಲೆ ಹೂ ಇಡಲು ಹೊರಟಿದ್ದಾರೆ?

ಪಾಂಡವಪುರ ತಾಲೂಕು ಬೇಬಿಬೆಟ್ಟದ ಕಾವಲ್ ಸರ್ವೇ ನಂ 1ರಲ್ಲಿರುವ ಮೈಸೂರು ಮಹಾರಾಜರ ಸ್ವತ್ತನ್ನು ಕಬಳಿಸಿದ್ದಲ್ಲದೇ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿರುವವರಿಗೆ ಸಹಕಾರ ಹಾಗೂ ನೆರವು ನೀಡುತ್ತಿರುವ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ 8 ಜನರ ವಿರುದ್ಧ ಮಂಡ್ಯ ಲೋಕಾಯುಕ್ತಕ್ಕೆ ಅದಾಗಲೇ ದೂರು ನೀಡಲಾಗಿದೆ.

ಅತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಗಿನ ಕೆಳಗಡೆಯೇ ಎಂಎಂಎಲ್ ಮತ್ತು ಸುಬ್ಬರಾಯನಹಳ್ಳಿ ಗಣಿ ಪ್ರದೇಶದಲ್ಲಿ 5500 ಕೋಟಿ ರೂ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ದಾಖಲೆ ಸಮೇತ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಾಹಿತಿ ನೀಡಿದ್ದಾರೆ.

ಇದೆಲ್ಲ ಏನನ್ನು ತೋರಿಸುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ? ಕಳಂಕರಹಿತ ಆಡಳಿತ ನೀಡುವುದು ಎಂದರೆ ಇದೇನಾ ನಿಮ್ಮ ಪ್ರಕಾರ? ಯಾವ ಜನಾರ್ದನ ರೆಡ್ಡಿ, ಶ್ರೀರಾಮುಲು ಅವರನ್ನು ಟೀಕಿಸಿದ್ದ ನೀವೇ ಅಕ್ರಮ ಗಣಿಗಾರಿಕೆಗೆ ಕುಮ್ಮಕ್ಕು ನೀಡುತ್ತಿದ್ದೀರಾ? ಈ ಎಲ್ಲ ಆರೋಪಗಳ ಬಗ್ಗೆ ನೀವೇಕೆ ಮಾತನಾಡುತ್ತಿಲ್ಲ? ಅಷ್ಟಕ್ಕೂ ಬೆಂಕಿ ಇಲ್ಲದೆಯೇ ಹೊಗೆಯಾಡುತ್ತದೆಯೇ?

ನೀವು ಆಡಳಿತಕ್ಕೆ ಬರುತ್ತಲೇ ಸೀಮಿತ ವರ್ಗಕ್ಕೆ ಯೋಜನೆ ಜಾರಿಗೊಳಿಸಿದಿರಿ. ದಕ್ಷ ಅಧಿಕಾರಿಗಳಿಗೆ ವರ್ಗಾವಣೆ ಮಾಡಿಸಿದಿರಿ. ಎಂ.ಕೆ.ಗಣಪತಿ ಸಾವಿನ ಪ್ರಕರಣದಲ್ಲಿ ನಿಮ್ಮ ಸಚಿವರ ರಕ್ಷಣೆಗೆ ಮುಂದಾದಿದಿರಿ. ಮತಾಂಧ ಟಿಪ್ಪು ಸುಲ್ತಾನ ಜಯಂತಿ ಆಚರಿಸಿ ಈಗ ಹಿಂದು ಎಂಬ ನಾಟಕವಾಡುತ್ತಿದ್ದೀರಿ. ದುಬಾರಿ ವಾಚಿನ ಮೂಲಕ ಸದ್ದು ಮಾಡಿದಿರಿ. ನಿಮ್ಮದೇ ಸರ್ಕಾರದ ಮೇಟಿಯ ರಾಸಲೀಲೆಯನ್ನು ಕರ್ನಾಟಕವೇ ನೋಡಿದರೂ ಅವರಿಗೆ ಕ್ಲೀನ್ ಚಿಟ್ ಸಿಗುವಂತಾಯಿತು. ನಿಮ್ಮದೇ ಸರ್ಕಾರದ ಸಚಿವರೊಬ್ಬರು ರೆಸಾರ್ಟ್ ರಾಜಕಾರಣ ಮಾಡಿದರು. ಹೇಳಿ ಮುಖ್ಯಮಂತ್ರಿಯವರೇ ನಿಮ್ಮದು ಕಳಂಕ, ನಿಷ್ಪಕ್ಷಪಾತ, ಪಾರದರ್ಶಕತೆಯುಳ್ಳ ಸರ್ಕಾರವಾ?

 

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
ಜಯಂತ್ ಭಟ್ ಬೆಂಗಳೂರು November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
ಜಯಂತ್ ಭಟ್ ಬೆಂಗಳೂರು October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search