• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮಾನ್ಯ ಮುಖ್ಯಮಂತ್ರಿಯವರೇ ನಿಮ್ಮದು ಯಾವ ರೀತಿಯಲ್ಲಿ ಭ್ರಷ್ಟಾಚಾರರಹಿತ ಸರ್ಕಾರ ಎಂದು ಹೇಳುವಿರಾ?

ಜಯಂತ್ ಭಟ್ ಬೆಂಗಳೂರು Posted On January 14, 2018
0


0
Shares
  • Share On Facebook
  • Tweet It

ಯಾವುದೇ ವೇದಿಕೆ ಸಿಗಲಿ, ಮೈಕ್ ಸಿಗಲಿ, ಎಲ್ಲೇ ನಾಲ್ಕು ಜನರು ಸೇರಿರುವ ಸಭೆ ಸಿಗಲಿ, ಸಾಮಾಜಿಕ ಜಾಲತಾಣದಲ್ಲಾಗಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಮಾತ್ರ ಒಂದೇ ವರಾತ…

ನಮ್ಮದು ಭ್ರಷ್ಟಾಚಾರ ಮುಕ್ತ, ಅಭಿವೃದ್ಧಿಪರ, ಕಳಂಕರಹಿತ ಸರ್ಕಾರ. ನಮ್ಮ ಅವಧಿಯಲ್ಲಿ ಯಾವುದೇ ಅಕ್ರಮ, ಅವ್ಯವಹಾರ ನಡೆದೇ ಇಲ್ಲ ಎಂಬಂಥ ಮಾತನಾಡುತ್ತಾರೆ. ತಾವು ಮುಖ್ಯಮಂತ್ರಿಯಾಗಿ ಅವಧಿ ಪೂರೈಸಿದ್ದನ್ನೇ ಮಹಾನ್ ಸಾಧನೆ ಎಂಬಂತೆ ಹೇಳುತ್ತಾರೆ.

ಹಾಗಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವ ಕಾಂಗ್ರೆಸ್ ಸರ್ಕಾರ ನಿಜವಾಗಿಯೂ ಕಳಂಕ ರಹಿತ ಸರ್ಕಾರವಾ? ಇವರ ಅವಧಿಯಲ್ಲಿ ಯಾವುದೇ ಅಕ್ರಮ, ಭ್ರಷ್ಟಾಚಾರ ನಡೆದೇ ಇಲ್ಲವಾ? ಅಷ್ಟರಮಟ್ಟಿಗೆ ಈ ಸರ್ಕಾರ ನಿಜವಾಗಿಯೂ ಅಭಿವೃದ್ಧಿ ಪರವಾ?

ಮುಖ್ಯಮಂತ್ರಿಯವರು ಚುನಾವಣೆ ಹೊಸ್ತಿಲಿನಲ್ಲಿ ಯಾರನ್ನು ಮರುಳು ಮಾಡಲು ಹೊರಟಿದ್ದಾರೆ? ಯಾರ ಕಿವಿ ಮೇಲೆ ಹೂ ಇಡಲು ಹೊರಟಿದ್ದಾರೆ?

ಪಾಂಡವಪುರ ತಾಲೂಕು ಬೇಬಿಬೆಟ್ಟದ ಕಾವಲ್ ಸರ್ವೇ ನಂ 1ರಲ್ಲಿರುವ ಮೈಸೂರು ಮಹಾರಾಜರ ಸ್ವತ್ತನ್ನು ಕಬಳಿಸಿದ್ದಲ್ಲದೇ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿರುವವರಿಗೆ ಸಹಕಾರ ಹಾಗೂ ನೆರವು ನೀಡುತ್ತಿರುವ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ 8 ಜನರ ವಿರುದ್ಧ ಮಂಡ್ಯ ಲೋಕಾಯುಕ್ತಕ್ಕೆ ಅದಾಗಲೇ ದೂರು ನೀಡಲಾಗಿದೆ.

ಅತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಗಿನ ಕೆಳಗಡೆಯೇ ಎಂಎಂಎಲ್ ಮತ್ತು ಸುಬ್ಬರಾಯನಹಳ್ಳಿ ಗಣಿ ಪ್ರದೇಶದಲ್ಲಿ 5500 ಕೋಟಿ ರೂ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ದಾಖಲೆ ಸಮೇತ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಾಹಿತಿ ನೀಡಿದ್ದಾರೆ.

ಇದೆಲ್ಲ ಏನನ್ನು ತೋರಿಸುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ? ಕಳಂಕರಹಿತ ಆಡಳಿತ ನೀಡುವುದು ಎಂದರೆ ಇದೇನಾ ನಿಮ್ಮ ಪ್ರಕಾರ? ಯಾವ ಜನಾರ್ದನ ರೆಡ್ಡಿ, ಶ್ರೀರಾಮುಲು ಅವರನ್ನು ಟೀಕಿಸಿದ್ದ ನೀವೇ ಅಕ್ರಮ ಗಣಿಗಾರಿಕೆಗೆ ಕುಮ್ಮಕ್ಕು ನೀಡುತ್ತಿದ್ದೀರಾ? ಈ ಎಲ್ಲ ಆರೋಪಗಳ ಬಗ್ಗೆ ನೀವೇಕೆ ಮಾತನಾಡುತ್ತಿಲ್ಲ? ಅಷ್ಟಕ್ಕೂ ಬೆಂಕಿ ಇಲ್ಲದೆಯೇ ಹೊಗೆಯಾಡುತ್ತದೆಯೇ?

ನೀವು ಆಡಳಿತಕ್ಕೆ ಬರುತ್ತಲೇ ಸೀಮಿತ ವರ್ಗಕ್ಕೆ ಯೋಜನೆ ಜಾರಿಗೊಳಿಸಿದಿರಿ. ದಕ್ಷ ಅಧಿಕಾರಿಗಳಿಗೆ ವರ್ಗಾವಣೆ ಮಾಡಿಸಿದಿರಿ. ಎಂ.ಕೆ.ಗಣಪತಿ ಸಾವಿನ ಪ್ರಕರಣದಲ್ಲಿ ನಿಮ್ಮ ಸಚಿವರ ರಕ್ಷಣೆಗೆ ಮುಂದಾದಿದಿರಿ. ಮತಾಂಧ ಟಿಪ್ಪು ಸುಲ್ತಾನ ಜಯಂತಿ ಆಚರಿಸಿ ಈಗ ಹಿಂದು ಎಂಬ ನಾಟಕವಾಡುತ್ತಿದ್ದೀರಿ. ದುಬಾರಿ ವಾಚಿನ ಮೂಲಕ ಸದ್ದು ಮಾಡಿದಿರಿ. ನಿಮ್ಮದೇ ಸರ್ಕಾರದ ಮೇಟಿಯ ರಾಸಲೀಲೆಯನ್ನು ಕರ್ನಾಟಕವೇ ನೋಡಿದರೂ ಅವರಿಗೆ ಕ್ಲೀನ್ ಚಿಟ್ ಸಿಗುವಂತಾಯಿತು. ನಿಮ್ಮದೇ ಸರ್ಕಾರದ ಸಚಿವರೊಬ್ಬರು ರೆಸಾರ್ಟ್ ರಾಜಕಾರಣ ಮಾಡಿದರು. ಹೇಳಿ ಮುಖ್ಯಮಂತ್ರಿಯವರೇ ನಿಮ್ಮದು ಕಳಂಕ, ನಿಷ್ಪಕ್ಷಪಾತ, ಪಾರದರ್ಶಕತೆಯುಳ್ಳ ಸರ್ಕಾರವಾ?

 

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
ಜಯಂತ್ ಭಟ್ ಬೆಂಗಳೂರು May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
ಜಯಂತ್ ಭಟ್ ಬೆಂಗಳೂರು May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search