• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮಾನ್ಯ ಮುಖ್ಯಮಂತ್ರಿಯವರೇ ನಿಮ್ಮದು ಯಾವ ರೀತಿಯಲ್ಲಿ ಭ್ರಷ್ಟಾಚಾರರಹಿತ ಸರ್ಕಾರ ಎಂದು ಹೇಳುವಿರಾ?

ಜಯಂತ್ ಭಟ್ ಬೆಂಗಳೂರು Posted On January 14, 2018
0


0
Shares
  • Share On Facebook
  • Tweet It

ಯಾವುದೇ ವೇದಿಕೆ ಸಿಗಲಿ, ಮೈಕ್ ಸಿಗಲಿ, ಎಲ್ಲೇ ನಾಲ್ಕು ಜನರು ಸೇರಿರುವ ಸಭೆ ಸಿಗಲಿ, ಸಾಮಾಜಿಕ ಜಾಲತಾಣದಲ್ಲಾಗಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಮಾತ್ರ ಒಂದೇ ವರಾತ…

ನಮ್ಮದು ಭ್ರಷ್ಟಾಚಾರ ಮುಕ್ತ, ಅಭಿವೃದ್ಧಿಪರ, ಕಳಂಕರಹಿತ ಸರ್ಕಾರ. ನಮ್ಮ ಅವಧಿಯಲ್ಲಿ ಯಾವುದೇ ಅಕ್ರಮ, ಅವ್ಯವಹಾರ ನಡೆದೇ ಇಲ್ಲ ಎಂಬಂಥ ಮಾತನಾಡುತ್ತಾರೆ. ತಾವು ಮುಖ್ಯಮಂತ್ರಿಯಾಗಿ ಅವಧಿ ಪೂರೈಸಿದ್ದನ್ನೇ ಮಹಾನ್ ಸಾಧನೆ ಎಂಬಂತೆ ಹೇಳುತ್ತಾರೆ.

ಹಾಗಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವ ಕಾಂಗ್ರೆಸ್ ಸರ್ಕಾರ ನಿಜವಾಗಿಯೂ ಕಳಂಕ ರಹಿತ ಸರ್ಕಾರವಾ? ಇವರ ಅವಧಿಯಲ್ಲಿ ಯಾವುದೇ ಅಕ್ರಮ, ಭ್ರಷ್ಟಾಚಾರ ನಡೆದೇ ಇಲ್ಲವಾ? ಅಷ್ಟರಮಟ್ಟಿಗೆ ಈ ಸರ್ಕಾರ ನಿಜವಾಗಿಯೂ ಅಭಿವೃದ್ಧಿ ಪರವಾ?

ಮುಖ್ಯಮಂತ್ರಿಯವರು ಚುನಾವಣೆ ಹೊಸ್ತಿಲಿನಲ್ಲಿ ಯಾರನ್ನು ಮರುಳು ಮಾಡಲು ಹೊರಟಿದ್ದಾರೆ? ಯಾರ ಕಿವಿ ಮೇಲೆ ಹೂ ಇಡಲು ಹೊರಟಿದ್ದಾರೆ?

ಪಾಂಡವಪುರ ತಾಲೂಕು ಬೇಬಿಬೆಟ್ಟದ ಕಾವಲ್ ಸರ್ವೇ ನಂ 1ರಲ್ಲಿರುವ ಮೈಸೂರು ಮಹಾರಾಜರ ಸ್ವತ್ತನ್ನು ಕಬಳಿಸಿದ್ದಲ್ಲದೇ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿರುವವರಿಗೆ ಸಹಕಾರ ಹಾಗೂ ನೆರವು ನೀಡುತ್ತಿರುವ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ 8 ಜನರ ವಿರುದ್ಧ ಮಂಡ್ಯ ಲೋಕಾಯುಕ್ತಕ್ಕೆ ಅದಾಗಲೇ ದೂರು ನೀಡಲಾಗಿದೆ.

ಅತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಗಿನ ಕೆಳಗಡೆಯೇ ಎಂಎಂಎಲ್ ಮತ್ತು ಸುಬ್ಬರಾಯನಹಳ್ಳಿ ಗಣಿ ಪ್ರದೇಶದಲ್ಲಿ 5500 ಕೋಟಿ ರೂ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ದಾಖಲೆ ಸಮೇತ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಾಹಿತಿ ನೀಡಿದ್ದಾರೆ.

ಇದೆಲ್ಲ ಏನನ್ನು ತೋರಿಸುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ? ಕಳಂಕರಹಿತ ಆಡಳಿತ ನೀಡುವುದು ಎಂದರೆ ಇದೇನಾ ನಿಮ್ಮ ಪ್ರಕಾರ? ಯಾವ ಜನಾರ್ದನ ರೆಡ್ಡಿ, ಶ್ರೀರಾಮುಲು ಅವರನ್ನು ಟೀಕಿಸಿದ್ದ ನೀವೇ ಅಕ್ರಮ ಗಣಿಗಾರಿಕೆಗೆ ಕುಮ್ಮಕ್ಕು ನೀಡುತ್ತಿದ್ದೀರಾ? ಈ ಎಲ್ಲ ಆರೋಪಗಳ ಬಗ್ಗೆ ನೀವೇಕೆ ಮಾತನಾಡುತ್ತಿಲ್ಲ? ಅಷ್ಟಕ್ಕೂ ಬೆಂಕಿ ಇಲ್ಲದೆಯೇ ಹೊಗೆಯಾಡುತ್ತದೆಯೇ?

ನೀವು ಆಡಳಿತಕ್ಕೆ ಬರುತ್ತಲೇ ಸೀಮಿತ ವರ್ಗಕ್ಕೆ ಯೋಜನೆ ಜಾರಿಗೊಳಿಸಿದಿರಿ. ದಕ್ಷ ಅಧಿಕಾರಿಗಳಿಗೆ ವರ್ಗಾವಣೆ ಮಾಡಿಸಿದಿರಿ. ಎಂ.ಕೆ.ಗಣಪತಿ ಸಾವಿನ ಪ್ರಕರಣದಲ್ಲಿ ನಿಮ್ಮ ಸಚಿವರ ರಕ್ಷಣೆಗೆ ಮುಂದಾದಿದಿರಿ. ಮತಾಂಧ ಟಿಪ್ಪು ಸುಲ್ತಾನ ಜಯಂತಿ ಆಚರಿಸಿ ಈಗ ಹಿಂದು ಎಂಬ ನಾಟಕವಾಡುತ್ತಿದ್ದೀರಿ. ದುಬಾರಿ ವಾಚಿನ ಮೂಲಕ ಸದ್ದು ಮಾಡಿದಿರಿ. ನಿಮ್ಮದೇ ಸರ್ಕಾರದ ಮೇಟಿಯ ರಾಸಲೀಲೆಯನ್ನು ಕರ್ನಾಟಕವೇ ನೋಡಿದರೂ ಅವರಿಗೆ ಕ್ಲೀನ್ ಚಿಟ್ ಸಿಗುವಂತಾಯಿತು. ನಿಮ್ಮದೇ ಸರ್ಕಾರದ ಸಚಿವರೊಬ್ಬರು ರೆಸಾರ್ಟ್ ರಾಜಕಾರಣ ಮಾಡಿದರು. ಹೇಳಿ ಮುಖ್ಯಮಂತ್ರಿಯವರೇ ನಿಮ್ಮದು ಕಳಂಕ, ನಿಷ್ಪಕ್ಷಪಾತ, ಪಾರದರ್ಶಕತೆಯುಳ್ಳ ಸರ್ಕಾರವಾ?

 

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
ಜಯಂತ್ ಭಟ್ ಬೆಂಗಳೂರು June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
ಜಯಂತ್ ಭಟ್ ಬೆಂಗಳೂರು June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search