• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾರ್ಖಂಡ್ ನಲ್ಲಿ ಇಬ್ಬರು ಕೆಂಪು ಉಗ್ರರ ಹತ್ಯೆ

TNN Correspondent Posted On January 15, 2018
0


0
Shares
  • Share On Facebook
  • Tweet It

ದೆಹಲಿ: ಅರಣ್ಯದಲ್ಲಿ ಅವಿತು ಜನರ ನೆಮ್ಮದಿಗೆ ಭಂಗ ತರುತ್ತಿದ್ದ, ಮುಗ್ದರಿಗೆ ತೊಂದರೆ ನೀಡುವ ನಕ್ಸಲರ ವಿರುದ್ಧದ ಕೇಂದ್ರ ಸರ್ಕಾರದ ಕಠಿಣ ಕಾರ್ಯಚರಣೆ ಮುಂದುವರಿದಿದ್ದು, ಅದರ ಫಲವಾಗಿ ಆಡಳಿತಾಂಗಕ್ಕೆ ಸವಾಲಾಗಿದ್ದ ಇಬ್ಬರು  ನಕ್ಸಲರನ್ನು ಜಾರ್ಖಂಡ್ನಲ್ಲಿ ಹತ್ಯೆ ಮಾಡಲಾಗಿದೆ.

ಜಾರ್ಖಂಡ್ ನ  ಹಾಜೀರ್ ಭಾಗ್ ಪ್ರದೇಶದಲ್ಲಿ ಅರಣ್ಯದಲ್ಲಿ ಅವಿತಿದ್ದ ಇಬ್ಬರು ನಕ್ಸಲರನ್ನು ಪ್ಯಾರಾ ಮಿಲಿಟರಿ ಸೈನ್ಯ ಹೊಡೆದುರುಳಿಸಿದೆ. ಮಾವೋವಾದಿಗಳು ಮತ್ತು ಸಿಆರ್ ಫಿಎಫ್ ಸೈನಿಕರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಸೈನಿಕರು  ದೊನೈ ಕುರ್ದ ಅರಣ್ಯ ಪ್ರದೇಶದಲ್ಲಿ ಪರಿಶೀಲನೆ ನಡೆಸುತ್ತಿರುವಾಗ ಮಾವೋವಾದಿಗಳೇ ಮೊದಲು ಗುಂಡಿನ ದಾಳಿ ಆರಂಭಿಸಿದ್ದರು. ಅದಕ್ಕೆ ಪ್ರತಿಕಾರವಾಗಿ ಸೈನಿಕರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಸಿಆರ್ ಫಿಎಫ್ ಡೆಪ್ಯುಟಿ ಇನ್ಸಪೆಕ್ಟರ್ ಜನರಲ್ ಎಂ ದಿನಕರನ್ ತಿಳಿಸಿದ್ದಾರೆ.

ಕೆಂಪು ಉಗ್ರರ ಎರಡು ದೇಹಗಳನ್ನು ವಶಕ್ಕೆ ಪಡೆದಿದ್ದು, ಒಂದು ಎಕೆ 47 ಗನ್, ಇನ್ಸಾಸ್ ರೈಫ್ಲ್ ಮತ್ತು 200 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ. ಇದೇ ರೀತಿಯ ಕಾರ್ಯಾಚರಣೆ ಚತ್ತಿಗಡ್ ದ ಸುಕ್ಮಾ ಜಿಲ್ಲೆಯ ಪಿದ್ಮೇಲ್ ಅರಣ್ಯದ ಪೋಲಂಪಲ್ಲಿಯಲ್ಲೂ ನಡೆಸಲಾಗುತ್ತಿದೆ ಎಂದು ದಿನಕರನ್ ತಿಳಿಸಿದ್ದಾರೆ.

ಸುಕ್ಮಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೇದೆಯೊಬ್ಬರಿಗೆ ಗಾಯಗಳಾಗಿವೆ. ರಾಯಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search