• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾರ್ಖಂಡ್ ನಲ್ಲಿ ಇಬ್ಬರು ಕೆಂಪು ಉಗ್ರರ ಹತ್ಯೆ

TNN Correspondent Posted On January 15, 2018
0


0
Shares
  • Share On Facebook
  • Tweet It

ದೆಹಲಿ: ಅರಣ್ಯದಲ್ಲಿ ಅವಿತು ಜನರ ನೆಮ್ಮದಿಗೆ ಭಂಗ ತರುತ್ತಿದ್ದ, ಮುಗ್ದರಿಗೆ ತೊಂದರೆ ನೀಡುವ ನಕ್ಸಲರ ವಿರುದ್ಧದ ಕೇಂದ್ರ ಸರ್ಕಾರದ ಕಠಿಣ ಕಾರ್ಯಚರಣೆ ಮುಂದುವರಿದಿದ್ದು, ಅದರ ಫಲವಾಗಿ ಆಡಳಿತಾಂಗಕ್ಕೆ ಸವಾಲಾಗಿದ್ದ ಇಬ್ಬರು  ನಕ್ಸಲರನ್ನು ಜಾರ್ಖಂಡ್ನಲ್ಲಿ ಹತ್ಯೆ ಮಾಡಲಾಗಿದೆ.

ಜಾರ್ಖಂಡ್ ನ  ಹಾಜೀರ್ ಭಾಗ್ ಪ್ರದೇಶದಲ್ಲಿ ಅರಣ್ಯದಲ್ಲಿ ಅವಿತಿದ್ದ ಇಬ್ಬರು ನಕ್ಸಲರನ್ನು ಪ್ಯಾರಾ ಮಿಲಿಟರಿ ಸೈನ್ಯ ಹೊಡೆದುರುಳಿಸಿದೆ. ಮಾವೋವಾದಿಗಳು ಮತ್ತು ಸಿಆರ್ ಫಿಎಫ್ ಸೈನಿಕರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಸೈನಿಕರು  ದೊನೈ ಕುರ್ದ ಅರಣ್ಯ ಪ್ರದೇಶದಲ್ಲಿ ಪರಿಶೀಲನೆ ನಡೆಸುತ್ತಿರುವಾಗ ಮಾವೋವಾದಿಗಳೇ ಮೊದಲು ಗುಂಡಿನ ದಾಳಿ ಆರಂಭಿಸಿದ್ದರು. ಅದಕ್ಕೆ ಪ್ರತಿಕಾರವಾಗಿ ಸೈನಿಕರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಸಿಆರ್ ಫಿಎಫ್ ಡೆಪ್ಯುಟಿ ಇನ್ಸಪೆಕ್ಟರ್ ಜನರಲ್ ಎಂ ದಿನಕರನ್ ತಿಳಿಸಿದ್ದಾರೆ.

ಕೆಂಪು ಉಗ್ರರ ಎರಡು ದೇಹಗಳನ್ನು ವಶಕ್ಕೆ ಪಡೆದಿದ್ದು, ಒಂದು ಎಕೆ 47 ಗನ್, ಇನ್ಸಾಸ್ ರೈಫ್ಲ್ ಮತ್ತು 200 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ. ಇದೇ ರೀತಿಯ ಕಾರ್ಯಾಚರಣೆ ಚತ್ತಿಗಡ್ ದ ಸುಕ್ಮಾ ಜಿಲ್ಲೆಯ ಪಿದ್ಮೇಲ್ ಅರಣ್ಯದ ಪೋಲಂಪಲ್ಲಿಯಲ್ಲೂ ನಡೆಸಲಾಗುತ್ತಿದೆ ಎಂದು ದಿನಕರನ್ ತಿಳಿಸಿದ್ದಾರೆ.

ಸುಕ್ಮಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೇದೆಯೊಬ್ಬರಿಗೆ ಗಾಯಗಳಾಗಿವೆ. ರಾಯಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search