• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾರ್ಖಂಡ್ ನಲ್ಲಿ ಇಬ್ಬರು ಕೆಂಪು ಉಗ್ರರ ಹತ್ಯೆ

TNN Correspondent Posted On January 15, 2018
0


0
Shares
  • Share On Facebook
  • Tweet It

ದೆಹಲಿ: ಅರಣ್ಯದಲ್ಲಿ ಅವಿತು ಜನರ ನೆಮ್ಮದಿಗೆ ಭಂಗ ತರುತ್ತಿದ್ದ, ಮುಗ್ದರಿಗೆ ತೊಂದರೆ ನೀಡುವ ನಕ್ಸಲರ ವಿರುದ್ಧದ ಕೇಂದ್ರ ಸರ್ಕಾರದ ಕಠಿಣ ಕಾರ್ಯಚರಣೆ ಮುಂದುವರಿದಿದ್ದು, ಅದರ ಫಲವಾಗಿ ಆಡಳಿತಾಂಗಕ್ಕೆ ಸವಾಲಾಗಿದ್ದ ಇಬ್ಬರು  ನಕ್ಸಲರನ್ನು ಜಾರ್ಖಂಡ್ನಲ್ಲಿ ಹತ್ಯೆ ಮಾಡಲಾಗಿದೆ.

ಜಾರ್ಖಂಡ್ ನ  ಹಾಜೀರ್ ಭಾಗ್ ಪ್ರದೇಶದಲ್ಲಿ ಅರಣ್ಯದಲ್ಲಿ ಅವಿತಿದ್ದ ಇಬ್ಬರು ನಕ್ಸಲರನ್ನು ಪ್ಯಾರಾ ಮಿಲಿಟರಿ ಸೈನ್ಯ ಹೊಡೆದುರುಳಿಸಿದೆ. ಮಾವೋವಾದಿಗಳು ಮತ್ತು ಸಿಆರ್ ಫಿಎಫ್ ಸೈನಿಕರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಸೈನಿಕರು  ದೊನೈ ಕುರ್ದ ಅರಣ್ಯ ಪ್ರದೇಶದಲ್ಲಿ ಪರಿಶೀಲನೆ ನಡೆಸುತ್ತಿರುವಾಗ ಮಾವೋವಾದಿಗಳೇ ಮೊದಲು ಗುಂಡಿನ ದಾಳಿ ಆರಂಭಿಸಿದ್ದರು. ಅದಕ್ಕೆ ಪ್ರತಿಕಾರವಾಗಿ ಸೈನಿಕರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಸಿಆರ್ ಫಿಎಫ್ ಡೆಪ್ಯುಟಿ ಇನ್ಸಪೆಕ್ಟರ್ ಜನರಲ್ ಎಂ ದಿನಕರನ್ ತಿಳಿಸಿದ್ದಾರೆ.

ಕೆಂಪು ಉಗ್ರರ ಎರಡು ದೇಹಗಳನ್ನು ವಶಕ್ಕೆ ಪಡೆದಿದ್ದು, ಒಂದು ಎಕೆ 47 ಗನ್, ಇನ್ಸಾಸ್ ರೈಫ್ಲ್ ಮತ್ತು 200 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ. ಇದೇ ರೀತಿಯ ಕಾರ್ಯಾಚರಣೆ ಚತ್ತಿಗಡ್ ದ ಸುಕ್ಮಾ ಜಿಲ್ಲೆಯ ಪಿದ್ಮೇಲ್ ಅರಣ್ಯದ ಪೋಲಂಪಲ್ಲಿಯಲ್ಲೂ ನಡೆಸಲಾಗುತ್ತಿದೆ ಎಂದು ದಿನಕರನ್ ತಿಳಿಸಿದ್ದಾರೆ.

ಸುಕ್ಮಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೇದೆಯೊಬ್ಬರಿಗೆ ಗಾಯಗಳಾಗಿವೆ. ರಾಯಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search