• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಾರ್ಖಂಡ್ ನಲ್ಲಿ ಇಬ್ಬರು ಕೆಂಪು ಉಗ್ರರ ಹತ್ಯೆ

TNN Correspondent Posted On January 15, 2018


  • Share On Facebook
  • Tweet It

ದೆಹಲಿ: ಅರಣ್ಯದಲ್ಲಿ ಅವಿತು ಜನರ ನೆಮ್ಮದಿಗೆ ಭಂಗ ತರುತ್ತಿದ್ದ, ಮುಗ್ದರಿಗೆ ತೊಂದರೆ ನೀಡುವ ನಕ್ಸಲರ ವಿರುದ್ಧದ ಕೇಂದ್ರ ಸರ್ಕಾರದ ಕಠಿಣ ಕಾರ್ಯಚರಣೆ ಮುಂದುವರಿದಿದ್ದು, ಅದರ ಫಲವಾಗಿ ಆಡಳಿತಾಂಗಕ್ಕೆ ಸವಾಲಾಗಿದ್ದ ಇಬ್ಬರು  ನಕ್ಸಲರನ್ನು ಜಾರ್ಖಂಡ್ನಲ್ಲಿ ಹತ್ಯೆ ಮಾಡಲಾಗಿದೆ.

ಜಾರ್ಖಂಡ್ ನ  ಹಾಜೀರ್ ಭಾಗ್ ಪ್ರದೇಶದಲ್ಲಿ ಅರಣ್ಯದಲ್ಲಿ ಅವಿತಿದ್ದ ಇಬ್ಬರು ನಕ್ಸಲರನ್ನು ಪ್ಯಾರಾ ಮಿಲಿಟರಿ ಸೈನ್ಯ ಹೊಡೆದುರುಳಿಸಿದೆ. ಮಾವೋವಾದಿಗಳು ಮತ್ತು ಸಿಆರ್ ಫಿಎಫ್ ಸೈನಿಕರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಸೈನಿಕರು  ದೊನೈ ಕುರ್ದ ಅರಣ್ಯ ಪ್ರದೇಶದಲ್ಲಿ ಪರಿಶೀಲನೆ ನಡೆಸುತ್ತಿರುವಾಗ ಮಾವೋವಾದಿಗಳೇ ಮೊದಲು ಗುಂಡಿನ ದಾಳಿ ಆರಂಭಿಸಿದ್ದರು. ಅದಕ್ಕೆ ಪ್ರತಿಕಾರವಾಗಿ ಸೈನಿಕರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಸಿಆರ್ ಫಿಎಫ್ ಡೆಪ್ಯುಟಿ ಇನ್ಸಪೆಕ್ಟರ್ ಜನರಲ್ ಎಂ ದಿನಕರನ್ ತಿಳಿಸಿದ್ದಾರೆ.

ಕೆಂಪು ಉಗ್ರರ ಎರಡು ದೇಹಗಳನ್ನು ವಶಕ್ಕೆ ಪಡೆದಿದ್ದು, ಒಂದು ಎಕೆ 47 ಗನ್, ಇನ್ಸಾಸ್ ರೈಫ್ಲ್ ಮತ್ತು 200 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ. ಇದೇ ರೀತಿಯ ಕಾರ್ಯಾಚರಣೆ ಚತ್ತಿಗಡ್ ದ ಸುಕ್ಮಾ ಜಿಲ್ಲೆಯ ಪಿದ್ಮೇಲ್ ಅರಣ್ಯದ ಪೋಲಂಪಲ್ಲಿಯಲ್ಲೂ ನಡೆಸಲಾಗುತ್ತಿದೆ ಎಂದು ದಿನಕರನ್ ತಿಳಿಸಿದ್ದಾರೆ.

ಸುಕ್ಮಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೇದೆಯೊಬ್ಬರಿಗೆ ಗಾಯಗಳಾಗಿವೆ. ರಾಯಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search