• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರವಿಂದ್ ಕೇಜ್ರಿವಾಲ್ ಅವರಿಗೆ ಅಣ್ಣಾ ಹಜಾರೆ ಪರೋಕ್ಷ ಟಾಂಗ್ ನೀಡಿದ್ದು ಹೇಗೆ ಗೊತ್ತಾ?

TNN Correspondent Posted On January 16, 2018
0


0
Shares
  • Share On Facebook
  • Tweet It

ದೆಹಲಿ: ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಆಡಳಿತದಿಂದ ಬೇಸತ್ತಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಪರೋಕ್ಷವಾಗಿ ಕೇಜ್ರಿವಾಲ್ ಅವರಿಗೆ ಟಾಂಗ್ ನೀಡಿದ್ದಾರೆ.

ಮುಂದೆ ನಾನು ನಡೆಸುವ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳುವ ಯಾರೂ ರಾಜಕಾರಣ ಸೇರುವುದಿಲ್ಲ ಎನ್ನುವ ಮೂಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಟಾಂಗ್ ನೀಡಿದ್ದಾರೆ.

2011ರಲ್ಲಿ ನಾನು ಆರಂಭಿಸಿದ ಹೋರಾಟದಲ್ಲಿ ಪಾಲ್ಗೊಳ್ಳುವವರ ಕುರಿತು ಎಚ್ಚರದಿಂದ ಇರಲಿಲ್ಲ. ಆದರೆ ಮುಂದೆ ನಡೆಸುವ ಹೋರಾಟದಲ್ಲಿ ಪಾಲ್ಗೊಳ್ಳುವ ಯಾವುದೇ ವ್ಯಕ್ತಿಯೂ ರಾಜಕೀಯ ಸೇರಲ್ಲ, ರಾಜಕೀಯ ಮಾಡಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ ಎಂದು ಅಣ್ಣಾ ಹಜಾರೆ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.

2011ರಲ್ಲಿ ಜನಲೋಕಪಾಲ ಬಿಲ್ ಜಾರಿಗಾಗಿ ಬೃಹತ್ ಹೋರಾಟ, ಉಪವಾಸ ಸತ್ಯಾಗ್ರಹ ನಡೆಸಿದ್ದ ಅಣ್ಣಾ ಹಜಾರೆ ಅವರು ಇಡೀ ದೇಶದ ಗಮನ ಸೆಳೆದಿದ್ದರು. ಅಲ್ಲದೆ ಕೇಂದ್ರ ಸರ್ಕಾರದ ವಿರುದ್ಧದ ಅವರ ಹೋರಾಟಕ್ಕೆ ಅಪಾರ ಜನ ಬೆಂಬಲ ಸೂಚಿಸಿದ್ದರು.

ವಕೀಲರಾಗಿದ್ದ ಅರವಿಂದ್ ಕೇಜ್ರಿವಾಲ್ ಅಣ್ಣಾ ಹಜಾರೆಯವರ ಹೋರಾಟಕ್ಕೆ ಬೆಂಬಲ ನೀಡುವ ಮೂಲಕ ಮುಖ್ಯವಾಹಿನಿಗೆ ಬಂದಿದ್ದರು. ಅಲ್ಲದೆ ಅಣ್ಣಾ ಹಜಾರೆಯವರ ವಿರೋಧ, ಆಕ್ಷೇಪದ ನಡುವೆಯೂ ಆಮ್ ಆದ್ಮಿ ಪಾರ್ಟಿ ಕಟ್ಟಿ ದೆಹಲಿಯ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಆದರೆ ಅರವಿಂದ್ ಕೇಜ್ರಿವಾಲ್ ಅವರ ನಿರ್ಧಾರ, ವಿವಾದಾತ್ಮಕ ಹೇಳಿಕೆ, ದೆಹಲಿಯಲ್ಲಿ ಅತ್ಯಾಚಾರ ಸೇರಿ ಹಲವು ಪ್ರಕರಣ ತಡೆಯುವಲ್ಲಿ ವಿಫಲ ಸೇರಿ ಹಲವು ಕಾರಣಗಳಿಂದ ಅಣ್ಣಾ ಹಜಾರೆಯವರು ಅರವಿಂದ್ ಕೇಜ್ರಿವಾಲ್ ಬಗ್ಗೆ ಅಸಮಾಧಾನವಿದೆ ಎನ್ನಲಾಗುತ್ತಿದೆ.

ಅಲ್ಲದೆ ತಮ್ಮ ಹೋರಾಟದಿಂದ ಮುಂದೆಯೂ ಮತ್ತೊಬ್ಬ ರಾಜಕಾರಣಿ ಉದಯಿಸುವುದು ಹಜಾರೆಯವರಿಗೆ ಇಷ್ಟವಿಲ್ಲದ ಕಾರಣ ಈ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search