• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರವಿಂದ್ ಕೇಜ್ರಿವಾಲ್ ಅವರಿಗೆ ಅಣ್ಣಾ ಹಜಾರೆ ಪರೋಕ್ಷ ಟಾಂಗ್ ನೀಡಿದ್ದು ಹೇಗೆ ಗೊತ್ತಾ?

TNN Correspondent Posted On January 16, 2018
0


0
Shares
  • Share On Facebook
  • Tweet It

ದೆಹಲಿ: ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಆಡಳಿತದಿಂದ ಬೇಸತ್ತಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಪರೋಕ್ಷವಾಗಿ ಕೇಜ್ರಿವಾಲ್ ಅವರಿಗೆ ಟಾಂಗ್ ನೀಡಿದ್ದಾರೆ.

ಮುಂದೆ ನಾನು ನಡೆಸುವ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳುವ ಯಾರೂ ರಾಜಕಾರಣ ಸೇರುವುದಿಲ್ಲ ಎನ್ನುವ ಮೂಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಟಾಂಗ್ ನೀಡಿದ್ದಾರೆ.

2011ರಲ್ಲಿ ನಾನು ಆರಂಭಿಸಿದ ಹೋರಾಟದಲ್ಲಿ ಪಾಲ್ಗೊಳ್ಳುವವರ ಕುರಿತು ಎಚ್ಚರದಿಂದ ಇರಲಿಲ್ಲ. ಆದರೆ ಮುಂದೆ ನಡೆಸುವ ಹೋರಾಟದಲ್ಲಿ ಪಾಲ್ಗೊಳ್ಳುವ ಯಾವುದೇ ವ್ಯಕ್ತಿಯೂ ರಾಜಕೀಯ ಸೇರಲ್ಲ, ರಾಜಕೀಯ ಮಾಡಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ ಎಂದು ಅಣ್ಣಾ ಹಜಾರೆ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.

2011ರಲ್ಲಿ ಜನಲೋಕಪಾಲ ಬಿಲ್ ಜಾರಿಗಾಗಿ ಬೃಹತ್ ಹೋರಾಟ, ಉಪವಾಸ ಸತ್ಯಾಗ್ರಹ ನಡೆಸಿದ್ದ ಅಣ್ಣಾ ಹಜಾರೆ ಅವರು ಇಡೀ ದೇಶದ ಗಮನ ಸೆಳೆದಿದ್ದರು. ಅಲ್ಲದೆ ಕೇಂದ್ರ ಸರ್ಕಾರದ ವಿರುದ್ಧದ ಅವರ ಹೋರಾಟಕ್ಕೆ ಅಪಾರ ಜನ ಬೆಂಬಲ ಸೂಚಿಸಿದ್ದರು.

ವಕೀಲರಾಗಿದ್ದ ಅರವಿಂದ್ ಕೇಜ್ರಿವಾಲ್ ಅಣ್ಣಾ ಹಜಾರೆಯವರ ಹೋರಾಟಕ್ಕೆ ಬೆಂಬಲ ನೀಡುವ ಮೂಲಕ ಮುಖ್ಯವಾಹಿನಿಗೆ ಬಂದಿದ್ದರು. ಅಲ್ಲದೆ ಅಣ್ಣಾ ಹಜಾರೆಯವರ ವಿರೋಧ, ಆಕ್ಷೇಪದ ನಡುವೆಯೂ ಆಮ್ ಆದ್ಮಿ ಪಾರ್ಟಿ ಕಟ್ಟಿ ದೆಹಲಿಯ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಆದರೆ ಅರವಿಂದ್ ಕೇಜ್ರಿವಾಲ್ ಅವರ ನಿರ್ಧಾರ, ವಿವಾದಾತ್ಮಕ ಹೇಳಿಕೆ, ದೆಹಲಿಯಲ್ಲಿ ಅತ್ಯಾಚಾರ ಸೇರಿ ಹಲವು ಪ್ರಕರಣ ತಡೆಯುವಲ್ಲಿ ವಿಫಲ ಸೇರಿ ಹಲವು ಕಾರಣಗಳಿಂದ ಅಣ್ಣಾ ಹಜಾರೆಯವರು ಅರವಿಂದ್ ಕೇಜ್ರಿವಾಲ್ ಬಗ್ಗೆ ಅಸಮಾಧಾನವಿದೆ ಎನ್ನಲಾಗುತ್ತಿದೆ.

ಅಲ್ಲದೆ ತಮ್ಮ ಹೋರಾಟದಿಂದ ಮುಂದೆಯೂ ಮತ್ತೊಬ್ಬ ರಾಜಕಾರಣಿ ಉದಯಿಸುವುದು ಹಜಾರೆಯವರಿಗೆ ಇಷ್ಟವಿಲ್ಲದ ಕಾರಣ ಈ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search