• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ್ ಮಾತಾ ಕೀ ಎಂದಿದ್ದಕ್ಕೇ ವಿದ್ಯಾರ್ಥಿಗಳ ಅಮಾನತು ಮಾಡಿತೇ ಆ ಕ್ರಿಶ್ಚಿಯನ್ ಶಾಲೆ?

TNN Correspondent Posted On January 16, 2018
0


0
Shares
  • Share On Facebook
  • Tweet It

ಭೋಪಾಲ್: ಪ್ರಾಯಶಃ ಭಾರತದಲ್ಲಿ ಮಾತ್ರ ಹೀಗೆ ಆಗಬಹುದೇನೋ? ಮಧ್ಯಪ್ರದೇಶದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಮೊಳಗಿಸಿದ ಕಾರಣಕ್ಕಾಗಿಯೇ ಶಾಲೆಯ ಆಡಳಿತ ಮಂಡಳಿ 20 ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ ಎಂಬ ಆರೋಪ ಕೇಳಿಬಂದಿವೆ.

ಮಧ್ಯಪ್ರದೇಶದ ರಟ್ಲಾಮ್ ಪ್ರದೇಶದಲ್ಲಿರುವ ಸೇಂಟ್ ಜೋಸೆಫ್ ಶಾಲೆಯ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ.

ಜನವರಿ  1ರಂದು ಎಂದಿನಂತೆ ಪ್ರಾರ್ಥನೆ ಮುಗಿದಿದ್ದು, ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಆದರೆ ಇದರಿಂದ ಕುಪಿತಗೊಂಡ ಶಾಲೆಯ ಮಂಡಳಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ ಎಂಬ ಆರೋಪ ಕೇಳಿಬಂದಿವೆ.

ಈ ಕುರಿತು ಆಕ್ರೋಶಗೊಂಡಿರುವ ವಿದ್ಯಾರ್ಥಿಗಳು ಹಲವು ಹಿಂದೂ ಸಂಘಟನೆಗಳೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅಲ್ಲದೆ ಸೋಮವಾರ ಘಟನೆಗೆ ಸಂಬಂಧಿಸಿದಂತೆ ರ್ಯಾಲಿ ನಡೆಸಿದ್ದು, ರಾಜ್ಯವ್ಯಾಪಿ ಬಂದ್ ಕರೆ ನೀಡಿದ್ದಾರೆ.

“ ಶಾಲೆಯಲ್ಲಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಕ್ಕೇ ಸುಮಾರು 20 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಇದು ಖಂಡನೀಯ” ಎಂದು ಬಜರಂಗದಳ ಮುಖಂಡ ರಾಜೇಶ್ ಪರಿಹಾರ್ ಆರೋಪಿಸಿದ್ದಾರೆ. ಆದಾಗ್ಯೂ ಶಾಲೆಯ ಆಡಳಿತ ಮಂಡಳಿ ಆರೋಪವನ್ನು ತಿರಸ್ಕರಿಸಿದೆ.

ಆದರೆ ಇತ್ತೀಚೆಗೆ ಕಾಲೇಜೊಂದರಲ್ಲಿ ಭಾರತ್ ಮಾತಾ ಆರತಿ ಕಾರ್ಯಕ್ರಮಕ್ಕೆ ಪೊಲೀಸರು ನಿಷೇಧ ಹೇರಿದ್ದರು. ಈಗ ಶಾಲೆಯಲ್ಲಿ ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೇ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಹಾಗಾದರೆ ಭಾರತ್ ಮಾತಾ ಕೀ ಜೈ ಎನ್ನುವುದೇ ತಪ್ಪೇ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search