• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ್ ಮಾತಾ ಕೀ ಎಂದಿದ್ದಕ್ಕೇ ವಿದ್ಯಾರ್ಥಿಗಳ ಅಮಾನತು ಮಾಡಿತೇ ಆ ಕ್ರಿಶ್ಚಿಯನ್ ಶಾಲೆ?

TNN Correspondent Posted On January 16, 2018
0


0
Shares
  • Share On Facebook
  • Tweet It

ಭೋಪಾಲ್: ಪ್ರಾಯಶಃ ಭಾರತದಲ್ಲಿ ಮಾತ್ರ ಹೀಗೆ ಆಗಬಹುದೇನೋ? ಮಧ್ಯಪ್ರದೇಶದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಮೊಳಗಿಸಿದ ಕಾರಣಕ್ಕಾಗಿಯೇ ಶಾಲೆಯ ಆಡಳಿತ ಮಂಡಳಿ 20 ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ ಎಂಬ ಆರೋಪ ಕೇಳಿಬಂದಿವೆ.

ಮಧ್ಯಪ್ರದೇಶದ ರಟ್ಲಾಮ್ ಪ್ರದೇಶದಲ್ಲಿರುವ ಸೇಂಟ್ ಜೋಸೆಫ್ ಶಾಲೆಯ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ.

ಜನವರಿ  1ರಂದು ಎಂದಿನಂತೆ ಪ್ರಾರ್ಥನೆ ಮುಗಿದಿದ್ದು, ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಆದರೆ ಇದರಿಂದ ಕುಪಿತಗೊಂಡ ಶಾಲೆಯ ಮಂಡಳಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ ಎಂಬ ಆರೋಪ ಕೇಳಿಬಂದಿವೆ.

ಈ ಕುರಿತು ಆಕ್ರೋಶಗೊಂಡಿರುವ ವಿದ್ಯಾರ್ಥಿಗಳು ಹಲವು ಹಿಂದೂ ಸಂಘಟನೆಗಳೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅಲ್ಲದೆ ಸೋಮವಾರ ಘಟನೆಗೆ ಸಂಬಂಧಿಸಿದಂತೆ ರ್ಯಾಲಿ ನಡೆಸಿದ್ದು, ರಾಜ್ಯವ್ಯಾಪಿ ಬಂದ್ ಕರೆ ನೀಡಿದ್ದಾರೆ.

“ ಶಾಲೆಯಲ್ಲಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಕ್ಕೇ ಸುಮಾರು 20 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಇದು ಖಂಡನೀಯ” ಎಂದು ಬಜರಂಗದಳ ಮುಖಂಡ ರಾಜೇಶ್ ಪರಿಹಾರ್ ಆರೋಪಿಸಿದ್ದಾರೆ. ಆದಾಗ್ಯೂ ಶಾಲೆಯ ಆಡಳಿತ ಮಂಡಳಿ ಆರೋಪವನ್ನು ತಿರಸ್ಕರಿಸಿದೆ.

ಆದರೆ ಇತ್ತೀಚೆಗೆ ಕಾಲೇಜೊಂದರಲ್ಲಿ ಭಾರತ್ ಮಾತಾ ಆರತಿ ಕಾರ್ಯಕ್ರಮಕ್ಕೆ ಪೊಲೀಸರು ನಿಷೇಧ ಹೇರಿದ್ದರು. ಈಗ ಶಾಲೆಯಲ್ಲಿ ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೇ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಹಾಗಾದರೆ ಭಾರತ್ ಮಾತಾ ಕೀ ಜೈ ಎನ್ನುವುದೇ ತಪ್ಪೇ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search