• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ್ ಮಾತಾ ಕೀ ಎಂದಿದ್ದಕ್ಕೇ ವಿದ್ಯಾರ್ಥಿಗಳ ಅಮಾನತು ಮಾಡಿತೇ ಆ ಕ್ರಿಶ್ಚಿಯನ್ ಶಾಲೆ?

TNN Correspondent Posted On January 16, 2018
0


0
Shares
  • Share On Facebook
  • Tweet It

ಭೋಪಾಲ್: ಪ್ರಾಯಶಃ ಭಾರತದಲ್ಲಿ ಮಾತ್ರ ಹೀಗೆ ಆಗಬಹುದೇನೋ? ಮಧ್ಯಪ್ರದೇಶದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಮೊಳಗಿಸಿದ ಕಾರಣಕ್ಕಾಗಿಯೇ ಶಾಲೆಯ ಆಡಳಿತ ಮಂಡಳಿ 20 ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ ಎಂಬ ಆರೋಪ ಕೇಳಿಬಂದಿವೆ.

ಮಧ್ಯಪ್ರದೇಶದ ರಟ್ಲಾಮ್ ಪ್ರದೇಶದಲ್ಲಿರುವ ಸೇಂಟ್ ಜೋಸೆಫ್ ಶಾಲೆಯ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ.

ಜನವರಿ  1ರಂದು ಎಂದಿನಂತೆ ಪ್ರಾರ್ಥನೆ ಮುಗಿದಿದ್ದು, ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಆದರೆ ಇದರಿಂದ ಕುಪಿತಗೊಂಡ ಶಾಲೆಯ ಮಂಡಳಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ ಎಂಬ ಆರೋಪ ಕೇಳಿಬಂದಿವೆ.

ಈ ಕುರಿತು ಆಕ್ರೋಶಗೊಂಡಿರುವ ವಿದ್ಯಾರ್ಥಿಗಳು ಹಲವು ಹಿಂದೂ ಸಂಘಟನೆಗಳೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅಲ್ಲದೆ ಸೋಮವಾರ ಘಟನೆಗೆ ಸಂಬಂಧಿಸಿದಂತೆ ರ್ಯಾಲಿ ನಡೆಸಿದ್ದು, ರಾಜ್ಯವ್ಯಾಪಿ ಬಂದ್ ಕರೆ ನೀಡಿದ್ದಾರೆ.

“ ಶಾಲೆಯಲ್ಲಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಕ್ಕೇ ಸುಮಾರು 20 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಇದು ಖಂಡನೀಯ” ಎಂದು ಬಜರಂಗದಳ ಮುಖಂಡ ರಾಜೇಶ್ ಪರಿಹಾರ್ ಆರೋಪಿಸಿದ್ದಾರೆ. ಆದಾಗ್ಯೂ ಶಾಲೆಯ ಆಡಳಿತ ಮಂಡಳಿ ಆರೋಪವನ್ನು ತಿರಸ್ಕರಿಸಿದೆ.

ಆದರೆ ಇತ್ತೀಚೆಗೆ ಕಾಲೇಜೊಂದರಲ್ಲಿ ಭಾರತ್ ಮಾತಾ ಆರತಿ ಕಾರ್ಯಕ್ರಮಕ್ಕೆ ಪೊಲೀಸರು ನಿಷೇಧ ಹೇರಿದ್ದರು. ಈಗ ಶಾಲೆಯಲ್ಲಿ ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೇ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಹಾಗಾದರೆ ಭಾರತ್ ಮಾತಾ ಕೀ ಜೈ ಎನ್ನುವುದೇ ತಪ್ಪೇ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search