• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ 6 ರೋಹಿಂಗ್ಯಾ ಮುಸ್ಲಿಮರ ಬಂಧನ

TNN Correspondent Posted On January 16, 2018
0


0
Shares
  • Share On Facebook
  • Tweet It

ಧರ್ಮಾನಗರ: ಮ್ಯಾನ್ಮಾರ್ ಮತ್ತು ಬಾಂಗ್ಲಾ ಗಡಿಯ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ದೇಶದ ಮೇಲೆ ದುಷ್ಪರಿಣಾಮ ಬೀರುತ್ತಿರುವ ರೋಹಿಂಗ್ಯಾ ಮುಸ್ಲಿಮರನ್ನು ಆಟಾಟೋಪಕ್ಕೆ ನಿಯಂತ್ರಣ ಹಾಕುವ ಪ್ರಕ್ರಿಯೆ ಮುಂದುವರಿದಿದ್ದು, ತ್ರಿಪುರಾದ ಧರ್ಮಾನಗರದ ರೈಲು ನಿಲ್ದಾಣದಲ್ಲಿ ತಲೆಮರೆಸಿಕೊಂಡು ಓಡಿ ಹೋಗಲು ಯತ್ನಿಸುತ್ತಿದ್ದ ಆರು ರೋಹಿಂಗ್ಯಾ ಮುಸ್ಲಿಮರನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಸಾಂದರ್ಭಿಕ ಚಿತ್ರ..

ಮಹಮ್ಮದ್ ಜಾಹಾಂಗೀರ್ (17), ಇಬ್ರಾಹಿಂ ಅಲಮ್ (17), ಮಹಮ್ಮದ್ ಆಶಾನ್ (15), ನೂರ್ ಫತಾಮನ್ (16), ಜ್ಹಾನ್ ತಾರಾ(14), ದಿಲ್ವಾರ್ ಬೇಗಂ (27)  ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರು ಹೈದರಾಬಾದ್ ಗೆ ಪ್ರಯಾಣ ಬೆಳೆಸಲು ಉದ್ದೇಶಿಸಿದ್ದರು ಎನ್ನಲಾಗಿದೆ.

ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ಚಲಿಸುತ್ತಿದ್ದ ರೋಹಿಂಗ್ಯಾಗಳನ್ನು ರೈಲ್ವೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದಾಗ ಅಕ್ರಮವಾಗಿ ನುಸುಳಿರುವ ಮಾಹಿತಿ, ಪ್ರಯಾಣಿಸುವ ಮಾಹಿತಿ ಹೊರಬಿದ್ದಿದೆ. ಮ್ಯಾನ್ಮಾರ್ ನವರಾಗಿದ್ದು, ಬಾಂಗ್ಲಾದೇಶದ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಎಲ್ಲರೂ ಸುರಕ್ಷಿತವಾಗಿ ಜೈಲಿನಲ್ಲಿದ್ದಾರೆ ಎಂದು ಧರ್ಮಾನಗರ ರೈಲ್ವೆ ಪೊಲೀಸ್ ಇನ್ ಸ್ಪೆಕ್ಟರ್ ಸ್ವಪನ್ ಕುಮಾರ ಸಿಂಗ್ ತಿಳಿಸಿದ್ದಾರೆ. ಎರಡು ತಿಂಗಳಲ್ಲಿ ಇದು ಎರಡನೇ ಬಾರಿ ರೋಹಿಂಗ್ಯಾಗಳನ್ನು ಬಂಧಿಸಲಾಗುತ್ತಿದೆ. ಇತ್ತೀಚೆಗೆ ಅಗರ್ತಲಾ ಬಳಿ ಎಂಟು ರೋಹಿಂಗ್ಯಾಗಳನ್ನು ಬಂಧಿಸಲಾಗಿತ್ತು.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search