• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಿಎಸ್ಟಿ ತೆಗಳಿದವರಿಗೆ ಕಹಿ ಸುದ್ದಿ, ಕಾರ್ಖಾನೆ ಉತ್ಪಾದನೆ 8.4ಕ್ಕೆ ಏರಿಕೆ

TNN Correspondent Posted On January 17, 2018


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏನೇ ನಿರ್ಧಾರ ಕೈಗೊಂಡರು, ಯಾವುದೇ ಯೋಜನೆ ಜಾರಿಗೊಳಿಸಿದರೂ ದೂರುವವರು, ತೆಗಳುವವರು ಎಂದಿಗೂ ಇದ್ದಾರೆ. ದೇಶದ ತೆರಿಗೆ ಸುಧಾರಣೆಗಾಗಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಳಿಸಿದಾಗಲೂ ಇದೇ ರೀತಿ ವಿರೋಧ ವ್ಯಕ್ತವಾಗಿತ್ತು.

ಅಲ್ಲದೆ, ದೇಶದ ವಿತ್ತೀಯ ವ್ಯವಸ್ಥೆ ಹಾಳಾಯಿತು, ಬಡವರಿಗೆ, ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಬಿತ್ತು, ಉದ್ಯಮಿಗಳಿಗೆ ನಷ್ಟವಾಗುತ್ತದೆ ಎಂದೆಲ್ಲ ಟೀಕಿಸಿದ್ದರು. ಆದರೂ ಜಿಎಸ್ಟಿ ಮಾತ್ರ ಆರ್ಥಿಕ ವ್ಯವಸ್ಥೆಗೆ ಧಕ್ಕೆ ತಂದಿಲ್ಲ ಎಂಬುದು ಸಾಬೀತಾಗಿದೆ.

ಹೌದು, ಕೈಗಾರಿಕೆ ಉತ್ಪಾದನೆ ಸೂಚ್ಯಂಕ (ಐಐಪಿ) ನೀಡಿದ ವರದಿ ಪ್ರಕಾರ 2017ರ ನವೆಂಬರ್ ನಲ್ಲಿ ಭಾರತದಲ್ಲಿರುವ ಕೈಗಾರಿಕೆಗಳ ಉತ್ಪಾದನೆ ಪ್ರಮಾಣ ಶೇ.8.4ಕ್ಕೆ ಏರಿಕೆ ಕಂಡಿದೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆ ಕಳೆದ ಎರಡು ವರ್ಷಗಳಲ್ಲೇ ಅಧಿಕ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅಪಾರ ಮೊತ್ತದ ಬಂಡವಾಳ ಸರಕು, ಮಧ್ಯಮ ಪ್ರಮಾಣದ ಸರಕು, ನಿರ್ಮಾಣ, ಗ್ರಾಹಕ ಸರಕುಗಳ ಉತ್ಪಾದನಾ ಪ್ರಮಾಣ ಹಿಂದಿನ ಸಾಲಿನಲ್ಲಿ ಕಡಿಮೆ ಇತ್ತು. ಆದರೆ ಈಗ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡಿದೆ. ಪ್ರಸ್ತುತ ಬಂಡವಾಳ ಸರಕುಗಳ ಉತ್ಪಾದನೆ ಪ್ರಮಾಣದಲ್ಲಿ ಶೇ.9.4, ಹಾಗೂ ನಿರ್ಮಾಣ ಸರಕುಗಳ ಉತ್ಪಾದನೆಯಲ್ಲಿ ಶೇ.13.5ರಷ್ಟು ಏರಿಕೆಯ ಸಹಕಾರದೊಂದಿ ಒಟ್ಟು ಉತ್ಪಾದನೆಯಲ್ಲಿ ಏರಿಕೆ ಕಂಡುಬಂದಿದೆ ಎಂದು ಆರ್ಥಿಕ ತಜ್ಞರು ತಿಳಿಸಿದ್ದಾರೆ.

 

  • Share On Facebook
  • Tweet It


- Advertisement -


Trending Now
ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
Tulunadu News May 27, 2023
ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
Tulunadu News May 25, 2023
Leave A Reply

  • Recent Posts

    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
    • ಕಾಂಗ್ರೆಸ್ ಬಾಯಿಗೆ ಬಂದ ತುತ್ತನ್ನು ಮೈಮೇಲೆ ಚೆಲ್ಲಿಕೊಂಡಿದೆ!!
    • ಕಾಂಗ್ರೆಸ್ಸಿಗರೇ ಕ್ಯಾಲ್ಕುಲೇಟರ್ ನಲ್ಲಿ ಲೆಕ್ಕ ಹಾಕಿ ಘೋಷಣೆ ಕೂಗಿ!!
  • Popular Posts

    • 1
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 2
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search