• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಿಎಸ್ಟಿ ತೆಗಳಿದವರಿಗೆ ಕಹಿ ಸುದ್ದಿ, ಕಾರ್ಖಾನೆ ಉತ್ಪಾದನೆ 8.4ಕ್ಕೆ ಏರಿಕೆ

TNN Correspondent Posted On January 17, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏನೇ ನಿರ್ಧಾರ ಕೈಗೊಂಡರು, ಯಾವುದೇ ಯೋಜನೆ ಜಾರಿಗೊಳಿಸಿದರೂ ದೂರುವವರು, ತೆಗಳುವವರು ಎಂದಿಗೂ ಇದ್ದಾರೆ. ದೇಶದ ತೆರಿಗೆ ಸುಧಾರಣೆಗಾಗಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಳಿಸಿದಾಗಲೂ ಇದೇ ರೀತಿ ವಿರೋಧ ವ್ಯಕ್ತವಾಗಿತ್ತು.

ಅಲ್ಲದೆ, ದೇಶದ ವಿತ್ತೀಯ ವ್ಯವಸ್ಥೆ ಹಾಳಾಯಿತು, ಬಡವರಿಗೆ, ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಬಿತ್ತು, ಉದ್ಯಮಿಗಳಿಗೆ ನಷ್ಟವಾಗುತ್ತದೆ ಎಂದೆಲ್ಲ ಟೀಕಿಸಿದ್ದರು. ಆದರೂ ಜಿಎಸ್ಟಿ ಮಾತ್ರ ಆರ್ಥಿಕ ವ್ಯವಸ್ಥೆಗೆ ಧಕ್ಕೆ ತಂದಿಲ್ಲ ಎಂಬುದು ಸಾಬೀತಾಗಿದೆ.

ಹೌದು, ಕೈಗಾರಿಕೆ ಉತ್ಪಾದನೆ ಸೂಚ್ಯಂಕ (ಐಐಪಿ) ನೀಡಿದ ವರದಿ ಪ್ರಕಾರ 2017ರ ನವೆಂಬರ್ ನಲ್ಲಿ ಭಾರತದಲ್ಲಿರುವ ಕೈಗಾರಿಕೆಗಳ ಉತ್ಪಾದನೆ ಪ್ರಮಾಣ ಶೇ.8.4ಕ್ಕೆ ಏರಿಕೆ ಕಂಡಿದೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆ ಕಳೆದ ಎರಡು ವರ್ಷಗಳಲ್ಲೇ ಅಧಿಕ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅಪಾರ ಮೊತ್ತದ ಬಂಡವಾಳ ಸರಕು, ಮಧ್ಯಮ ಪ್ರಮಾಣದ ಸರಕು, ನಿರ್ಮಾಣ, ಗ್ರಾಹಕ ಸರಕುಗಳ ಉತ್ಪಾದನಾ ಪ್ರಮಾಣ ಹಿಂದಿನ ಸಾಲಿನಲ್ಲಿ ಕಡಿಮೆ ಇತ್ತು. ಆದರೆ ಈಗ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡಿದೆ. ಪ್ರಸ್ತುತ ಬಂಡವಾಳ ಸರಕುಗಳ ಉತ್ಪಾದನೆ ಪ್ರಮಾಣದಲ್ಲಿ ಶೇ.9.4, ಹಾಗೂ ನಿರ್ಮಾಣ ಸರಕುಗಳ ಉತ್ಪಾದನೆಯಲ್ಲಿ ಶೇ.13.5ರಷ್ಟು ಏರಿಕೆಯ ಸಹಕಾರದೊಂದಿ ಒಟ್ಟು ಉತ್ಪಾದನೆಯಲ್ಲಿ ಏರಿಕೆ ಕಂಡುಬಂದಿದೆ ಎಂದು ಆರ್ಥಿಕ ತಜ್ಞರು ತಿಳಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search