• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಸ್ಟಿಸ್ ಲೋಯಾ ಸಾವಿಗೆ ಹೃದಯಾಘಾತ ಕಾರಣ: ನಾಗಪುರ ಪೊಲೀಸ್

TNN Correspondent Posted On January 18, 2018


  • Share On Facebook
  • Tweet It

ನಾಗಪುರ: ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಕುರಿತು ವಿಚಾರಣೆ ನಡೆಸುತ್ತಿದ್ದ ಜಸ್ಟಿಸ್ ಲೋಯಾ ಸಾವಿನಲ್ಲಿ ವಿನಾಕಾರಣ ಅನುಮಾನಗಳನ್ನು ಹುಟ್ಟು ಹಾಕಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಹಣಿಯಲು ಯತ್ನಿಸುತ್ತಿರುವ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಿಗೆ ಇತ್ತೀಚೆಗೆ ಲೋಯಾ ಪುತ್ರ ತಕ್ಕ ಉತ್ತರ ನೀಡಿದ್ದರು. ಇದೀಗ ಲೋಯಾ ಸಾವಿನ ಕುರಿತು ತನಿಖೆ ನಡೆಸಿರುವ ಪೊಲೀಸರು ಕೂಡ ಸ್ಪಷ್ಟನೆ ನೀಡಿದ್ದಾರೆ.

ಜಸ್ಟಿಸ್ ಲೋಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರ ಸಾವಿನ ಹಿಂದೆ ಯಾವುದೆ ಸಂಚು ನಡೆದಿಲ್ಲ. ವೈದ್ಯಕೀಯ ವರದಿಯಲ್ಲಿ ಲೋಯಾ ಸಾವಿಗೆ ಹೃದಯಾಘಾತ ಕಾರಣ ಎಂಬುದು ತಿಳಿದು ಬಂದಿದೆ ಎಂದು ತನಿಖೆ ನಡೆಸಿರುವ ನಾಗಪುರ ಜಂಟಿ ಪೊಲೀಸ್ ಆಯುಕ್ತ ಶಿವಾಜಿ ಬೋಡ್ಕೆ ಸ್ಪಷ್ಟಪಡಿಸಿದ್ದಾರೆ.

ಲೋಯಾ ಸಾವಿನ ಕುರಿತು ಎದ್ದಿರುವ ಹಲವು ಪ್ರಶ್ನೆಗಳಿಗೆ, ಆರೋಪಗಳ ಕುರಿತು ಸ್ಪಷ್ಟನೆ ನೀಡಲು ಸುದ್ದಿಗೋಷ್ಠಿ ನಡೆಸಿದ ನಾಗಪುರ ಜಂಟಿ ಪೊಲೀಸ್ ಆಯುಕ್ತ ಶಿವಾಜಿ ಬೋಡ್ಕೆ, ವೈದ್ಯಕೀಯ ವರದಿ ಮತ್ತು ಫೋರೆನಿಕ್ಸ್ ವರದಿ ಪ್ರಕಾರ ಲೋಯಾ ಸಾವಿಗೆ ಹೃದಯಾಘಾತ ಕಾರಣ ಎಂಬುದು ಸಾಬೀತಾಗಿದೆ. ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದ್ದಾರೆ.

ವೈದ್ಯಕೀಯ ವರದಿಯಲ್ಲಿ ಲೋಯಾ ದೇಹದಲ್ಲಿ ಯಾವುದೇ ರೀತಿಯ ಗಾಯಗಳಾಗಲಿ, ಗುರುತುಗಳಾಗಲಿ, ಮತ್ತು ದೇಹದಲ್ಲಿ ವಿಷ ಪದಾರ್ಥಗಳಾಗಲಿ ಕಂಡು ಬಂದಿಲ್ಲ. ಕೊಲೆ ಆಗಿದೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ ಎಂದು ತಿಳಿಸಿದ್ದಾರೆ.

ನಾಗಪುರದಲ್ಲಿ 2014 ಡಿಸೆಂಬರ್ 1 ರಂದು ಜಸ್ಟಿಸ್ ಲೋಯಾ ಸಹೋದ್ಯೋಗಿಯ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ಹೃದಯಾಘಾತಕ್ಕೆ ಒಳಗಾಗಿ, ಮೃತಪಟ್ಟಿದ್ದರು. ಇನ್ನು ಇತ್ತೀಚೆಗೆ ಲೋಯಾ ಪುತ್ರ ಅನುಜ್ ಲೋಯಾ ಕೂಡ ಸ್ಪಷ್ಟನೆ ನೀಡಿ, ನಮ್ಮ ತಂದೆಯದ್ದೂ ಸಹಜ ಸಾವು. ನಮ್ಮ ಕುಟುಂಬಕ್ಕೆ ತೊಂದರೆ ಕೊಡಬೇಡಿ ಎಂದು  ಬೇಡಿಕೊಂಡಿದ್ದರು. ಆದರೆ ಇಷ್ಟೇಲ್ಲಾ ಸಾಕ್ಷಿ ಸಮೇತ ಹೇಳಿಕೆ ಬಂದರೂ ವಿರೋಧ ಪಕ್ಷಗಳು ಲೋಯಾ ಸಾವಿನ ಕುರಿತು ಅನುಮಾನವ ವ್ಯಕ್ತಪಡಿಸುವುದನ್ನು ಮುಂದುವರಿಸಿವೆ.

  • Share On Facebook
  • Tweet It


- Advertisement -


Trending Now
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
Tulunadu News June 24, 2022
Leave A Reply

  • Recent Posts

    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
    • ಪಚ್ಚನಾಡಿಯ ದಲಿತರ ಜಾಗದಲ್ಲಿ ಕಟ್ಟಿದ ಮನೆಗಳಿಗೆ ಯಾರು ಗತಿ!
  • Popular Posts

    • 1
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 2
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 3
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 4
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • 5
      ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search