• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಸ್ಟಿಸ್ ಲೋಯಾ ಸಾವಿಗೆ ಹೃದಯಾಘಾತ ಕಾರಣ: ನಾಗಪುರ ಪೊಲೀಸ್

TNN Correspondent Posted On January 18, 2018
0


0
Shares
  • Share On Facebook
  • Tweet It

ನಾಗಪುರ: ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಕುರಿತು ವಿಚಾರಣೆ ನಡೆಸುತ್ತಿದ್ದ ಜಸ್ಟಿಸ್ ಲೋಯಾ ಸಾವಿನಲ್ಲಿ ವಿನಾಕಾರಣ ಅನುಮಾನಗಳನ್ನು ಹುಟ್ಟು ಹಾಕಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಹಣಿಯಲು ಯತ್ನಿಸುತ್ತಿರುವ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಿಗೆ ಇತ್ತೀಚೆಗೆ ಲೋಯಾ ಪುತ್ರ ತಕ್ಕ ಉತ್ತರ ನೀಡಿದ್ದರು. ಇದೀಗ ಲೋಯಾ ಸಾವಿನ ಕುರಿತು ತನಿಖೆ ನಡೆಸಿರುವ ಪೊಲೀಸರು ಕೂಡ ಸ್ಪಷ್ಟನೆ ನೀಡಿದ್ದಾರೆ.

ಜಸ್ಟಿಸ್ ಲೋಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರ ಸಾವಿನ ಹಿಂದೆ ಯಾವುದೆ ಸಂಚು ನಡೆದಿಲ್ಲ. ವೈದ್ಯಕೀಯ ವರದಿಯಲ್ಲಿ ಲೋಯಾ ಸಾವಿಗೆ ಹೃದಯಾಘಾತ ಕಾರಣ ಎಂಬುದು ತಿಳಿದು ಬಂದಿದೆ ಎಂದು ತನಿಖೆ ನಡೆಸಿರುವ ನಾಗಪುರ ಜಂಟಿ ಪೊಲೀಸ್ ಆಯುಕ್ತ ಶಿವಾಜಿ ಬೋಡ್ಕೆ ಸ್ಪಷ್ಟಪಡಿಸಿದ್ದಾರೆ.

ಲೋಯಾ ಸಾವಿನ ಕುರಿತು ಎದ್ದಿರುವ ಹಲವು ಪ್ರಶ್ನೆಗಳಿಗೆ, ಆರೋಪಗಳ ಕುರಿತು ಸ್ಪಷ್ಟನೆ ನೀಡಲು ಸುದ್ದಿಗೋಷ್ಠಿ ನಡೆಸಿದ ನಾಗಪುರ ಜಂಟಿ ಪೊಲೀಸ್ ಆಯುಕ್ತ ಶಿವಾಜಿ ಬೋಡ್ಕೆ, ವೈದ್ಯಕೀಯ ವರದಿ ಮತ್ತು ಫೋರೆನಿಕ್ಸ್ ವರದಿ ಪ್ರಕಾರ ಲೋಯಾ ಸಾವಿಗೆ ಹೃದಯಾಘಾತ ಕಾರಣ ಎಂಬುದು ಸಾಬೀತಾಗಿದೆ. ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದ್ದಾರೆ.

ವೈದ್ಯಕೀಯ ವರದಿಯಲ್ಲಿ ಲೋಯಾ ದೇಹದಲ್ಲಿ ಯಾವುದೇ ರೀತಿಯ ಗಾಯಗಳಾಗಲಿ, ಗುರುತುಗಳಾಗಲಿ, ಮತ್ತು ದೇಹದಲ್ಲಿ ವಿಷ ಪದಾರ್ಥಗಳಾಗಲಿ ಕಂಡು ಬಂದಿಲ್ಲ. ಕೊಲೆ ಆಗಿದೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ ಎಂದು ತಿಳಿಸಿದ್ದಾರೆ.

ನಾಗಪುರದಲ್ಲಿ 2014 ಡಿಸೆಂಬರ್ 1 ರಂದು ಜಸ್ಟಿಸ್ ಲೋಯಾ ಸಹೋದ್ಯೋಗಿಯ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ಹೃದಯಾಘಾತಕ್ಕೆ ಒಳಗಾಗಿ, ಮೃತಪಟ್ಟಿದ್ದರು. ಇನ್ನು ಇತ್ತೀಚೆಗೆ ಲೋಯಾ ಪುತ್ರ ಅನುಜ್ ಲೋಯಾ ಕೂಡ ಸ್ಪಷ್ಟನೆ ನೀಡಿ, ನಮ್ಮ ತಂದೆಯದ್ದೂ ಸಹಜ ಸಾವು. ನಮ್ಮ ಕುಟುಂಬಕ್ಕೆ ತೊಂದರೆ ಕೊಡಬೇಡಿ ಎಂದು  ಬೇಡಿಕೊಂಡಿದ್ದರು. ಆದರೆ ಇಷ್ಟೇಲ್ಲಾ ಸಾಕ್ಷಿ ಸಮೇತ ಹೇಳಿಕೆ ಬಂದರೂ ವಿರೋಧ ಪಕ್ಷಗಳು ಲೋಯಾ ಸಾವಿನ ಕುರಿತು ಅನುಮಾನವ ವ್ಯಕ್ತಪಡಿಸುವುದನ್ನು ಮುಂದುವರಿಸಿವೆ.

0
Shares
  • Share On Facebook
  • Tweet It




Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 3
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search