• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

14 ವರ್ಷದ ಬಾಲಕಿ ಅಪಹರಣ, ಇಸ್ಲಾಮಿಗೆ ಮತಾಂತರ, 4 ವರ್ಷದ ಬಳಿಕ ತಪ್ಪಿಸಿಕೊಂಡ ಆಕೆಯ ಗೋಳು ಹೇಳತೀರದು…

TNN Correspondent Posted On January 18, 2018


  • Share On Facebook
  • Tweet It

ಭೋಪಾಲ್: ದೇಶದಲ್ಲಿ ದಿನೇದಿನೆ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಪ್ರಕರಣಗಳು ಜನರನ್ನು ದಂಗುಬಡಿಸುತ್ತಿರುವ ಬೆನ್ನಲ್ಲೇ ಮತ್ತೊಂದು ಲವ್ ಜಿಹಾದ್ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶದ ಶಾಜಾಪುರದಲ್ಲಿ ಘಟನೆ ನಡೆದಿದ್ದು, 2013ರಲ್ಲಿ ಆಸಿಫ್ ಎಂಬ ವ್ಯಕ್ತಿ ರಾಜಾ ಎಂದು ಹೆಸರು ಬದಲಾಯಿಸಿಕೊಂಡು ಶಾಜಾಪುರಕ್ಕೆ ಬಂದು ಟೀ ಅಂಗಡಿ ಇಟ್ಟಿದ್ದ. ಟೀ ಮಾರಿಕೊಂಡಿರದೆ ಬಾಲಕಿಯೊಬ್ಬಳಿಗೆ ದಿನಾಲೂ ಪೀಡಿಸಿ, ಮಾತುಕತೆ ನಡೆಸುತ್ತಿದ್ದ. ಅಲ್ಲದೆ ಆಕೆಗೆ ಹೊಸ ಬಟ್ಟೆ ಕೊಡಿಸಿ ಮರಳು ಮಾಡಿದ್ದ ಎಂದು ತಿಳಿದುಬಂದಿದೆ.

ಅದಾದ ನಂತರ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರಗೈದಿದ್ದ. ಅಲ್ಲದೆ ಬಲವಂತವಾಗಿ ಇಸ್ಲಾಮಿಗೆ ಮತಾಂತರಗೊಳಿಸಿದ್ದ, ಅದೂ ಅಲ್ಲದೆ ಬಾಲಕಿ ಕೈ ಮೇಲಿದ್ದ ಓಂ ಅಕ್ಷರವನ್ನು ಆ್ಯಸಿಡ್ ಹಾಕಿ ಸುಟ್ಟಿದ್ದ ಎಂಬ ಕರಾಳ ಸತ್ಯ ಹೊರಬಿದ್ದಿದೆ.

ಅದಾಗಲೇ ಆಸಿಫ್ ಗೆ ಮದುವೆಯಾಗಿದ್ದು ಮಕ್ಕಳು ಸಹ ಇವೆ ಎಂದು ಮೂಲಗಳು ತಿಳಿಸಿವೆ. ಇಷ್ಟಾದರೂ ಬಾಲಕಿಯನ್ನು ಅಪಹರಿಸಿ ಆಯೇಷಾ ಎಂದು ಹೆಸರು ಬದಲಾಯಿಸಿದ್ದ. 2 ವರ್ಷದ ಹಿಂದೆ ಬಾಲಕಿಗೆ ಮಗು ಸಹ ಆಗಿದೆ ಎಂದು ತಿಳಿದುಬಂದಿದೆ.

ಕೊನೆಗೂ ಎಚ್ಚೆತ್ತುಕೊಂಡ ಬಾಲಕಿ ಬಟ್ಟೆ ಹೊಲೆಸಿಕೊಂಡು ಬರುತ್ತೇನೆ ಎಂದು ಹೊರಬಂದು ತಪ್ಪಿಸಿಕೊಂಡಿದ್ದಾಳೆ. ಬಾಲಕಿ ಈಗ ಪೋಷಕರ ಬಳಿಯಿದ್ದು, ಆಸಿಫ್ ನೀಡಿದ ನೀಡಿದ ಕಿರುಕುಳದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಹಿಂದೂ ಸಂಘಟನೆಗಳ ಮುಖಂಡರು ಜಿಲ್ಲಾ ವರಿಷ್ಠಾಧಿಕಾರಿ ಶೈಲೇಂದ್ರ ಸಿಂಗ್ ಅವರಿಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಯನ್ವಯ ಹಾಗೂ ಅಪಹರಣ ಕುರಿತು ಪ್ರಕರಣ ದಾಖಲಿಸಲಾಗಿದೆ. ದೇವಾಸ್ ಪೊಲೀಸರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
Tulunadu News October 3, 2023
ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
Tulunadu News October 2, 2023
Leave A Reply

  • Recent Posts

    • ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
    • ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
    • ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
    • ಶಿವಮೊಗ್ಗದಲ್ಲಿ ಬಹಿರಂಗ ತಲ್ವಾರ್ ಪ್ರದರ್ಶನ, ಭಯ ಉತ್ಪಾದಕ ಕೃತ್ಯ!
    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
  • Popular Posts

    • 1
      ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
    • 2
      ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
    • 3
      ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
    • 4
      ಶಿವಮೊಗ್ಗದಲ್ಲಿ ಬಹಿರಂಗ ತಲ್ವಾರ್ ಪ್ರದರ್ಶನ, ಭಯ ಉತ್ಪಾದಕ ಕೃತ್ಯ!
    • 5
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search