• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

14 ವರ್ಷದ ಬಾಲಕಿ ಅಪಹರಣ, ಇಸ್ಲಾಮಿಗೆ ಮತಾಂತರ, 4 ವರ್ಷದ ಬಳಿಕ ತಪ್ಪಿಸಿಕೊಂಡ ಆಕೆಯ ಗೋಳು ಹೇಳತೀರದು…

TNN Correspondent Posted On January 18, 2018


  • Share On Facebook
  • Tweet It

ಭೋಪಾಲ್: ದೇಶದಲ್ಲಿ ದಿನೇದಿನೆ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಪ್ರಕರಣಗಳು ಜನರನ್ನು ದಂಗುಬಡಿಸುತ್ತಿರುವ ಬೆನ್ನಲ್ಲೇ ಮತ್ತೊಂದು ಲವ್ ಜಿಹಾದ್ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶದ ಶಾಜಾಪುರದಲ್ಲಿ ಘಟನೆ ನಡೆದಿದ್ದು, 2013ರಲ್ಲಿ ಆಸಿಫ್ ಎಂಬ ವ್ಯಕ್ತಿ ರಾಜಾ ಎಂದು ಹೆಸರು ಬದಲಾಯಿಸಿಕೊಂಡು ಶಾಜಾಪುರಕ್ಕೆ ಬಂದು ಟೀ ಅಂಗಡಿ ಇಟ್ಟಿದ್ದ. ಟೀ ಮಾರಿಕೊಂಡಿರದೆ ಬಾಲಕಿಯೊಬ್ಬಳಿಗೆ ದಿನಾಲೂ ಪೀಡಿಸಿ, ಮಾತುಕತೆ ನಡೆಸುತ್ತಿದ್ದ. ಅಲ್ಲದೆ ಆಕೆಗೆ ಹೊಸ ಬಟ್ಟೆ ಕೊಡಿಸಿ ಮರಳು ಮಾಡಿದ್ದ ಎಂದು ತಿಳಿದುಬಂದಿದೆ.

ಅದಾದ ನಂತರ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರಗೈದಿದ್ದ. ಅಲ್ಲದೆ ಬಲವಂತವಾಗಿ ಇಸ್ಲಾಮಿಗೆ ಮತಾಂತರಗೊಳಿಸಿದ್ದ, ಅದೂ ಅಲ್ಲದೆ ಬಾಲಕಿ ಕೈ ಮೇಲಿದ್ದ ಓಂ ಅಕ್ಷರವನ್ನು ಆ್ಯಸಿಡ್ ಹಾಕಿ ಸುಟ್ಟಿದ್ದ ಎಂಬ ಕರಾಳ ಸತ್ಯ ಹೊರಬಿದ್ದಿದೆ.

ಅದಾಗಲೇ ಆಸಿಫ್ ಗೆ ಮದುವೆಯಾಗಿದ್ದು ಮಕ್ಕಳು ಸಹ ಇವೆ ಎಂದು ಮೂಲಗಳು ತಿಳಿಸಿವೆ. ಇಷ್ಟಾದರೂ ಬಾಲಕಿಯನ್ನು ಅಪಹರಿಸಿ ಆಯೇಷಾ ಎಂದು ಹೆಸರು ಬದಲಾಯಿಸಿದ್ದ. 2 ವರ್ಷದ ಹಿಂದೆ ಬಾಲಕಿಗೆ ಮಗು ಸಹ ಆಗಿದೆ ಎಂದು ತಿಳಿದುಬಂದಿದೆ.

ಕೊನೆಗೂ ಎಚ್ಚೆತ್ತುಕೊಂಡ ಬಾಲಕಿ ಬಟ್ಟೆ ಹೊಲೆಸಿಕೊಂಡು ಬರುತ್ತೇನೆ ಎಂದು ಹೊರಬಂದು ತಪ್ಪಿಸಿಕೊಂಡಿದ್ದಾಳೆ. ಬಾಲಕಿ ಈಗ ಪೋಷಕರ ಬಳಿಯಿದ್ದು, ಆಸಿಫ್ ನೀಡಿದ ನೀಡಿದ ಕಿರುಕುಳದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಹಿಂದೂ ಸಂಘಟನೆಗಳ ಮುಖಂಡರು ಜಿಲ್ಲಾ ವರಿಷ್ಠಾಧಿಕಾರಿ ಶೈಲೇಂದ್ರ ಸಿಂಗ್ ಅವರಿಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಯನ್ವಯ ಹಾಗೂ ಅಪಹರಣ ಕುರಿತು ಪ್ರಕರಣ ದಾಖಲಿಸಲಾಗಿದೆ. ದೇವಾಸ್ ಪೊಲೀಸರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search